• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಾಕ್ಸರ್ ವಿಜೇಂದರ್ ಸಿಂಗ್ ರಾಜಕೀಯ ಸನ್ಯಾಸ!

Tulunadu News Posted On December 21, 2023
0


0
Shares
  • Share On Facebook
  • Tweet It

2024 ರ ಲೋಕಸಭಾ ಚುನಾವಣೆ ಬೆರಳೆಣಿಕೆಯ ತಿಂಗಳಷ್ಟೇ ಬಾಕಿ ಇರುವ ಈ ಹಂತದಲ್ಲಿ ಖ್ಯಾತ ಬಾಕ್ಸರ್ ವಿಜೇಂದರ್ ಸಿಂಗ್ ರಾಜಕೀಯವನ್ನು ತ್ಯಜಿಸುವುದಾಗಿ ತಮ್ಮ ಸಾಮಾಜಿಕ ಜಾಲತಾಣ “ಎಕ್ಸ್” ನಲ್ಲಿ ಘೋಷಿಸಿದ್ದಾರೆ. ಒಲಿಂಪಿಕ್ಸ್ ಪದಕ ವಿಜೇತರಾಗಿರುವ ವಿಜೇಂದರ್ ಸಿಂಗ್ ಅವರು ಕಾಂಗ್ರೆಸ್ ಪಕ್ಷವನ್ನು ಸೇರುವ ಮೂಲಕ ತಮ್ಮ ರಾಜಕೀಯ ಜೀವನವನ್ನು ಆರಂಭಿಸಿದ್ದರು.

2019 ರಲ್ಲಿ ಕಾಂಗ್ರೆಸ್ ಇವರನ್ನು ದಕ್ಷಿಣ ದೆಹಲಿಯಿಂದ ಕಣಕ್ಕೆ ಇಳಿಸಿತ್ತು. ಆದರೆ ವಿಜೇಂದರ್ ಸಿಂಗ್ ತಮ್ಮ ಚೊಚ್ಚಲ ಪ್ರಯತ್ನದಲ್ಲಿ ಸೋತಿದ್ದರು. ಆದರೆ ಕಾಂಗ್ರೆಸ್ ಪಕ್ಷದಲ್ಲಿ ಮುಂದುವರೆಯುವ ರಾಜಕೀಯ ಜೀವನವನ್ನು ಜೀವಂತವಾಗಿಟ್ಟಿದ್ದರು. ಆದರೆ ಈಗ ಅವರಿಗೆ ಕಾಂಗ್ರೆಸ್ಸಿನಿಂದ ಮತ್ತೆ ಚುನಾವಣೆಗೆ ಸ್ಪರ್ಧಿಸಿ ಗೆಲ್ಲುವುದು ಅಸಾಧ್ಯವೆನಿಸಿದೆ. ಅದಕ್ಕೆ ಮುಖ್ಯ ಕಾರಣ ಇತ್ತೀಚಿನ ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ನೀರಸ ಪ್ರದರ್ಶನ.

ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತಿಸ್ ಘಡದಲ್ಲಿ ಕಾಂಗ್ರೆಸ್ ಸೋತಿರುವುದರಿಂದ ವಿಜೇಂದರ್ ಸಿಂಗ್ ಅವರಿಗೆ ತಮ್ಮ ರಾಜಕೀಯ ಭವಿಷ್ಯ ಕೂಡ ಮಸುಕಾದಂತೆ ಕಾಣುತ್ತಿದೆ. ಆದ್ದರಿಂದ ಅವರು ರಾಜಕೀಯ ಜೀವನದಿಂದ ವಿಮುಖರಾಗಲು ನಿರ್ಧರಿಸಿದ್ದಾರೆ. ರಾಜನೀತಿ ಕೋ ರಾಮ್ ರಾಮ್ ಭಾಯ್ ಎಂದು ಡಿಸೆಂಬರ್ 21 ರಂದು ಎಕ್ಸ್ ನಲ್ಲಿ ಬರೆದಿರುವ ವಿಜೇಂದರ್ ಸಿಂಗ್ ರಾಜಕೀಯ ಜೀವನ ಕೊನೆಗೊಂಡಿರುವುದು ಕಾಂಗ್ರೆಸ್ಸಿಗೆ ಹಿನ್ನಡೆ ಕೂಡ ಹೌದು. ಒಟ್ಟಿನಲ್ಲಿ ಸೋಲುಗಳು ಸಂಬಂಧಿಕರನ್ನು ಕೂಡ ನಮ್ಮಿಂದ ದೂರ ಮಾಡುತ್ತದೆ ಎನ್ನುವುದು ಇದೇ ಕಾರಣಕ್ಕೆ.

0
Shares
  • Share On Facebook
  • Tweet It




Trending Now
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
  • Popular Posts

    • 1
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 2
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search