• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸ್ಮೋಕ್ ಬಾಂಬ್ ಹಿಡಿದು ರಕ್ಷಣಾ ಸಚಿವರತ್ತ ನುಗ್ಗುತ್ತಿದ್ದರು – ಸಂಸದ ಹನುಮಾನ್

Tulunadu News Posted On December 15, 2023
0


0
Shares
  • Share On Facebook
  • Tweet It

ಲೋಕಸಭೆಯ ಅಧಿವೇಶನ ನಡೆಯುತ್ತಿರುವಾಗಲೇ ವಿಸಿಟರ್ ಗ್ಯಾಲರಿಯಿಂದ ಒಳಗೆ ನುಗ್ಗಿ ಸ್ಮೋಕ್ ಬಾಂಬ್ ಸಿಡಿಸಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ ಇಬ್ಬರನ್ನು ಅಲ್ಲಿದ್ದ ಸಂಸದರಾದ ನಳಿನ್ ಕುಮಾರ್ ಕಟೀಲ್, ಮುನಿಸ್ವಾಮಿ ಸಹಿತ ಕೆಲವು ಸಂಸದರು ಹಿಡಿದಿರುವುದು ಎಲ್ಲರಿಗೂ ಗೊತ್ತಿರುವ ವಿಷಯ. ಒಂದು ವೇಳೆ ಆಗಂತುಕರ ಕೈಯಲ್ಲಿ ಗನ್ ಇದ್ದರೂ ತಾನು ಅವರನ್ನು ಹಿಡಿಯುತ್ತಿದ್ದೆ ಎಂದು ರಾಷ್ಟ್ರೀಯ ಲೋಕತಾಂತ್ರಿಕ ಪಾರ್ಟಿಯ ಸಂಸದ ಹನುಮಾನ್ ಬೆನಿವಾಲ್ ಅವರು ಹೇಳಿದ್ದಾರೆ.

ಒಳಗೆ ನುಗ್ಗಿದ ಇಬ್ಬರು ಯುವಕರನ್ನು ಸೆರೆಹಿಡಿಯುವಲ್ಲಿ ಹನುಮಾನ್ ಬೆನಿವಾಲ್ ಕೂಡ ಪ್ರಮುಖ ಪಾತ್ರ ವಹಿಸಿದ್ದರು. ಸ್ಮೋಕ್ ಬಾಂಬ್ ಹಿಡಿದು ಸದನದಲ್ಲಿ ನೆಗೆಯುತ್ತಿದ್ದ ಮನೋರಂಜನ್ ಹಾಗೂ ಸಾಗರ್ ಶರ್ಮಾ ಅವರನ್ನು ಹಿಡಿದು ಕೆಲವು ಸಂಸದರು ತಕ್ಕ ಶಾಸ್ತ್ರಿ ಮಾಡಿದ್ದರು. ಸ್ಮೋಕ್ ಬಾಂಬ್ ಆದ ಕಾರಣ ಅಂತಹ ದೊಡ್ಡ ಅಪಾಯ ಸಂಭವಿಸಿರಲಿಲ್ಲ. ಆದರೆ ಒಂದು ವೇಳೆ ಗನ್ ಹಿಡಿದು ಒಳಗೆ ನುಗ್ಗುತ್ತಿದ್ದರೂ ತಾನು ಹಿಡಿದು ಹಾಕುತ್ತಿದ್ದೆ ಎಂದು ಹನುಮಾನ್ ಬೆನಿವಾಲ್ ಹೇಳಿ ತಮ್ಮ ಸಹಸಂಸದರಲ್ಲಿ ಧೈರ್ಯ ತುಂಬಿದ್ದಾರೆ.

ಇದೇ ಸಂದರ್ಭದಲ್ಲಿ ಇನ್ನೊಂದು ಆಘಾತಕಾರಿ ಸುದ್ದಿಯನ್ನು ಕೂಡ ಸಂಸದ ಹನುಮಾನ್ ಹೊರಹಾಕಿದ್ದು, ಕೈಯಲ್ಲಿ ಸ್ಮೋಕ್ ಬಾಂಬ್ ಹಿಡಿದಿದ್ದ ಆರೋಪಿಗಳು ನಮ್ಮ ರಕ್ಷಣಾ ಸಚಿವರತ್ತ ಧಾವಿಸುತ್ತಿದ್ದರು. ಅವರ ಉದ್ದೇಶ ಏನಾಗಿತ್ತು ಎನ್ನುವುದು ಕೂಡ ತನಿಖೆಯಿಂದ ಪತ್ತೆಹಚ್ಚಬೇಕಾಗಿದೆ ಎಂದು ಹೇಳಿದ್ದಾರೆ. ಈ ಮಧ್ಯೆ ಲೋಕಸಭಾ ಸೆಕ್ರೆಟರಿಯವರು ರಕ್ಷಣಾ ವ್ಯವಸ್ಥೆಯಲ್ಲಿ ಆಗಿರುವ ಲೋಪದ ವಿಚಾರಣೆಯ ಅಂಗವಾಗಿ ಈಗಾಗಲೇ ಏಳು ಜನರನ್ನು ಅಮಾನತುಗೊಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
Tulunadu News October 22, 2025
ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
Tulunadu News October 22, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
  • Popular Posts

    • 1
      ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • 2
      ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • 3
      ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search