• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ನನ್ನ ದೂರು ಏನಿತ್ತು…

Hanumantha Kamath Posted On December 23, 2023
0


0
Shares
  • Share On Facebook
  • Tweet It

ಮಾಡಬೇಕಲ್ಲ ಎಂದು ಮಾಡಿದರೆ ಹೀಗೆ ಆಗುವುದು…

ಜನತಾ ದರ್ಶನ ಎನ್ನುವ ಶಬ್ದಕ್ಕೆ ಅದರದ್ದೇ ಆಗಿರುವ ಪಾವಿತ್ರ್ಯತೆ ಇದೆ. ಅದನ್ನು ಅಷ್ಟೇ ಗೌರವದಿಂದ ಮಾಡಲು ಆಗದಿದ್ದರೆ ಆ ಹೆಸರಿಟ್ಟು ಕಾರ್ಯಕ್ರಮ ಮಾಡಲು ಹೋಗಲೇಬೇಡಿ. ಇಲ್ಲದಿದ್ದರೆ ಕಾಟಾಚಾರ ದರ್ಶನ ಎಂದು ಹೆಸರು ಬದಲಾಯಿಸಿಬಿಡಿ. ಒಂದು ವೇಳೆ ಜನತಾ ದರ್ಶನ ಎಂದು ಮಾಡಿ ಅದರ ಫಾಲೋಅಪ್ ಮಾಡದೇ ಹೋದರೆ ಅದರಿಂದ ಏನೂ ಪ್ರಯೋಜನವಿಲ್ಲ. ಸಿದ್ದು ಸರಕಾರ ಬಂದ ನಂತರ ಜನತಾ ದರ್ಶನ ಮಾಡಲೇ ಇಲ್ಲ ಎಂದು ಪತ್ರಿಕೆಗಳಲ್ಲಿ ವಿಷಯಗಳು ಬಂದಂತೆಲ್ಲಾ ಸಿದ್ದು ಎಚ್ಚರಗೊಂಡಿದ್ರು. ಸೆಪ್ಟೆಂಬರ್ 21 ರಂದು ಬೆಂಗಳೂರಿನಲ್ಲಿ ತಾವು ಮತ್ತು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಅಲ್ಲಿನ ಉಸ್ತುವಾರಿ ಸಚಿವರುಗಳು ಜನತಾ ದರ್ಶನ ಮಾಡಬೇಕೆಂಬ ಸೂಚನೆ ನೀಡಿದ್ರು. ಅದರಂತೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಪುರಭವನದಲ್ಲಿ ಜನತಾ ದರ್ಶನ ಹೆಸರಿನಲ್ಲಿ ಅಧಿಕಾರಿಗಳನ್ನು ಕರೆಸಿ ಮಾಡಿದ್ರು. ಅಲ್ಲಿ ನಾನು ಒಂದು ದೂರು ಕೊಟ್ಟಿದ್ದೆ.

ನನ್ನ ದೂರು ಏನಿತ್ತು…

ಅದೇನೆಂದರೆ ಮಂಗಳೂರಿನ ಉರ್ವಾಸ್ಟೋರ್ ನಲ್ಲಿ ಅಂಬೇಡ್ಕರ್ ಭವನ ಇದೆಯಲ್ಲ. ಅದನ್ನು ಸಮಾಜ ಕಲ್ಯಾಣ ಇಲಾಖೆಯ 17 ಕೋಟಿ ಅನುದಾನದಿಂದ ನಿರ್ಮಿಸಲಾಗಿತ್ತು. ಅದರ ನಂತರ ಅದರ ನಿರ್ವಹಣೆಯನ್ನು ಮಂಗಳೂರು ಮಹಾನಗರ ಪಾಲಿಕೆಗೆ ಹಸ್ತಾಂತರಿಸಲಾಗಿತ್ತು. ಸರಿಯಾಗಿ ನೋಡಿದರೆ ಅದನ್ನು ಪಾಲಿಕೆ ತೆಗೆದುಕೊಳ್ಳಲೇಬಾರದಿತ್ತು. ಯಾಕೆಂದರೆ ಅಲ್ಲಿರುವ ಕಳಪೆ ಕಾಮಗಾರಿಯೇ ಹಾಗಿತ್ತು. ಭವನದ ಆವರಣ ಗೋಡೆಯಲ್ಲಿ ಬಿರುಕು ಬಿದ್ದಿತ್ತು. ಮುಖ್ಯ ಬಾಗಿಲನ್ನು ಹಾಕಲು ಕಷ್ಟಸಾಧ್ಯವಿತ್ತು. ಅನೇಕ ಕಡೆ ಕಳಪೆ ಕಾಮಗಾರಿ ಆಗಿರುವುದು ಎದ್ದು ಕಾಣುತ್ತಿತ್ತು. ಸೆಪ್ಟೆಂಬರ್ 21 ರಂದು ಮಂಗಳೂರಿನಲ್ಲಿ ನಡೆದ ಜನತಾ ದರ್ಶನದಲ್ಲಿ ಪತ್ರ ಪರಿಶೀಲಿಸಿದ ದಿನೇಶ್ ಗುಂಡೂರಾವ್ ಈ ಬಗ್ಗೆ ಕ್ರಮ ತೆಗೆದುಕೊಳ್ಳಲೇಬೇಕೆಂದು ಸೂಚಿಸಿದ್ದರು. ನಾನು ಜನತಾ ದರ್ಶನದಲ್ಲಿ ದೂರು ಕೊಟ್ಟು ಸಮಾಜ ಕಲ್ಯಾಣ ಇಲಾಖೆಗೆ ಪತ್ರ ಬರೆದಿದ್ದರೂ ಏನು ಆಗಿರಲಿಲ್ಲ. ಅಲ್ಲಿಂದ ಪತ್ರ ಮಹಾನಗರ ಪಾಲಿಕೆಗೆ ಬಂದಿತ್ತು

