• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುಟ್ಟಿಗೆ ವೇತನ ಸಹಿತ ರಜೆ ಬೇಕಿಲ್ಲ – ಸ್ಮೃತಿ ಇರಾನಿ

Tulunadu News Posted On December 15, 2023
0


0
Shares
  • Share On Facebook
  • Tweet It

ಮುಟ್ಟು ಎಂಬುದು ಅಂಗವೈಕಲ್ಯವಲ್ಲ. ಹೀಗಾಗಿ ಹೆಣ್ಣುಮಕ್ಕಳಿಗೆ ವೇತನ ಸಹಿತ ಮುಟ್ಟಿನ ರಜೆ ನೀಡುವ ಅಗತ್ಯವಿಲ್ಲ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಲೋಕಸಭಾ ಅಧಿವೇಶನದಲ್ಲಿ ಹೇಳಿದ್ದಾರೆ. ಕಾಂಗ್ರೆಸ್ ಸಂಸದ ಶಶಿ ತರೂರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಇರಾನಿ, ಎಲ್ಲಾ ಕೆಲಸದ ಸ್ಥಳಗಳಲ್ಲಿ ವೇತನ ಸಹಿತ ಮುಟ್ಟಿನ ರಜೆಯನ್ನು ಕಡ್ಡಾಯಗೊಳಿಸುವ ಯಾವುದೇ ಪ್ರಸ್ತಾವನೆಯೂ ಸರಕಾರದ ಪರಿಗಣನೆಯಲ್ಲಿಲ್ಲ ಎಂದಿದ್ದಾರೆ.

ಋತುಚಕ್ರವು ಮಹಿಳೆಯರ ಕೆಲಸಕ್ಕೆ ಎಂದೂ ಅಡ್ಡಿಯಾಗುವುದಿಲ್ಲ. ಅದು ಮಹಿಳೆಯರ ಜೀವನದ ಒಂದು ಭಾಗ ಹಾಗೂ ಸಹಜ ಪ್ರಕ್ರಿಯೆ ಎಂದು ಹೇಳಿದ ಸ್ಮೃತಿ ಇರಾನಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮುಟ್ಟಿನ ನೈರ್ಮಲ್ಯದ ಕರಡು ನೀತಿಯನ್ನು ಸಿದ್ಧಪಡಿಸಿದೆ ಎಂದರು. ಮಹಿಳೆಗೆ ಮುಟ್ಟು ಎಂದು ಜೀವನದ ಒಂದು ಪಯಣದ ಭಾಗ. ಅದು ಅವಳ ಕೆಲಸಕ್ಕೆ ಅಡ್ಡಿ ಮಾಡಿಲ್ಲ. ದುಡಿಯುವ ಮಹಿಳೆ ಮುಟ್ಟಿನ ಹೆಸರಿನಲ್ಲಿ ರಜೆ ಹಾಕುವುದು ಅರ್ಥಹೀನ, ಇದೀಗ ಮಹಿಳೆಗೂ ಸಮಾನ ಹಕ್ಕುಬೇಕೆಂದು ಹೋರಾಟ ನಡೆಯುತ್ತಿರುವ ಸಮಯದಲ್ಲಿ ಈ ರಜೆಯು ತಾರತಮ್ಯಕ್ಕೆ ಕಾರಣವಾಗಬಹುದು ಎಂದು ಹೇಳಿದ್ದಾರೆ.

ಕೇಂದ್ರ ಸಚಿವೆಯ ಈ ಹೇಳಿಕೆಯನ್ನು ಬಾಲಿವುಡ್ ನಟಿ ಕಂಗನಾ ರಾಣಾವತ್ ಕೂಡ ಬೆಂಬಲಿಸಿದ್ದಾರೆ. ಕಂಗನಾ ತನ್ನ ನಿಲುವು ಹಾಗೂ ಅಭಿಪ್ರಾಯವನ್ನು ಹೇಳಲು ಹಿಂಜರಿಯುವುದಿಲ್ಲ. ಮಹಿಳೆಯರು ಕೆಲಸ ಮಾಡದ ಕ್ಷೇತ್ರಗಳೇ ಇಲ್ಲ. ಹೊಲ, ಗದ್ದೆಗಳಲ್ಲಿ ಕೆಲಸ ಮಾಡುವುದರಿಂದ ಹಿಡಿದು ಮನೆಯನ್ನು, ಮಕ್ಕಳನ್ನು ನೋಡಿಕೊಳ್ಳುವವರೆಗೆ ಎಲ್ಲವನ್ನು ಆಕೆ ಮಾಡುತ್ತಾಳೆ ಎಂದಿದ್ದಾರೆ.

0
Shares
  • Share On Facebook
  • Tweet It




Trending Now
ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
Tulunadu News November 18, 2025
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
  • Popular Posts

    • 1
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search