• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಡಿಕೆಶಿ ಔತಣಕೂಟಕ್ಕೆ ಹೋಗಿದ್ದೆ ಎಂದ ಬಿಜೆಪಿ ಶಾಸಕ!

Tulunadu News Posted On December 15, 2023
0


0
Shares
  • Share On Facebook
  • Tweet It

ಉಪಮುಖ್ಯಮಂತ್ರಿ ಹಾಗೂ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಬೆಳಗಾವಿಯಲ್ಲಿ ಕಾಂಗ್ರೆಸ್ ಶಾಸಕರಿಗೆ ಏರ್ಪಡಿಸಲಾಗಿದ್ದ ಔತಣಕೂಟದಲ್ಲಿ ಕಾಂಗ್ರೆಸ್ ಶಾಸಕರೊಂದಿಗೆ ಭಾರತೀಯ ಜನತಾ ಪಾರ್ಟಿಯ ಶಾಸಕರಾದ ಎಸ್ ಟಿ ಸೋಮಶೇಖರ್, ಶಿವರಾಮ್ ಹೆಬ್ಬಾರ್, ವಿಶ್ವನಾಥ್ ಅವರು ಭಾಗವಹಿಸಿದ್ದರು. ಈ ಕುರಿತು ಸ್ಪಷ್ಟನೆ ನೀಡಿರುವ ಸೋಮಶೇಖರ್ ಅವರು ಉಪಮುಖ್ಯಮಂತ್ರಿಯವರು ಕರೆದ ಶಾಸಕಾಂಗ ಸಭೆಗೆ ಹೋಗಿಲ್ಲ. ಕೇವಲ ಔತಣಕೂಟಕ್ಕೆ ಮಾತ್ರ ಹೋಗಿದ್ದೇನೆ ಎಂದು ತಿಳಿಸಿದ್ದಾರೆ.

ಅದೇ ದಿನ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಆಯೋಜಿಸಿದ್ದ ಔತಣಕೂಟದಲ್ಲಿ ಭಾಗಿಯಾಗಿದ್ದೆ. ಶಿವಕುಮಾರ್ ಕೂಡ ಊಟಕ್ಕೆ ಆಹ್ವಾನಿಸಿದ್ದರು. ಹಾಗಾಗಿ ರಾತ್ರಿ 11 ಕ್ಕೆ ಹೋಗಿ ಶುಭಕೋರಿ ಬಂದೆ. ಮೈಸೂರು ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸುವಂತೆ ಒತ್ತಡವಿದೆ. ಆದರೆ ಬಿಜೆಪಿಗೆ ಯಾವುದೇ ತರಹದ ಮುಜುಗರವಾಗುವಂತಹ ಕೆಲಸ ಮಾಡಲ್ಲ ಎಂದು ಹೇಳಿದರು.

ಬಿಜೆಪಿಯ ಶಾಸಕರು ಕಾಂಗ್ರೆಸ್ ಔತಣಕೂಟದಲ್ಲಿ ಭಾಗಿಯಾಗುವುದನ್ನು ಅಶೋಕ್ ಹಾಗೂ ವಿಜಯೇಂದ್ರ ಬೇರೆ ಬೇರೆ ರೀತಿಯಲ್ಲಿ ಸ್ವೀಕರಿಸಿದಂತಿದೆ. ವಿಜಯೇಂದ್ರ ಅವರು ಇಂತಹ ಬೆಳವಣಿಗೆಯನ್ನು ಗಂಭೀರವಾಗಿ ತೆಗೆದುಕೊಳ್ಳಬೇಕಾದ ಅವಶ್ಯಕತೆ ಇದೆ ಎಂದು ಹೇಳಿದ್ದರೆ, ಅಶೋಕ್ ಅವರು ಕರೆದು ಮಾತನಾಡಿದ್ದೇನೆ. ಏನೂ ಆಗಲ್ಲ ಎಂದು ಹಗುರವಾಗಿ ವಿಷಯವನ್ನು ತೆಗೆದುಕೊಂಡಿದ್ದಾರೆ ಎನ್ನುವ ಮಾಹಿತಿ ಸಿಕ್ಕಿದೆ. ಸೋಮಶೇಖರ್ ಅವರು ಈ ಅಧಿವೇಶನದಲ್ಲಿ ವಿಪಕ್ಷ ಬಿಜೆಪಿ ಸದಸ್ಯರು ಸಭಾತ್ಯಾಗ ಮಾಡಿದಾಗಲೂ ಪಕ್ಷದೊಂದಿಗೆ ಕೈಜೋಡಿಸದೇ ಸದನದಲ್ಲಿಯೇ ಇದ್ದದ್ದನ್ನು ಇಲ್ಲಿ ಸ್ಮರಿಸಬಹುದು. ಈ ಕುರಿತು ಮತ್ತೊರ್ವ ಶಾಸಕ ಶಿವರಾಮ್ ಹೆಬ್ಬಾರ್ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ಬಿಜೆಪಿಯಿಂದ ಆಯ್ಕೆಯಾಗಿರುವ ವಿಧಾನಪರಿಷತ್ ಸದಸ್ಯ ವಿಶ್ವನಾಥ್ ಕಾಂಗ್ರೆಸ್ ಔತಣಕೂಟದಲ್ಲಿ ಭಾಗವಹಿಸಿರುವುದು ಬಿಜೆಪಿ ಮುಖಂಡರಿಗೆ ಆಶ್ಚರ್ಯ ತರುವ ಸಾಧ್ಯತೆ ಇಲ್ಲ.

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ

  • Privacy Policy
  • Contact
© Tulunadu Infomedia.

Press enter/return to begin your search