• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದಿಶಾ ಸಾಲಿಯಾನ್ ಅನುಮಾನಾಸ್ಪದ ಸಾವಿಗೆ ಮರುಜೀವ ನೀಡಿದ ಸರಕಾರ!

Tulunadu News Posted On December 16, 2023
0


0
Shares
  • Share On Facebook
  • Tweet It

ಮಹಾರಾಷ್ಟ್ರದ ಮುಂಬೈ ಪೊಲೀಸ್ ವಿಶೇಷ ತನಿಖಾ ದಳ ಬಾಲಿವುಡ್ ನಟ ಸುಶಾಂತ್ ಸಿಂಗ್ ರಾಜಪೂತ್ ಅವರ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಅನುಮಾನಾಸ್ಪದ ಸಾವಿನ ತನಿಖೆಗೆ ಮರುಜೀವ ನೀಡಿದೆ. ದಿಶಾ ಸಾಲಿಯಾನ್ ಅವರು ಸುಶಾಂತ್ ಆತ್ಮಹತ್ಯೆಗೆ ಶರಣಾದ ಹಿಂದಿನ ದಿನವಷ್ಟೇ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದರು.

28 ವರ್ಷದ ಆಕರ್ಷಕ ನಿಲುವಿನ ಸುಂದರಿ ದಿಶಾ 2020 ರ ಜೂನ್ 8 ರಂದು 12 ನೇ ಮಹಡಿಯಿಂದ ಬಿದ್ದು ಸಾವನ್ನು ಅಪ್ಪಿದ್ದರು ಎಂದು ವರದಿಯಾಗಿತ್ತು. ಈ ಸಾವು ಆಕಸ್ಮಿಕ ಅಲ್ಲ, ಇದರ ಹಿಂದೆ ವ್ಯವಸ್ಥಿತ ಷಡ್ಯಂತ್ರವಿದೆ ಎಂದು ಭಾರತೀಯ ಜನತಾ ಪಾರ್ಟಿಯ ಶಾಸಕ ನಿತೇಶ್ ರಾಣೆಯವರು ಆಗ್ರಹಿಸಿದ ಬಳಿಕ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಹಾಗೂ ಗೃಹಸಚಿವರಾದ ದೇವೇಂದ್ರ ಪಡ್ನವೀಸ್ ಅವರು ಎಸ್ ಐಟಿ ತನಿಖೆಗೆ ಆದೇಶಿಸಿದ್ದಾರೆ.

ಎಸಿಪಿ ರಾಜೀವ್ ಜೈನ್ ಅವರು ತನಿಖಾ ತಂಡದ ಮುಖ್ಯಸ್ಥರಾಗಿದ್ದು, ಅವರ ತಂಡ ದಿಶಾ ಮರಣ ಹೊಂದಿದ ಫ್ಲಾಟಿಗೆ ತೆರಳಿ ತನಿಖೆಯನ್ನು ಮತ್ತೆ ಆರಂಭಿಸಿದೆ. ಈ ಪ್ರಕರಣದ ಅಂಗವಾಗಿ ದಿಶಾ ಪೋಷಕರನ್ನು ಕೂಡ ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದ್ದು, ದಿಶಾ ತಂದೆ ಮಾತ್ರ ಈಗಾಗಲೇ ತನಿಖೆ ನಡೆದು ಮುಚ್ಚಿ ಹೋಗಿರುವ ಪ್ರಕರಣವನ್ನು ಮತ್ತೆ ತೆರೆಯುವ ಮೂಲಕ ಏನು ಸಾಧಿಸಿದಂತೆ ಆಗುತ್ತದೆ ಎನ್ನುವ ಅರ್ಥದ ಮಾತುಗಳನ್ನು ಆಡಿದ್ದಾರೆ. ಆದರೆ ಈ ಪ್ರಕರಣದಲ್ಲಿ ಆದಿತ್ಯ ಠಾಕ್ರೆಯವರ ಹೆಸರು ಕೂಡ ತಳುಕು ಹಾಕಿರುವ ಹಿನ್ನಲೆಯಲ್ಲಿ ಈ ಪ್ರಕರಣದ ನಿಜಾಂಶ ಜನರಿಗೆ ತಿಳಿಯಬೇಕಾಗಿದೆ. ಇನ್ನು ದಿಶಾ ಸಾಲ್ಯಾನ್ ಕೇಸಿನ ಬಗ್ಗೆ ಸತ್ಯ ಹೊರಬರಬೇಕಾದರೆ ಆದಿತ್ಯ ಠಾಕ್ರೆ ನಾರ್ಕೋ ಟೆಸ್ಟಿಗೆ ಒಳಗಾಗಬೇಕು ಎಂದು ನಿತೀಶ್ ರಾಣೆ ಆಗ್ರಹಿಸಿದ್ದಾರೆ.

0
Shares
  • Share On Facebook
  • Tweet It




Trending Now
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
  • Popular Posts

    • 1
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • 2
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 3
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 4
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!

  • Privacy Policy
  • Contact
© Tulunadu Infomedia.

Press enter/return to begin your search