• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದಿಶಾ ಸಾಲಿಯಾನ್ ಅನುಮಾನಾಸ್ಪದ ಸಾವಿಗೆ ಮರುಜೀವ ನೀಡಿದ ಸರಕಾರ!

Tulunadu News Posted On December 16, 2023
0


0
Shares
  • Share On Facebook
  • Tweet It

ಮಹಾರಾಷ್ಟ್ರದ ಮುಂಬೈ ಪೊಲೀಸ್ ವಿಶೇಷ ತನಿಖಾ ದಳ ಬಾಲಿವುಡ್ ನಟ ಸುಶಾಂತ್ ಸಿಂಗ್ ರಾಜಪೂತ್ ಅವರ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಅನುಮಾನಾಸ್ಪದ ಸಾವಿನ ತನಿಖೆಗೆ ಮರುಜೀವ ನೀಡಿದೆ. ದಿಶಾ ಸಾಲಿಯಾನ್ ಅವರು ಸುಶಾಂತ್ ಆತ್ಮಹತ್ಯೆಗೆ ಶರಣಾದ ಹಿಂದಿನ ದಿನವಷ್ಟೇ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದರು.

28 ವರ್ಷದ ಆಕರ್ಷಕ ನಿಲುವಿನ ಸುಂದರಿ ದಿಶಾ 2020 ರ ಜೂನ್ 8 ರಂದು 12 ನೇ ಮಹಡಿಯಿಂದ ಬಿದ್ದು ಸಾವನ್ನು ಅಪ್ಪಿದ್ದರು ಎಂದು ವರದಿಯಾಗಿತ್ತು. ಈ ಸಾವು ಆಕಸ್ಮಿಕ ಅಲ್ಲ, ಇದರ ಹಿಂದೆ ವ್ಯವಸ್ಥಿತ ಷಡ್ಯಂತ್ರವಿದೆ ಎಂದು ಭಾರತೀಯ ಜನತಾ ಪಾರ್ಟಿಯ ಶಾಸಕ ನಿತೇಶ್ ರಾಣೆಯವರು ಆಗ್ರಹಿಸಿದ ಬಳಿಕ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಹಾಗೂ ಗೃಹಸಚಿವರಾದ ದೇವೇಂದ್ರ ಪಡ್ನವೀಸ್ ಅವರು ಎಸ್ ಐಟಿ ತನಿಖೆಗೆ ಆದೇಶಿಸಿದ್ದಾರೆ.

ಎಸಿಪಿ ರಾಜೀವ್ ಜೈನ್ ಅವರು ತನಿಖಾ ತಂಡದ ಮುಖ್ಯಸ್ಥರಾಗಿದ್ದು, ಅವರ ತಂಡ ದಿಶಾ ಮರಣ ಹೊಂದಿದ ಫ್ಲಾಟಿಗೆ ತೆರಳಿ ತನಿಖೆಯನ್ನು ಮತ್ತೆ ಆರಂಭಿಸಿದೆ. ಈ ಪ್ರಕರಣದ ಅಂಗವಾಗಿ ದಿಶಾ ಪೋಷಕರನ್ನು ಕೂಡ ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದ್ದು, ದಿಶಾ ತಂದೆ ಮಾತ್ರ ಈಗಾಗಲೇ ತನಿಖೆ ನಡೆದು ಮುಚ್ಚಿ ಹೋಗಿರುವ ಪ್ರಕರಣವನ್ನು ಮತ್ತೆ ತೆರೆಯುವ ಮೂಲಕ ಏನು ಸಾಧಿಸಿದಂತೆ ಆಗುತ್ತದೆ ಎನ್ನುವ ಅರ್ಥದ ಮಾತುಗಳನ್ನು ಆಡಿದ್ದಾರೆ. ಆದರೆ ಈ ಪ್ರಕರಣದಲ್ಲಿ ಆದಿತ್ಯ ಠಾಕ್ರೆಯವರ ಹೆಸರು ಕೂಡ ತಳುಕು ಹಾಕಿರುವ ಹಿನ್ನಲೆಯಲ್ಲಿ ಈ ಪ್ರಕರಣದ ನಿಜಾಂಶ ಜನರಿಗೆ ತಿಳಿಯಬೇಕಾಗಿದೆ. ಇನ್ನು ದಿಶಾ ಸಾಲ್ಯಾನ್ ಕೇಸಿನ ಬಗ್ಗೆ ಸತ್ಯ ಹೊರಬರಬೇಕಾದರೆ ಆದಿತ್ಯ ಠಾಕ್ರೆ ನಾರ್ಕೋ ಟೆಸ್ಟಿಗೆ ಒಳಗಾಗಬೇಕು ಎಂದು ನಿತೀಶ್ ರಾಣೆ ಆಗ್ರಹಿಸಿದ್ದಾರೆ.

