• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸಾಮಾಜಿಕ ಕ್ರಾಂತಿಕಾರಿ ಪದ್ಮಶ್ರೀ ಫೂಲಬಸನ್ ಬಾಯಿ ಯಾದವ್ ಅವರಿಗೆ ಮಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ

Tulunadu News Posted On December 15, 2023
0


0
Shares
  • Share On Facebook
  • Tweet It

1969 ರಲ್ಲಿ ಕಟ್ಟಕಡು ಬಡತನದಲ್ಲಿ ಜನಿಸಿದ ಫೂಲಬಸನ್ ಬಾಯಿ ಯಾದವ್ ಅವರು ತನ್ನ ಹತ್ತನೇ ವಯಸ್ಸಿನಲ್ಲಿ ಬಾಲ್ಯವಿವಾಹಕ್ಕೆ ಒಳಗಾಗುತ್ತಾರೆ. ಏಳನೇ ತರಗತಿಯ ತನಕ ಮಾತ್ರ ಕಲಿತಿರುವ ಇವರು ತಾನು ಸಮಾಜದ ಕಟ್ಟಕಡೆಯ ಹೆಣ್ಣುಮಕ್ಕಳಿಗೂ ಯೋಗ್ಯ ಸ್ಥಾನಮಾನ ಸಿಗಬೇಕು ಎನ್ನುವ ಕಾರಣಕ್ಕೆ ಸಾಮಾಜಿಕ ಕ್ರಾಂತಿಗೆ ಪಣತೊಡುತ್ತಾರೆ. ಅದಕ್ಕಾಗಿ ಸ್ವಸಹಾಯ ಗುಂಪುಗಳನ್ನು ರಚಿಸುತ್ತಾರೆ. ತಮ್ಮದೇ ಗುಂಪು ರಚಿಸಿ ಬಡತನ ರೇಖೆಗಿಂತ ಕೆಳಗಿರುವ ಜನರಿಗೆ ರೇಶನ್ ವಿತರಿಸುವ ಅಂಗಡಿಗಳನ್ನು ತೆರೆಯುತ್ತಾರೆ. ಮಾ ಬಂಲೇಶ್ವರಿ ಜನಹಿತ ಕಾರ್ಯ ಸಮಿತಿ ಎನ್ನುವ ಸರಕಾರರೇತರ ಸಂಘಟನೆಯನ್ನು ರಚಿಸಿದ ಇವರ ನೇತೃತ್ವದಲ್ಲಿ ಸುಮಾರು 12000 ಸ್ವಸಹಾಯ ಗುಂಪುಗಳಿದ್ದು, ಅದರಲ್ಲಿ 8 ಲಕ್ಷ ಮಹಿಳಾ ಸದಸ್ಯರು ಇದ್ದಾರೆ. ಒಬ್ಬೊಬ್ಬರಿಂದ ತಲಾ 2 ರೂಪಾಯಿ ಸಂಗ್ರಹಿಸಿ ಈಗ ಈ ಸಂಘಟನೆಯ ಮೂಲನಿಧಿ 150 ಮಿಲಿಯನ್ ಆಗಿದೆ. ಈ ಸಂಘಟನೆ ಆರೋಗ್ಯ ಶಿಬಿರ, ಮಹಿಳಾ ಶಿಕ್ಷಣ,
ನೈರ್ಮಲೀಕರಣ, ಸ್ವಾವಲಂಬಿ ಉದ್ಯೋಗ, ಬಾಲ್ಯ ವಿವಾಹ ನಿಷೇಧ ಜಾಗೃತಿ ಕಾರ್ಯಕ್ರಮ, ಮಕ್ಕಳನ್ನು ದತ್ತು ಸ್ವೀಕರಿಸಿ ಪೋಷಣೆ ಸಹಿತ ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದೆ. ಈ ಸಂಘಟನೆಯ ಪಾನ ನಿಷೇಧ ಹೋರಾಟದ ಅಂಗವಾಗಿ ಛತ್ತೀಸಗಡದಲ್ಲಿ ಇಲ್ಲಿಯ ತನಕ 250 ಲಿಕ್ಕರ್ ಶಾಪುಗಳು ಮುಚ್ಚಲ್ಪಟ್ಟಿವೆ. ಬ್ರೂಣಹತ್ಯೆಯ ವಿರುದ್ಧ ಜಾಗೃತಿ ಮೂಡಿಸುವ ರಾಜಸ್ಥಾನ ಸರಕಾರದ ಅಭಿಯಾನಕ್ಕೆ ಈ ಸಂಘಟನೆ ರಾಯಭಾರಿಯಾಗಿದೆ.

