• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಕ್ಷಕ್ಕಾಗಿ ಧನ ಸಂಗ್ರಹಕ್ಕೆ ಕಾಂಗ್ರೆಸ್ ವಿನೂತನ ಸೂತ್ರ!

Tulunadu News Posted On December 16, 2023
0


0
Shares
  • Share On Facebook
  • Tweet It

ಕಾಂಗ್ರೆಸ್ ಪಕ್ಷ ಅಸ್ತಿತ್ವಕ್ಕೆ ಬಂದು 138 ವರ್ಷಗಳಾಗುತ್ತಿರುವ ಈ ವರ್ಷದಲ್ಲಿ ಪಕ್ಷಕ್ಕಾಗಿ ಧನ ಸಂಗ್ರಹಕ್ಕೆ ಹಲವು ರೀತಿಯ ಮಾರ್ಗೋಪಾಯಗಳನ್ನು ಪಕ್ಷ ಹಮ್ಮಿಕೊಂಡಿದೆ ಎಂದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಸುದ್ದಿಗೋಷ್ಟಿಯಲ್ಲಿ ಹೇಳಿದ್ದಾರೆ. ಆರಂಭದಲ್ಲಿ ಆನ್ ಲೈನ್ ಮೂಲಕ ಹಣ ಸಂಗ್ರಹ ಮಾಡುವ ಚಿಂತನೆಯಿದ್ದು, ಅದಕ್ಕೆ “ಡೋನೇಟ್ ಟು ದೇಶ್” ಎಂದು ಹೆಸರಿಡಲಾಗಿದೆ. ಇದು 1920 -21 ರಲ್ಲಿ ಮಹಾತ್ಮಾ ಗಾಂಧಿಜಿಯವರು ನಡೆಸಿದ ಅಭಿಯಾನ ” ತಿಲಕ್ ಸ್ವರಾಜ್ಯ ಫಂಡ್” ನಿಂದ ಪ್ರಭಾವಿತರಾಗಿರುವುದಾಗಿ ವೇಣುಗೋಪಾಲ್ ಹೇಳಿದ್ದಾರೆ.

ಉದ್ಘಾಟನಾ ಅಭಿಯಾನದಲ್ಲಿ ” ಉತ್ತಮ ಭಾರತಕ್ಕಾಗಿ ದೇಣಿಗೆ” ಎಂದು ಕಾರ್ಯಕ್ರಮ ಆರಂಭಗೊಳ್ಳಲಿದ್ದು, ಪಕ್ಷದ 138 ವರ್ಷಗಳ ಇತಿಹಾಸದ ಸ್ಮರಣೆಗಾಗಿ ಆ ಸಂಖ್ಯೆಯಿಂದಲೇ ಉದಾಹರಣೆಗೆ 138 ರೂ, 1380 ರೂ, 13800 ಹೀಗೆ ಆರ್ಥಿಕ ಸಹಾಯವನ್ನು ನೀಡಬಹುದಾಗಿದೆ. ಪಕ್ಷದ ಆನ್ ಲೈನ್ ಪೋರ್ಟಲ್ ಹಾಗೂ ಅಧಿಕೃತ ವೆಬ್ ಸೈಟ್ ನಿಂದ ಹಣ ಸಂದಾಯ ಮಾಡಲು ಅವಕಾಶವಿದೆ. ಡಿಸೆಂಬರ್ 18 ರಂದು ರಾಷ್ಟ್ರೀಯ ಅಧ್ಯಕ್ಷರು ಈ ಅಭಿಯಾನವನ್ನು ಉದ್ಘಾಟಿಸಲಿದ್ದಾರೆ ಎಂದು ವೇಣುಗೋಪಾಲ್ ತಿಳಿಸಿದರು.

ಈ ಆನ್ ಲೈನ್ ದೇಣಿಗೆ ಸಂಗ್ರಹ ಅಭಿಯಾನ ಡಿಸೆಂಬರ್ 18 ರಿಂದ 28 ರವರೆಗೆ ನಡೆಯಲಿದ್ದು, ನಂತರ ಮನೆ-ಮನೆ ಸಂಗ್ರಹ, ಪ್ರತಿ ಬೂತ್ ನಲ್ಲಿ 10 ಮನೆಗಳಿಂದ ಹಣ ಸಂಗ್ರಹದ ಗುರಿ ಇಟ್ಟುಕೊಳ್ಳಲಾಗಿದೆ. ನಾಗರಿಕರು ಕನಿಷ್ಟ 138 ರೂಗಳನ್ನು ನೀಡುವ ಮೂಲಕ ಸಹಕರಿಸಬೇಕು ಎಂದು ಹೇಳಲಾಗಿದೆ. ಪಕ್ಷದ ಪದಾಧಿಕಾರಿಗಳು 1380 ರೂ ನೀಡಲು ಸೂಚಿಸಲಾಗಿದೆ.

0
Shares
  • Share On Facebook
  • Tweet It




Trending Now
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
  • Popular Posts

    • 1
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 2
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search