ತಪ್ಪು ಮಾಡಿದವರಿಗೆ ಶಿಕ್ಷೆ ಆಗಬೇಕು…

ಇದೆಲ್ಲಾ ಆಗಿ ಡಿಸೆಂಬರ್ 21ಕ್ಕೆ ಮೂರು ತಿಂಗಳಾಗಿದೆ. ಡಿಸೆಂಬರ್ 22 ರಂದು ದಿನೇಶ್ ಗುಂಡೂರಾವ್ ಅವರ ಮತ್ತೊಂದು ಜನತಾ ದರ್ಶನ ಮಂಗಳೂರಿನಲ್ಲಿ ನಡೆಯುವ ಬಗ್ಗೆ ನಿಗದಿಯಾಗಿತ್ತು. 3 ಗಂಟೆಗೆ ಜನತಾ ದರ್ಶನ ಎಂದು ನಿಗದಿಯಾಗಿದ್ದರೂ ಮಾನ್ಯ ಸಚಿವರು ಆಗಮಿಸುವಾಗ ಗಂಟೆ ಐದಾಗಿತ್ತು. ಬಂದವರೇ ಕೊರೊನಾ ಮೀಟಿಂಗ್ ಮಾಡಿದ್ರು. ನಂತರ ಆ ವಿಷಯದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿ 6:40 ಕ್ಕೆ ಹೊರಟು ಹೋದ್ರು. ಕೊರೊನಾ ಮೀಟಿಂಗ್ ಮಾಡಬಾರದು ಎಂದು ಯಾರೂ ಹೇಳುತ್ತಿಲ್ಲ. ಆದರೆ ಅದನ್ನು ಮಾಡಿದ ಮೇಲೆ ಜನತಾ ದರ್ಶನವನ್ನು ಮಾಡಬಹುದಿತ್ತಲ್ಲ. ಅದು ಮೊದಲೇ ನಿಗದಿಯಾಗಿತ್ತಲ್ಲ. ಹಾಗಾದರೆ ಜನತಾ ದರ್ಶನ ಎಂದರೆ ಅಷ್ಟು ನಿರ್ಲಕ್ಷ್ಯವೇ? ಜನರ ಸಮಸ್ಯೆಗೆ ಪರಿಹಾರ ಸೂಚಿಸಬೇಕಾದವರು ಇಷ್ಟು ಬೇಗ ಹೀಗೆ ಮಾಡಿದರೆ ಹೇಗೆ? ಅಷ್ಟಕ್ಕೂ ನಾವು ನಮ್ಮ ಮನೆಯ ಸಮಸ್ಯೆಯನ್ನು ಹೇಳಿಕೊಂಡು ಬರುವುದಿಲ್ಲ. ಸರಕಾರ ಜನರ ತೆರಿಗೆಯ ಹಣವನ್ನು ಖರ್ಚು ಮಾಡಿ ಕಟ್ಟಿದ ಒಂದು ಕಟ್ಟಡ ಕಳಪೆಯಾಗಿದ್ದು, ಅದನ್ನು ಸರಿ ಮಾಡಿ ಎಂದು ನಾನು ಕೇಳಿದ್ದೇ ಬಿಟ್ಟರೆ ನನ್ನ ಮನೆಯ ಕಂಪೌಂಡಿಗೆ ಎರಡು ಗೋಣಿ ಸಿಮೆಂಟ್ ಕೊಡಿ ಕೇಳಿರಲಿಲ್ಲ. ಸರಕಾರಿ ಕಟ್ಟಡವನ್ನು ಕಳಪೆಯಾಗಿ ಕಟ್ಟಿದ್ದ ಗುತ್ತಿಗೆದಾರರನ್ನು, ಸಹಿ ಹಾಕಿ ಬಿಲ್ ಪಾಸ್ ಮಾಡಿದ ಅಧಿಕಾರಿಯನ್ನು ಕರೆಸಿ ಪ್ರಶ್ನಿಸಲು ಧಮ್ ಇಲ್ಲದವರು ಜನತಾ ದರ್ಶನ ಮಾಡಿದರೆಷ್ಟು? ಬಿಟ್ಟರೆಷ್ಟು?

0
Shares
  • