• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸಾಗರ ಶರ್ಮಾ ಡೈರಿಯಲ್ಲಿ ಆತ ಸ್ಪಷ್ಟವಾಗಿ ಬರೆದಿದ್ದ!

Tulunadu News Posted On December 16, 2023
0


0
Shares
  • Share On Facebook
  • Tweet It

ಸಂಸತ್ತಿನ ಒಳಗೆ ಅಧಿವೇಶನದ ನಡೆಯುತ್ತಿರುವ ಹೊತ್ತಿನಲ್ಲಿ ವೀಕ್ಷಕರ ಗ್ಯಾಲರಿಯಿಂದ ಒಳಗೆ ಹಾರಿ ಸ್ಮೋಕ್ ಬಾಂಬ್ ಸಿಡಿಸಿದ ಪ್ರಕರಣದ ಪ್ರಧಾನ ಆರೋಪಿ ಸಾಗರ್ ಶರ್ಮಾ ಮನೆಯಲ್ಲಿ ಆತ ಬರೆಯುತ್ತಿದ್ದ ಡೈರಿ ಭಯೋತ್ಪಾದಕ ನಿಗ್ರಹ ದಳಕ್ಕೆ ಸಿಕ್ಕಿದೆ. ಅದರಲ್ಲಿ ಸಾಗರ್ ಶರ್ಮಾ ತನ್ನ ಮನದ ಭಾವನೆಗಳನ್ನು ಸ್ಪಷ್ಟವಾಗಿ ಹಿಂದಿ ಭಾಷೆಯಲ್ಲಿ ಬರೆದಿದ್ದಾನೆ.

“ಇನ್ನು ಮನೆ ಬಿಟ್ಟು ಹೋಗುವ ಸಮಯ ಬಂದಿದೆ. ಏನಾದರೂ ಹೋರಾಟ ಮಾಡಲೇಬೇಕು. ನನ್ನ ಮನಸ್ಸಿನ ಭಾವನೆಗಳನ್ನು ತಂದೆ, ತಾಯಿಗಳಿಗೆ ತಿಳಿಸಲು ಮನಸ್ಸು ಹಾತೊರೆಯುತ್ತಿದ್ದರೂ ಅವರಿಗೆ ಅದು ಮನವರಿಕೆ ಆಗಲಿಕ್ಕಿಲ್ಲ. ಈ ದಿನಕ್ಕಾಗಿ ಐದು ವರ್ಷಗಳಿಂದ ಯೋಜನೆ ಹಾಕುತ್ತಿದ್ದೇನೆ. ಬೇರೆಯವರಿಂದ ಕಿತ್ತುಕೊಳ್ಳುವವನು ಯಾವತ್ತೂ ಶಕ್ತಿವಂತನಲ್ಲ. ಸುಖ, ಸಂತೋಷ ತ್ಯಾಗ ಮಾಡಲು ತಯಾರಾಗಿರುವವನು ಮಾತ್ರ ಶಕ್ತಿವಂತ” ಹೀಗೆ ಸಾಗರ್ ಶರ್ಮಾ ಬರೆಯುತ್ತಾ ಹೋಗಿದ್ದಾನೆ. ಆ ಇಡೀ ಡೈರಿಯನ್ನು ತನಿಖೆಗೆ ಒಳಪಡಿಸಿರುವ ಭಯೋತ್ಪಾದಕ ನಿಗ್ರಹ ದಳದ ಅಧಿಕಾರಿಗಳು ಆತನ ಯೋಜನೆ, ಯೋಚನೆ ಹಾಗೂ ಷಡ್ಯಂತ್ರಗಳನ್ನು ಅರಿತುಕೊಳ್ಳುವ ಕೆಲಸದಲ್ಲಿ ನಿರತರಾಗಿದ್ದಾರೆ.

