• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಡಿಕೆಶಿ ಔತಣಕೂಟಕ್ಕೆ ಹೋಗಿದ್ದೆ ಎಂದ ಬಿಜೆಪಿ ಶಾಸಕ!

Tulunadu News Posted On December 15, 2023
0


0
Shares
  • Share On Facebook
  • Tweet It

ಉಪಮುಖ್ಯಮಂತ್ರಿ ಹಾಗೂ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಬೆಳಗಾವಿಯಲ್ಲಿ ಕಾಂಗ್ರೆಸ್ ಶಾಸಕರಿಗೆ ಏರ್ಪಡಿಸಲಾಗಿದ್ದ ಔತಣಕೂಟದಲ್ಲಿ ಕಾಂಗ್ರೆಸ್ ಶಾಸಕರೊಂದಿಗೆ ಭಾರತೀಯ ಜನತಾ ಪಾರ್ಟಿಯ ಶಾಸಕರಾದ ಎಸ್ ಟಿ ಸೋಮಶೇಖರ್, ಶಿವರಾಮ್ ಹೆಬ್ಬಾರ್, ವಿಶ್ವನಾಥ್ ಅವರು ಭಾಗವಹಿಸಿದ್ದರು. ಈ ಕುರಿತು ಸ್ಪಷ್ಟನೆ ನೀಡಿರುವ ಸೋಮಶೇಖರ್ ಅವರು ಉಪಮುಖ್ಯಮಂತ್ರಿಯವರು ಕರೆದ ಶಾಸಕಾಂಗ ಸಭೆಗೆ ಹೋಗಿಲ್ಲ. ಕೇವಲ ಔತಣಕೂಟಕ್ಕೆ ಮಾತ್ರ ಹೋಗಿದ್ದೇನೆ ಎಂದು ತಿಳಿಸಿದ್ದಾರೆ.

ಅದೇ ದಿನ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಆಯೋಜಿಸಿದ್ದ ಔತಣಕೂಟದಲ್ಲಿ ಭಾಗಿಯಾಗಿದ್ದೆ. ಶಿವಕುಮಾರ್ ಕೂಡ ಊಟಕ್ಕೆ ಆಹ್ವಾನಿಸಿದ್ದರು. ಹಾಗಾಗಿ ರಾತ್ರಿ 11 ಕ್ಕೆ ಹೋಗಿ ಶುಭಕೋರಿ ಬಂದೆ. ಮೈಸೂರು ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸುವಂತೆ ಒತ್ತಡವಿದೆ. ಆದರೆ ಬಿಜೆಪಿಗೆ ಯಾವುದೇ ತರಹದ ಮುಜುಗರವಾಗುವಂತಹ ಕೆಲಸ ಮಾಡಲ್ಲ ಎಂದು ಹೇಳಿದರು.

ಬಿಜೆಪಿಯ ಶಾಸಕರು ಕಾಂಗ್ರೆಸ್ ಔತಣಕೂಟದಲ್ಲಿ ಭಾಗಿಯಾಗುವುದನ್ನು ಅಶೋಕ್ ಹಾಗೂ ವಿಜಯೇಂದ್ರ ಬೇರೆ ಬೇರೆ ರೀತಿಯಲ್ಲಿ ಸ್ವೀಕರಿಸಿದಂತಿದೆ. ವಿಜಯೇಂದ್ರ ಅವರು ಇಂತಹ ಬೆಳವಣಿಗೆಯನ್ನು ಗಂಭೀರವಾಗಿ ತೆಗೆದುಕೊಳ್ಳಬೇಕಾದ ಅವಶ್ಯಕತೆ ಇದೆ ಎಂದು ಹೇಳಿದ್ದರೆ, ಅಶೋಕ್ ಅವರು ಕರೆದು ಮಾತನಾಡಿದ್ದೇನೆ. ಏನೂ ಆಗಲ್ಲ ಎಂದು ಹಗುರವಾಗಿ ವಿಷಯವನ್ನು ತೆಗೆದುಕೊಂಡಿದ್ದಾರೆ ಎನ್ನುವ ಮಾಹಿತಿ ಸಿಕ್ಕಿದೆ. ಸೋಮಶೇಖರ್ ಅವರು ಈ ಅಧಿವೇಶನದಲ್ಲಿ ವಿಪಕ್ಷ ಬಿಜೆಪಿ ಸದಸ್ಯರು ಸಭಾತ್ಯಾಗ ಮಾಡಿದಾಗಲೂ ಪಕ್ಷದೊಂದಿಗೆ ಕೈಜೋಡಿಸದೇ ಸದನದಲ್ಲಿಯೇ ಇದ್ದದ್ದನ್ನು ಇಲ್ಲಿ ಸ್ಮರಿಸಬಹುದು. ಈ ಕುರಿತು ಮತ್ತೊರ್ವ ಶಾಸಕ ಶಿವರಾಮ್ ಹೆಬ್ಬಾರ್ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ಬಿಜೆಪಿಯಿಂದ ಆಯ್ಕೆಯಾಗಿರುವ ವಿಧಾನಪರಿಷತ್ ಸದಸ್ಯ ವಿಶ್ವನಾಥ್ ಕಾಂಗ್ರೆಸ್ ಔತಣಕೂಟದಲ್ಲಿ ಭಾಗವಹಿಸಿರುವುದು ಬಿಜೆಪಿ ಮುಖಂಡರಿಗೆ ಆಶ್ಚರ್ಯ ತರುವ ಸಾಧ್ಯತೆ ಇಲ್ಲ.

0
Shares
  • Share On Facebook
  • Tweet It




Trending Now
ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
Tulunadu News November 18, 2025
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
  • Popular Posts

    • 1
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search