ಫೂಲಬಸನ್ ಬಾಯಿ ಯಾದವ್ ಅವರು ಈ ಸಮಾಜಸೇವೆಯಲ್ಲಿ ತೊಡಗಿಸಿಕೊಂಡಾಗ ಅವರ ಹಾದಿ ಅಷ್ಟು ಸುಲಭದ್ದಾಗಿರಲಿಲ್ಲ. ಕೆಲಸ ಮುಗಿಸಿ ಮನೆಗೆ ತಡವಾಗಿ ಬಂದರೆ ಗಂಡನಿಂದ ಓದೆ ಬೀಳುತ್ತಿತ್ತು. ಆದರೆ ಮಹಿಳಾ ಶಕ್ತಿ ಸಮಾಜಕ್ಕೆ ತೋರಿಸುವ ಸಲುವಾಗಿ ಇವರು ಮಾಡಿದ ಪ್ರಯತ್ನದಿಂದ ಪುರುಷ ಪ್ರಧಾನ ವ್ಯವಸ್ಥೆಯಾಗಿದ್ದ ಗ್ರಾಮ ಪಂಚಾಯತ್ ಗಳಲ್ಲಿ ಮಹಿಳಾ ಸದಸ್ಯರು ಕೂಡ ಆಯ್ಕೆಯಾಗುವಂತಾಗಿರುವುದು ದೊಡ್ಡ ಮೈಲಿಗಲ್ಲು. ಚತ್ತೀಸಗಡ ಸರಕಾರದ ಜನನ ಸುರಕ್ಷಾ ಯೋಜನೆಯ ರಾಯಭಾರಿಯಾಗಿರುವ ಇವರಿಗೆ ರಾಷ್ಟ್ರೀಯ ಸಂಘಟನೆಗಳು, ಸಂಘ, ಸಂಸ್ಥೆಗಳು ಅನೇಕ ಪ್ರಶಸ್ತಿ ನೀಡಿ ಗೌರವಿಸಿವೆ.

ಭಾರತದ ಛತ್ತಿಸಗಡ್ ರಾಜ್ಯದಲ್ಲಿ ಮಹಿಳಾ ಸಬಲೀಕರಣದ ಕಠಿಣ ಹೆಜ್ಜೆಗಳ ಮೂಲಕ ದೇಶದಲ್ಲಿ ಕ್ರಾಂತಿ ಮಾಡಿ ಕೇಂದ್ರ ಸರಕಾರದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಫೂಲಬಸನ್ ಬಾಯಿ ಯಾದವ್ ಅವರಿಗೆ ಮಂಗಳೂರಿನಲ್ಲಿ ಡಿಸೆಂಬರ್ 24 ರಂದು ಕೊಡಿಯಾಲ್ ಬೈಲಿನಲ್ಲಿರುವ ಶಾರದಾ ವಿದ್ಯಾಲಯದಲ್ಲಿ ಒಂಭತ್ತನೆ ಮೂಲತ್ವ ವಿಶ್ವ ಅವಾರ್ಡ್ 2023 ನೀಡಿ ಸನ್ಮಾನಿಸುವ ಕಾರ್ಯ ನಡೆಯಲಿದೆ.

0
Shares
  • Share On Facebook
  • Tweet It




Trending Now
ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
Tulunadu News December 22, 2025
ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
Tulunadu News December 22, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
  • Popular Posts

    • 1
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 2
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • 3
      ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • 4
      ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • 5
      ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!

  • Privacy Policy
  • Contact
© Tulunadu Infomedia.

Press enter/return to begin your search