• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸ್ಮೋಕ್ ಬಾಂಬ್ ಹಿಡಿದು ರಕ್ಷಣಾ ಸಚಿವರತ್ತ ನುಗ್ಗುತ್ತಿದ್ದರು – ಸಂಸದ ಹನುಮಾನ್

Tulunadu News Posted On December 15, 2023
0


0
Shares
  • Share On Facebook
  • Tweet It

ಲೋಕಸಭೆಯ ಅಧಿವೇಶನ ನಡೆಯುತ್ತಿರುವಾಗಲೇ ವಿಸಿಟರ್ ಗ್ಯಾಲರಿಯಿಂದ ಒಳಗೆ ನುಗ್ಗಿ ಸ್ಮೋಕ್ ಬಾಂಬ್ ಸಿಡಿಸಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ ಇಬ್ಬರನ್ನು ಅಲ್ಲಿದ್ದ ಸಂಸದರಾದ ನಳಿನ್ ಕುಮಾರ್ ಕಟೀಲ್, ಮುನಿಸ್ವಾಮಿ ಸಹಿತ ಕೆಲವು ಸಂಸದರು ಹಿಡಿದಿರುವುದು ಎಲ್ಲರಿಗೂ ಗೊತ್ತಿರುವ ವಿಷಯ. ಒಂದು ವೇಳೆ ಆಗಂತುಕರ ಕೈಯಲ್ಲಿ ಗನ್ ಇದ್ದರೂ ತಾನು ಅವರನ್ನು ಹಿಡಿಯುತ್ತಿದ್ದೆ ಎಂದು ರಾಷ್ಟ್ರೀಯ ಲೋಕತಾಂತ್ರಿಕ ಪಾರ್ಟಿಯ ಸಂಸದ ಹನುಮಾನ್ ಬೆನಿವಾಲ್ ಅವರು ಹೇಳಿದ್ದಾರೆ.

ಒಳಗೆ ನುಗ್ಗಿದ ಇಬ್ಬರು ಯುವಕರನ್ನು ಸೆರೆಹಿಡಿಯುವಲ್ಲಿ ಹನುಮಾನ್ ಬೆನಿವಾಲ್ ಕೂಡ ಪ್ರಮುಖ ಪಾತ್ರ ವಹಿಸಿದ್ದರು. ಸ್ಮೋಕ್ ಬಾಂಬ್ ಹಿಡಿದು ಸದನದಲ್ಲಿ ನೆಗೆಯುತ್ತಿದ್ದ ಮನೋರಂಜನ್ ಹಾಗೂ ಸಾಗರ್ ಶರ್ಮಾ ಅವರನ್ನು ಹಿಡಿದು ಕೆಲವು ಸಂಸದರು ತಕ್ಕ ಶಾಸ್ತ್ರಿ ಮಾಡಿದ್ದರು. ಸ್ಮೋಕ್ ಬಾಂಬ್ ಆದ ಕಾರಣ ಅಂತಹ ದೊಡ್ಡ ಅಪಾಯ ಸಂಭವಿಸಿರಲಿಲ್ಲ. ಆದರೆ ಒಂದು ವೇಳೆ ಗನ್ ಹಿಡಿದು ಒಳಗೆ ನುಗ್ಗುತ್ತಿದ್ದರೂ ತಾನು ಹಿಡಿದು ಹಾಕುತ್ತಿದ್ದೆ ಎಂದು ಹನುಮಾನ್ ಬೆನಿವಾಲ್ ಹೇಳಿ ತಮ್ಮ ಸಹಸಂಸದರಲ್ಲಿ ಧೈರ್ಯ ತುಂಬಿದ್ದಾರೆ.

ಇದೇ ಸಂದರ್ಭದಲ್ಲಿ ಇನ್ನೊಂದು ಆಘಾತಕಾರಿ ಸುದ್ದಿಯನ್ನು ಕೂಡ ಸಂಸದ ಹನುಮಾನ್ ಹೊರಹಾಕಿದ್ದು, ಕೈಯಲ್ಲಿ ಸ್ಮೋಕ್ ಬಾಂಬ್ ಹಿಡಿದಿದ್ದ ಆರೋಪಿಗಳು ನಮ್ಮ ರಕ್ಷಣಾ ಸಚಿವರತ್ತ ಧಾವಿಸುತ್ತಿದ್ದರು. ಅವರ ಉದ್ದೇಶ ಏನಾಗಿತ್ತು ಎನ್ನುವುದು ಕೂಡ ತನಿಖೆಯಿಂದ ಪತ್ತೆಹಚ್ಚಬೇಕಾಗಿದೆ ಎಂದು ಹೇಳಿದ್ದಾರೆ. ಈ ಮಧ್ಯೆ ಲೋಕಸಭಾ ಸೆಕ್ರೆಟರಿಯವರು ರಕ್ಷಣಾ ವ್ಯವಸ್ಥೆಯಲ್ಲಿ ಆಗಿರುವ ಲೋಪದ ವಿಚಾರಣೆಯ ಅಂಗವಾಗಿ ಈಗಾಗಲೇ ಏಳು ಜನರನ್ನು ಅಮಾನತುಗೊಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!

  • Privacy Policy
  • Contact
© Tulunadu Infomedia.

Press enter/return to begin your search