• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೂರು ಸೋಲಿನ ಬಳಿಕ ದಕ್ಕುವುದೇ ಬಾಹುಬಲಿ ಯಶಸ್ಸು!

Tulunadu News Posted On December 16, 2023
0


0
Shares
  • Share On Facebook
  • Tweet It

ವರ್ಷದ ಕೊನೆಯ ಅತ್ಯಂತ ನಿರೀಕ್ಷಿತ ಸಿನೆಮಾ ಇದೇ ಡಿಸೆಂಬರ್ 22 ರಂದು ತೆರೆಗೆ ಅಪ್ಪಳಿಸಿದೆ. ಹಿಂದಿ, ತಮಿಳು, ತೆಲುಗು, ಕನ್ನಡ, ಮಲಯಾಳಂ ಭಾಷೆಗಳಲ್ಲಿ ಏಕಕಾಲಕ್ಕೆ ಸಿನೆಮಾ ಬಿಡುಗಡೆ ಕಾಣಲಿದೆ. ಬಾಹುಬಲಿಯ ಸೂಪರ್ ಹಿಟ್ ಕಲೆಕ್ಷನ್ ಬಳಿಕ ಪ್ರಭಾಸ್ ಅಭಿನಯಿಸಿದ ಸಾಹೋ, ರಾಧೆ ಶ್ಯಾಮ್, ಆದಿಪುರುಷ್ ಬಾಕ್ಸ್ ಆಫೀಸ್ ನಲ್ಲಿ ಏನೂ ಮ್ಯಾಜಿಕ್ ಮಾಡದೇ ಬಂದ ದಾರಿಗೆ ಸುಂಕವಿಲ್ಲದೇ ಕಳೆಗುಂದಿದ್ದವು. ಇಂತಹ ಕಾಲಘಟ್ಟದಲ್ಲಿ ಒಂದು ದೊಡ್ಡ ಯಶಸ್ಸು ಪ್ರಭಾಸ್ ಗೆ ಅನಿವಾರ್ಯವಾಗಿತ್ತು. ಹೀಗಿರುವಾಗ ಅವರು ಕೈಜೋಡಿಸಿದ್ದೇ ಪ್ರಶಾಂತ್ ನೀಲ್ ಜೊತೆಗೆ.

ಆದಾಗಲೇ ಪ್ರಶಾಂತ್ ನೀಲ್ ಕೆಜಿಎಫ್ 1 ಮತ್ತು 2 ಮಾಡಿ ಜಗತ್ತಿಗೆ ತಮ್ಮ ಹೆಸರನ್ನು ಸಾಬೀತುಪಡಿಸಿ ಆಗಿತ್ತು. ಪ್ರಭಾಸ್ ಮತ್ತು ಪ್ರಶಾಂತ್ ನೀಲ್ ಜೊತೆಯಾದರೆ ಬಾಹುಬಲಿ ಹಾಗೂ ಕೆಜಿಎಫ್ ಎರಡನ್ನು ಮೀರಿಸಿದ ಒಂದು ಸಿನೆಮಾ ಹೊರಬರಬಹುದು ಎಂದು ಹೊಂಬಾಳೆ ಬ್ಯಾನರಿಗೂ ಅನಿಸಿತ್ತು. ಹೀಗೆ ಕಾಂತಾರಾದ ಯಶಸ್ಸಿನ ಅಲೆಯಲ್ಲಿರುವ ಹೊಂಬಾಳೆ ಫಿಲಂಸ್ ಮತ್ತೆ ತೆರೆಯ ಮೇಲೆ ಹೊಸ ಫ್ಯಾಂಟಸಿ ಲೋಕವನ್ನು ಅನಾವರಣಗೊಳಿಸಲು ಸಜ್ಜಾಗಿದೆ. ಇದರ ಪರಿಣಾಮವೇ ಸಲಾರ್.

ಸಲಾರ್ ಅಡ್ವಾನ್ಸ್ ಟಿಕೆಟ್ ಬುಕ್ಕಿಂಗ್ ಒಪನ್!

ಇತ್ತೀಚಿಗಷ್ಟೇ ಸೆನ್ಸಾರ್ ಮಂಡಳಿಯಿಂದ ‘ಎ’ ಪ್ರಮಾಣ ಪತ್ರ ಪಡೆದಿರುವ ” ಸಲಾರ್ ಪಾರ್ಟ್ 1 – ಸೀಸ್ ಫೈರ್ ” ಚಿತ್ರವು ಎರಡು ಗಂಟೆ 55 ನಿಮಿಷ ಅವಧಿಯದ್ದಾಗಿದೆ. ಈ ಮೊದಲ ಭಾಗದಲ್ಲಿ ಪ್ರಭಾಸ್ ಜೊತೆ ಮಲಯಾಳಂ ನಾಯಕನಟ ಪೃಥ್ವಿರಾಜ್ ಸುಕುಮಾರನ್, ಶ್ರುತಿ ಹಾಸನ್, ಜಗಪತಿ ಬಾಬು ಮುಂತಾದವರು ನಟಿಸಿದ್ದು, ಚಿತ್ರಪ್ರೇಮಿಗಳ ಸಂಭ್ರಮಕ್ಕೆ ಬೆರಳೆಣಿಕೆಯ ದಿನಗಳು ಬಾಕಿ ಇವೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ

  • Privacy Policy
  • Contact
© Tulunadu Infomedia.

Press enter/return to begin your search