• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದಿಶಾ ಸಾಲಿಯಾನ್ ಅನುಮಾನಾಸ್ಪದ ಸಾವಿಗೆ ಮರುಜೀವ ನೀಡಿದ ಸರಕಾರ!

Tulunadu News Posted On December 16, 2023
0


0
Shares
  • Share On Facebook
  • Tweet It

ಮಹಾರಾಷ್ಟ್ರದ ಮುಂಬೈ ಪೊಲೀಸ್ ವಿಶೇಷ ತನಿಖಾ ದಳ ಬಾಲಿವುಡ್ ನಟ ಸುಶಾಂತ್ ಸಿಂಗ್ ರಾಜಪೂತ್ ಅವರ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಅನುಮಾನಾಸ್ಪದ ಸಾವಿನ ತನಿಖೆಗೆ ಮರುಜೀವ ನೀಡಿದೆ. ದಿಶಾ ಸಾಲಿಯಾನ್ ಅವರು ಸುಶಾಂತ್ ಆತ್ಮಹತ್ಯೆಗೆ ಶರಣಾದ ಹಿಂದಿನ ದಿನವಷ್ಟೇ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದರು.

28 ವರ್ಷದ ಆಕರ್ಷಕ ನಿಲುವಿನ ಸುಂದರಿ ದಿಶಾ 2020 ರ ಜೂನ್ 8 ರಂದು 12 ನೇ ಮಹಡಿಯಿಂದ ಬಿದ್ದು ಸಾವನ್ನು ಅಪ್ಪಿದ್ದರು ಎಂದು ವರದಿಯಾಗಿತ್ತು. ಈ ಸಾವು ಆಕಸ್ಮಿಕ ಅಲ್ಲ, ಇದರ ಹಿಂದೆ ವ್ಯವಸ್ಥಿತ ಷಡ್ಯಂತ್ರವಿದೆ ಎಂದು ಭಾರತೀಯ ಜನತಾ ಪಾರ್ಟಿಯ ಶಾಸಕ ನಿತೇಶ್ ರಾಣೆಯವರು ಆಗ್ರಹಿಸಿದ ಬಳಿಕ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಹಾಗೂ ಗೃಹಸಚಿವರಾದ ದೇವೇಂದ್ರ ಪಡ್ನವೀಸ್ ಅವರು ಎಸ್ ಐಟಿ ತನಿಖೆಗೆ ಆದೇಶಿಸಿದ್ದಾರೆ.

ಎಸಿಪಿ ರಾಜೀವ್ ಜೈನ್ ಅವರು ತನಿಖಾ ತಂಡದ ಮುಖ್ಯಸ್ಥರಾಗಿದ್ದು, ಅವರ ತಂಡ ದಿಶಾ ಮರಣ ಹೊಂದಿದ ಫ್ಲಾಟಿಗೆ ತೆರಳಿ ತನಿಖೆಯನ್ನು ಮತ್ತೆ ಆರಂಭಿಸಿದೆ. ಈ ಪ್ರಕರಣದ ಅಂಗವಾಗಿ ದಿಶಾ ಪೋಷಕರನ್ನು ಕೂಡ ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದ್ದು, ದಿಶಾ ತಂದೆ ಮಾತ್ರ ಈಗಾಗಲೇ ತನಿಖೆ ನಡೆದು ಮುಚ್ಚಿ ಹೋಗಿರುವ ಪ್ರಕರಣವನ್ನು ಮತ್ತೆ ತೆರೆಯುವ ಮೂಲಕ ಏನು ಸಾಧಿಸಿದಂತೆ ಆಗುತ್ತದೆ ಎನ್ನುವ ಅರ್ಥದ ಮಾತುಗಳನ್ನು ಆಡಿದ್ದಾರೆ. ಆದರೆ ಈ ಪ್ರಕರಣದಲ್ಲಿ ಆದಿತ್ಯ ಠಾಕ್ರೆಯವರ ಹೆಸರು ಕೂಡ ತಳುಕು ಹಾಕಿರುವ ಹಿನ್ನಲೆಯಲ್ಲಿ ಈ ಪ್ರಕರಣದ ನಿಜಾಂಶ ಜನರಿಗೆ ತಿಳಿಯಬೇಕಾಗಿದೆ. ಇನ್ನು ದಿಶಾ ಸಾಲ್ಯಾನ್ ಕೇಸಿನ ಬಗ್ಗೆ ಸತ್ಯ ಹೊರಬರಬೇಕಾದರೆ ಆದಿತ್ಯ ಠಾಕ್ರೆ ನಾರ್ಕೋ ಟೆಸ್ಟಿಗೆ ಒಳಗಾಗಬೇಕು ಎಂದು ನಿತೀಶ್ ರಾಣೆ ಆಗ್ರಹಿಸಿದ್ದಾರೆ.

0
Shares
  • Share On Facebook
  • Tweet It




Trending Now
ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
Tulunadu News March 5, 2026
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
  • Popular Posts

    • 1
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • 2
      ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:

  • Privacy Policy
  • Contact
© Tulunadu Infomedia.

Press enter/return to begin your search