0
Shares
  • Share On Facebook
  • Tweet It




Trending Now
ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
Tulunadu News August 23, 2025
'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ
Tulunadu News August 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
    • 'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ
    • ರಸ್ತೆಗೆ ಅಡ್ಡಬಂದ ನಾಯಿ- ತಪ್ಪಿಸಲು ಹೋಗಿ ಕಾರು ಪಲ್ಟಿ -ಖ್ಯಾತ ಡಿಜೆ ಮಾರ್ಮಿನ್ ಮೆಂಡೋನ್ಸಾ ನಿಧನ
    • ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
    • ನಮಸ್ತೆ ಸದಾ ವತ್ಸಲೆ... ಆರ್ ಎಸ್ ಎಸ್ ಗೀತೆ ಹಾಡಿದ ಡಿಕೆಶಿವಕುಮಾರ್!
    • ಸ್ನೇಹಮಯಿ ಕೃಷ್ಣ ಅವರಿಂದ ಸುಜಾತ ಭಟ್ ಹಾಗೂ ಇತರರ ಮೇಲೆ ಪ್ರಕರಣ ದಾಖಲು!
    • ಕಾನೂನು ಸ್ಪಷ್ಟವಾಗಿದೆ, ಡಿಜೆಗಳಿಗೆ ಅವಕಾಶ ನೀಡುವುದಿಲ್ಲ: ಕಮಿಷನ‌ರ್ ಸುಧೀರ್ ಕುಮಾರ್ ರೆಡ್ಡಿ
    • ಡಿಜೆ ಬಳಕೆಗೆ ವಿರೋಧವಿದೆ, ಆದರೆ ಧಾರ್ಮಿಕ ಕಾರ್ಯಕ್ರಮಗಳ ಆಚರಣೆಗೆ ಅಡ್ಡಿ ಪಡಿಸುವ ನಿಯಮ ಸಲ್ಲದು!
    • ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!
    • ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ಗೊತ್ತು, ಸಾಕ್ಷ್ಯವಿಲ್ಲ ಎಂದ ಹೆಗ್ಗಡೆ!
  • Popular Posts

    • 1
      ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
    • 2
      'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ
    • 3
      ರಸ್ತೆಗೆ ಅಡ್ಡಬಂದ ನಾಯಿ- ತಪ್ಪಿಸಲು ಹೋಗಿ ಕಾರು ಪಲ್ಟಿ -ಖ್ಯಾತ ಡಿಜೆ ಮಾರ್ಮಿನ್ ಮೆಂಡೋನ್ಸಾ ನಿಧನ
    • 4
      ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
    • 5
      ನಮಸ್ತೆ ಸದಾ ವತ್ಸಲೆ... ಆರ್ ಎಸ್ ಎಸ್ ಗೀತೆ ಹಾಡಿದ ಡಿಕೆಶಿವಕುಮಾರ್!

  • Privacy Policy
  • Contact
© Tulunadu Infomedia.

Press enter/return to begin your search