• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಕ್ಷಕ್ಕಾಗಿ ಧನ ಸಂಗ್ರಹಕ್ಕೆ ಕಾಂಗ್ರೆಸ್ ವಿನೂತನ ಸೂತ್ರ!

Tulunadu News Posted On December 16, 2023
0


0
Shares
  • Share On Facebook
  • Tweet It

ಕಾಂಗ್ರೆಸ್ ಪಕ್ಷ ಅಸ್ತಿತ್ವಕ್ಕೆ ಬಂದು 138 ವರ್ಷಗಳಾಗುತ್ತಿರುವ ಈ ವರ್ಷದಲ್ಲಿ ಪಕ್ಷಕ್ಕಾಗಿ ಧನ ಸಂಗ್ರಹಕ್ಕೆ ಹಲವು ರೀತಿಯ ಮಾರ್ಗೋಪಾಯಗಳನ್ನು ಪಕ್ಷ ಹಮ್ಮಿಕೊಂಡಿದೆ ಎಂದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಸುದ್ದಿಗೋಷ್ಟಿಯಲ್ಲಿ ಹೇಳಿದ್ದಾರೆ. ಆರಂಭದಲ್ಲಿ ಆನ್ ಲೈನ್ ಮೂಲಕ ಹಣ ಸಂಗ್ರಹ ಮಾಡುವ ಚಿಂತನೆಯಿದ್ದು, ಅದಕ್ಕೆ “ಡೋನೇಟ್ ಟು ದೇಶ್” ಎಂದು ಹೆಸರಿಡಲಾಗಿದೆ. ಇದು 1920 -21 ರಲ್ಲಿ ಮಹಾತ್ಮಾ ಗಾಂಧಿಜಿಯವರು ನಡೆಸಿದ ಅಭಿಯಾನ ” ತಿಲಕ್ ಸ್ವರಾಜ್ಯ ಫಂಡ್” ನಿಂದ ಪ್ರಭಾವಿತರಾಗಿರುವುದಾಗಿ ವೇಣುಗೋಪಾಲ್ ಹೇಳಿದ್ದಾರೆ.

ಉದ್ಘಾಟನಾ ಅಭಿಯಾನದಲ್ಲಿ ” ಉತ್ತಮ ಭಾರತಕ್ಕಾಗಿ ದೇಣಿಗೆ” ಎಂದು ಕಾರ್ಯಕ್ರಮ ಆರಂಭಗೊಳ್ಳಲಿದ್ದು, ಪಕ್ಷದ 138 ವರ್ಷಗಳ ಇತಿಹಾಸದ ಸ್ಮರಣೆಗಾಗಿ ಆ ಸಂಖ್ಯೆಯಿಂದಲೇ ಉದಾಹರಣೆಗೆ 138 ರೂ, 1380 ರೂ, 13800 ಹೀಗೆ ಆರ್ಥಿಕ ಸಹಾಯವನ್ನು ನೀಡಬಹುದಾಗಿದೆ. ಪಕ್ಷದ ಆನ್ ಲೈನ್ ಪೋರ್ಟಲ್ ಹಾಗೂ ಅಧಿಕೃತ ವೆಬ್ ಸೈಟ್ ನಿಂದ ಹಣ ಸಂದಾಯ ಮಾಡಲು ಅವಕಾಶವಿದೆ. ಡಿಸೆಂಬರ್ 18 ರಂದು ರಾಷ್ಟ್ರೀಯ ಅಧ್ಯಕ್ಷರು ಈ ಅಭಿಯಾನವನ್ನು ಉದ್ಘಾಟಿಸಲಿದ್ದಾರೆ ಎಂದು ವೇಣುಗೋಪಾಲ್ ತಿಳಿಸಿದರು.

ಈ ಆನ್ ಲೈನ್ ದೇಣಿಗೆ ಸಂಗ್ರಹ ಅಭಿಯಾನ ಡಿಸೆಂಬರ್ 18 ರಿಂದ 28 ರವರೆಗೆ ನಡೆಯಲಿದ್ದು, ನಂತರ ಮನೆ-ಮನೆ ಸಂಗ್ರಹ, ಪ್ರತಿ ಬೂತ್ ನಲ್ಲಿ 10 ಮನೆಗಳಿಂದ ಹಣ ಸಂಗ್ರಹದ ಗುರಿ ಇಟ್ಟುಕೊಳ್ಳಲಾಗಿದೆ. ನಾಗರಿಕರು ಕನಿಷ್ಟ 138 ರೂಗಳನ್ನು ನೀಡುವ ಮೂಲಕ ಸಹಕರಿಸಬೇಕು ಎಂದು ಹೇಳಲಾಗಿದೆ. ಪಕ್ಷದ ಪದಾಧಿಕಾರಿಗಳು 1380 ರೂ ನೀಡಲು ಸೂಚಿಸಲಾಗಿದೆ.

0
Shares
  • Share On Facebook
  • Tweet It




Trending Now
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
  • Popular Posts

    • 1
      ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • 2
      ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • 3
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search