ಇತನ ಡೈರಿ ಈ ಪ್ರಕರಣಕ್ಕೆ ಮಹತ್ವಪೂರ್ಣ ತಿರುವನ್ನು ನೀಡುವ ಸಾಧ್ಯತೆ ಇದೆ. ಯಾಕೆಂದರೆ ಈ ಘಟನೆಯಲ್ಲಿ ಭಾಗಿಯಾಗಿರುವವರಿಗೂ ಸಾಗರ ಶರ್ಮಾನಿಗೂ ಹಿಂದಿನಿಂದಲೂ ಸಂಬಂಧವಿತ್ತು. ಎಲ್ಲರಿಗೂ ಏನಾದರೂ ಮಾಡಲೇಬೇಕೆಂಬ ಹಪಾಹಪಿ ಇತ್ತು. ಆದರೆ ಏನು ಮಾಡಬೇಕು ಎನ್ನುವ ಸ್ಪಷ್ಟವಾದ ದಾರಿ ಗೊತ್ತಿರಲಿಲ್ಲ. ಇಂತಹ ಮನಸ್ಥಿತಿಯಲ್ಲಿ ಸಿಲುಕಿಕೊಂಡವರು ಸೂಕ್ತ ಗುರು ಸಿಕ್ಕಿದರೆ ಸಮಾಜಕ್ಕೆ ಆಸ್ತಿಯಾಗುತ್ತಾರೆ. ಕೆಟ್ಟ ಸಂಗಡಿಗರು ಸಿಕ್ಕಿದರೆ ಭವಿಷ್ಯವನ್ನೇ ಕಳೆದುಕೊಳ್ಳುತ್ತಾರೆ. ಒಂದು ವೇಳೆ ಈ ಪ್ರಕರಣದಿಂದ ಬಿಡುಗಡೆಯಾಗಿ ಹೊರಗೆ ಬಂದ ಬಳಿಕ ಸಾಗರ್ ಶರ್ಮಾನಿಗೆ ಯಾವುದಾದರೂ ಪಕ್ಷ ವೇದಿಕೆ ನೀಡಬಹುದು. ಅದರಿಂದ ಆತನ ಬೆಳವಣಿಗೆ ಬೇರೆಯದ್ದೇ ರೀತಿಯಲ್ಲಿ ಆಗಬಹುದು. ಯಾಕೆಂದರೆ ನಮ್ಮ ದೇಶದಲ್ಲಿ ದೇಶದ ಸುರಕ್ಷತೆಗಿಂತ ರಾಜಕೀಯ ಲಾಭವೇ ಕೆಲವರಿಗೆ ಮುಖ್ಯವಾಗಿ ಹೋಗಿರುತ್ತದೆ!

0
Shares
  • Share On Facebook
  • Tweet It




Trending Now
ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
Tulunadu News August 23, 2025
'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ
Tulunadu News August 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
    • 'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ
    • ರಸ್ತೆಗೆ ಅಡ್ಡಬಂದ ನಾಯಿ- ತಪ್ಪಿಸಲು ಹೋಗಿ ಕಾರು ಪಲ್ಟಿ -ಖ್ಯಾತ ಡಿಜೆ ಮಾರ್ಮಿನ್ ಮೆಂಡೋನ್ಸಾ ನಿಧನ
    • ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
    • ನಮಸ್ತೆ ಸದಾ ವತ್ಸಲೆ... ಆರ್ ಎಸ್ ಎಸ್ ಗೀತೆ ಹಾಡಿದ ಡಿಕೆಶಿವಕುಮಾರ್!
    • ಸ್ನೇಹಮಯಿ ಕೃಷ್ಣ ಅವರಿಂದ ಸುಜಾತ ಭಟ್ ಹಾಗೂ ಇತರರ ಮೇಲೆ ಪ್ರಕರಣ ದಾಖಲು!
    • ಕಾನೂನು ಸ್ಪಷ್ಟವಾಗಿದೆ, ಡಿಜೆಗಳಿಗೆ ಅವಕಾಶ ನೀಡುವುದಿಲ್ಲ: ಕಮಿಷನ‌ರ್ ಸುಧೀರ್ ಕುಮಾರ್ ರೆಡ್ಡಿ
    • ಡಿಜೆ ಬಳಕೆಗೆ ವಿರೋಧವಿದೆ, ಆದರೆ ಧಾರ್ಮಿಕ ಕಾರ್ಯಕ್ರಮಗಳ ಆಚರಣೆಗೆ ಅಡ್ಡಿ ಪಡಿಸುವ ನಿಯಮ ಸಲ್ಲದು!
    • ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!
    • ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ಗೊತ್ತು, ಸಾಕ್ಷ್ಯವಿಲ್ಲ ಎಂದ ಹೆಗ್ಗಡೆ!
  • Popular Posts

    • 1
      ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
    • 2
      'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ
    • 3
      ರಸ್ತೆಗೆ ಅಡ್ಡಬಂದ ನಾಯಿ- ತಪ್ಪಿಸಲು ಹೋಗಿ ಕಾರು ಪಲ್ಟಿ -ಖ್ಯಾತ ಡಿಜೆ ಮಾರ್ಮಿನ್ ಮೆಂಡೋನ್ಸಾ ನಿಧನ
    • 4
      ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
    • 5
      ನಮಸ್ತೆ ಸದಾ ವತ್ಸಲೆ... ಆರ್ ಎಸ್ ಎಸ್ ಗೀತೆ ಹಾಡಿದ ಡಿಕೆಶಿವಕುಮಾರ್!

  • Privacy Policy
  • Contact
© Tulunadu Infomedia.

Press enter/return to begin your search