• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಾಕ್ಸರ್ ವಿಜೇಂದರ್ ಸಿಂಗ್ ರಾಜಕೀಯ ಸನ್ಯಾಸ!

Tulunadu News Posted On December 21, 2023
0


0
Shares
  • Share On Facebook
  • Tweet It

2024 ರ ಲೋಕಸಭಾ ಚುನಾವಣೆ ಬೆರಳೆಣಿಕೆಯ ತಿಂಗಳಷ್ಟೇ ಬಾಕಿ ಇರುವ ಈ ಹಂತದಲ್ಲಿ ಖ್ಯಾತ ಬಾಕ್ಸರ್ ವಿಜೇಂದರ್ ಸಿಂಗ್ ರಾಜಕೀಯವನ್ನು ತ್ಯಜಿಸುವುದಾಗಿ ತಮ್ಮ ಸಾಮಾಜಿಕ ಜಾಲತಾಣ “ಎಕ್ಸ್” ನಲ್ಲಿ ಘೋಷಿಸಿದ್ದಾರೆ. ಒಲಿಂಪಿಕ್ಸ್ ಪದಕ ವಿಜೇತರಾಗಿರುವ ವಿಜೇಂದರ್ ಸಿಂಗ್ ಅವರು ಕಾಂಗ್ರೆಸ್ ಪಕ್ಷವನ್ನು ಸೇರುವ ಮೂಲಕ ತಮ್ಮ ರಾಜಕೀಯ ಜೀವನವನ್ನು ಆರಂಭಿಸಿದ್ದರು.

2019 ರಲ್ಲಿ ಕಾಂಗ್ರೆಸ್ ಇವರನ್ನು ದಕ್ಷಿಣ ದೆಹಲಿಯಿಂದ ಕಣಕ್ಕೆ ಇಳಿಸಿತ್ತು. ಆದರೆ ವಿಜೇಂದರ್ ಸಿಂಗ್ ತಮ್ಮ ಚೊಚ್ಚಲ ಪ್ರಯತ್ನದಲ್ಲಿ ಸೋತಿದ್ದರು. ಆದರೆ ಕಾಂಗ್ರೆಸ್ ಪಕ್ಷದಲ್ಲಿ ಮುಂದುವರೆಯುವ ರಾಜಕೀಯ ಜೀವನವನ್ನು ಜೀವಂತವಾಗಿಟ್ಟಿದ್ದರು. ಆದರೆ ಈಗ ಅವರಿಗೆ ಕಾಂಗ್ರೆಸ್ಸಿನಿಂದ ಮತ್ತೆ ಚುನಾವಣೆಗೆ ಸ್ಪರ್ಧಿಸಿ ಗೆಲ್ಲುವುದು ಅಸಾಧ್ಯವೆನಿಸಿದೆ. ಅದಕ್ಕೆ ಮುಖ್ಯ ಕಾರಣ ಇತ್ತೀಚಿನ ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ನೀರಸ ಪ್ರದರ್ಶನ.

ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತಿಸ್ ಘಡದಲ್ಲಿ ಕಾಂಗ್ರೆಸ್ ಸೋತಿರುವುದರಿಂದ ವಿಜೇಂದರ್ ಸಿಂಗ್ ಅವರಿಗೆ ತಮ್ಮ ರಾಜಕೀಯ ಭವಿಷ್ಯ ಕೂಡ ಮಸುಕಾದಂತೆ ಕಾಣುತ್ತಿದೆ. ಆದ್ದರಿಂದ ಅವರು ರಾಜಕೀಯ ಜೀವನದಿಂದ ವಿಮುಖರಾಗಲು ನಿರ್ಧರಿಸಿದ್ದಾರೆ. ರಾಜನೀತಿ ಕೋ ರಾಮ್ ರಾಮ್ ಭಾಯ್ ಎಂದು ಡಿಸೆಂಬರ್ 21 ರಂದು ಎಕ್ಸ್ ನಲ್ಲಿ ಬರೆದಿರುವ ವಿಜೇಂದರ್ ಸಿಂಗ್ ರಾಜಕೀಯ ಜೀವನ ಕೊನೆಗೊಂಡಿರುವುದು ಕಾಂಗ್ರೆಸ್ಸಿಗೆ ಹಿನ್ನಡೆ ಕೂಡ ಹೌದು. ಒಟ್ಟಿನಲ್ಲಿ ಸೋಲುಗಳು ಸಂಬಂಧಿಕರನ್ನು ಕೂಡ ನಮ್ಮಿಂದ ದೂರ ಮಾಡುತ್ತದೆ ಎನ್ನುವುದು ಇದೇ ಕಾರಣಕ್ಕೆ.

0
Shares
  • Share On Facebook
  • Tweet It




Trending Now
ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
Tulunadu News July 15, 2025
ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
Tulunadu News July 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!
    • ಜಪಾನ್ ಮ್ಯಾರಥಾನ್.. 46 ಗಂಟೆ ನಿದ್ದೆ ಮಾಡದೇ ಓಡಿದ ಕನ್ನಡತಿ ಅಶ್ವಿನಿ!
    • ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
  • Popular Posts

    • 1
      ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • 2
      ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • 3
      ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • 4
      ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • 5
      ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!

  • Privacy Policy
  • Contact
© Tulunadu Infomedia.

Press enter/return to begin your search