• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಾಕ್ಸರ್ ವಿಜೇಂದರ್ ಸಿಂಗ್ ರಾಜಕೀಯ ಸನ್ಯಾಸ!

Tulunadu News Posted On December 21, 2023
0


0
Shares
  • Share On Facebook
  • Tweet It

2024 ರ ಲೋಕಸಭಾ ಚುನಾವಣೆ ಬೆರಳೆಣಿಕೆಯ ತಿಂಗಳಷ್ಟೇ ಬಾಕಿ ಇರುವ ಈ ಹಂತದಲ್ಲಿ ಖ್ಯಾತ ಬಾಕ್ಸರ್ ವಿಜೇಂದರ್ ಸಿಂಗ್ ರಾಜಕೀಯವನ್ನು ತ್ಯಜಿಸುವುದಾಗಿ ತಮ್ಮ ಸಾಮಾಜಿಕ ಜಾಲತಾಣ “ಎಕ್ಸ್” ನಲ್ಲಿ ಘೋಷಿಸಿದ್ದಾರೆ. ಒಲಿಂಪಿಕ್ಸ್ ಪದಕ ವಿಜೇತರಾಗಿರುವ ವಿಜೇಂದರ್ ಸಿಂಗ್ ಅವರು ಕಾಂಗ್ರೆಸ್ ಪಕ್ಷವನ್ನು ಸೇರುವ ಮೂಲಕ ತಮ್ಮ ರಾಜಕೀಯ ಜೀವನವನ್ನು ಆರಂಭಿಸಿದ್ದರು.

2019 ರಲ್ಲಿ ಕಾಂಗ್ರೆಸ್ ಇವರನ್ನು ದಕ್ಷಿಣ ದೆಹಲಿಯಿಂದ ಕಣಕ್ಕೆ ಇಳಿಸಿತ್ತು. ಆದರೆ ವಿಜೇಂದರ್ ಸಿಂಗ್ ತಮ್ಮ ಚೊಚ್ಚಲ ಪ್ರಯತ್ನದಲ್ಲಿ ಸೋತಿದ್ದರು. ಆದರೆ ಕಾಂಗ್ರೆಸ್ ಪಕ್ಷದಲ್ಲಿ ಮುಂದುವರೆಯುವ ರಾಜಕೀಯ ಜೀವನವನ್ನು ಜೀವಂತವಾಗಿಟ್ಟಿದ್ದರು. ಆದರೆ ಈಗ ಅವರಿಗೆ ಕಾಂಗ್ರೆಸ್ಸಿನಿಂದ ಮತ್ತೆ ಚುನಾವಣೆಗೆ ಸ್ಪರ್ಧಿಸಿ ಗೆಲ್ಲುವುದು ಅಸಾಧ್ಯವೆನಿಸಿದೆ. ಅದಕ್ಕೆ ಮುಖ್ಯ ಕಾರಣ ಇತ್ತೀಚಿನ ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ನೀರಸ ಪ್ರದರ್ಶನ.

ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತಿಸ್ ಘಡದಲ್ಲಿ ಕಾಂಗ್ರೆಸ್ ಸೋತಿರುವುದರಿಂದ ವಿಜೇಂದರ್ ಸಿಂಗ್ ಅವರಿಗೆ ತಮ್ಮ ರಾಜಕೀಯ ಭವಿಷ್ಯ ಕೂಡ ಮಸುಕಾದಂತೆ ಕಾಣುತ್ತಿದೆ. ಆದ್ದರಿಂದ ಅವರು ರಾಜಕೀಯ ಜೀವನದಿಂದ ವಿಮುಖರಾಗಲು ನಿರ್ಧರಿಸಿದ್ದಾರೆ. ರಾಜನೀತಿ ಕೋ ರಾಮ್ ರಾಮ್ ಭಾಯ್ ಎಂದು ಡಿಸೆಂಬರ್ 21 ರಂದು ಎಕ್ಸ್ ನಲ್ಲಿ ಬರೆದಿರುವ ವಿಜೇಂದರ್ ಸಿಂಗ್ ರಾಜಕೀಯ ಜೀವನ ಕೊನೆಗೊಂಡಿರುವುದು ಕಾಂಗ್ರೆಸ್ಸಿಗೆ ಹಿನ್ನಡೆ ಕೂಡ ಹೌದು. ಒಟ್ಟಿನಲ್ಲಿ ಸೋಲುಗಳು ಸಂಬಂಧಿಕರನ್ನು ಕೂಡ ನಮ್ಮಿಂದ ದೂರ ಮಾಡುತ್ತದೆ ಎನ್ನುವುದು ಇದೇ ಕಾರಣಕ್ಕೆ.

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search