• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದಿಶಾ ಸಾಲಿಯಾನ್ ಅನುಮಾನಾಸ್ಪದ ಸಾವಿಗೆ ಮರುಜೀವ ನೀಡಿದ ಸರಕಾರ!

Tulunadu News Posted On December 16, 2023
0


0
Shares
  • Share On Facebook
  • Tweet It

ಮಹಾರಾಷ್ಟ್ರದ ಮುಂಬೈ ಪೊಲೀಸ್ ವಿಶೇಷ ತನಿಖಾ ದಳ ಬಾಲಿವುಡ್ ನಟ ಸುಶಾಂತ್ ಸಿಂಗ್ ರಾಜಪೂತ್ ಅವರ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಅನುಮಾನಾಸ್ಪದ ಸಾವಿನ ತನಿಖೆಗೆ ಮರುಜೀವ ನೀಡಿದೆ. ದಿಶಾ ಸಾಲಿಯಾನ್ ಅವರು ಸುಶಾಂತ್ ಆತ್ಮಹತ್ಯೆಗೆ ಶರಣಾದ ಹಿಂದಿನ ದಿನವಷ್ಟೇ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದರು.

28 ವರ್ಷದ ಆಕರ್ಷಕ ನಿಲುವಿನ ಸುಂದರಿ ದಿಶಾ 2020 ರ ಜೂನ್ 8 ರಂದು 12 ನೇ ಮಹಡಿಯಿಂದ ಬಿದ್ದು ಸಾವನ್ನು ಅಪ್ಪಿದ್ದರು ಎಂದು ವರದಿಯಾಗಿತ್ತು. ಈ ಸಾವು ಆಕಸ್ಮಿಕ ಅಲ್ಲ, ಇದರ ಹಿಂದೆ ವ್ಯವಸ್ಥಿತ ಷಡ್ಯಂತ್ರವಿದೆ ಎಂದು ಭಾರತೀಯ ಜನತಾ ಪಾರ್ಟಿಯ ಶಾಸಕ ನಿತೇಶ್ ರಾಣೆಯವರು ಆಗ್ರಹಿಸಿದ ಬಳಿಕ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಹಾಗೂ ಗೃಹಸಚಿವರಾದ ದೇವೇಂದ್ರ ಪಡ್ನವೀಸ್ ಅವರು ಎಸ್ ಐಟಿ ತನಿಖೆಗೆ ಆದೇಶಿಸಿದ್ದಾರೆ.

ಎಸಿಪಿ ರಾಜೀವ್ ಜೈನ್ ಅವರು ತನಿಖಾ ತಂಡದ ಮುಖ್ಯಸ್ಥರಾಗಿದ್ದು, ಅವರ ತಂಡ ದಿಶಾ ಮರಣ ಹೊಂದಿದ ಫ್ಲಾಟಿಗೆ ತೆರಳಿ ತನಿಖೆಯನ್ನು ಮತ್ತೆ ಆರಂಭಿಸಿದೆ. ಈ ಪ್ರಕರಣದ ಅಂಗವಾಗಿ ದಿಶಾ ಪೋಷಕರನ್ನು ಕೂಡ ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದ್ದು, ದಿಶಾ ತಂದೆ ಮಾತ್ರ ಈಗಾಗಲೇ ತನಿಖೆ ನಡೆದು ಮುಚ್ಚಿ ಹೋಗಿರುವ ಪ್ರಕರಣವನ್ನು ಮತ್ತೆ ತೆರೆಯುವ ಮೂಲಕ ಏನು ಸಾಧಿಸಿದಂತೆ ಆಗುತ್ತದೆ ಎನ್ನುವ ಅರ್ಥದ ಮಾತುಗಳನ್ನು ಆಡಿದ್ದಾರೆ. ಆದರೆ ಈ ಪ್ರಕರಣದಲ್ಲಿ ಆದಿತ್ಯ ಠಾಕ್ರೆಯವರ ಹೆಸರು ಕೂಡ ತಳುಕು ಹಾಕಿರುವ ಹಿನ್ನಲೆಯಲ್ಲಿ ಈ ಪ್ರಕರಣದ ನಿಜಾಂಶ ಜನರಿಗೆ ತಿಳಿಯಬೇಕಾಗಿದೆ. ಇನ್ನು ದಿಶಾ ಸಾಲ್ಯಾನ್ ಕೇಸಿನ ಬಗ್ಗೆ ಸತ್ಯ ಹೊರಬರಬೇಕಾದರೆ ಆದಿತ್ಯ ಠಾಕ್ರೆ ನಾರ್ಕೋ ಟೆಸ್ಟಿಗೆ ಒಳಗಾಗಬೇಕು ಎಂದು ನಿತೀಶ್ ರಾಣೆ ಆಗ್ರಹಿಸಿದ್ದಾರೆ.

0
Shares
  • Share On Facebook
  • Tweet It




Trending Now
ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
Tulunadu News September 16, 2025
ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
Tulunadu News September 16, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
  • Popular Posts

    • 1
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 2
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 3
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 4
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • 5
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search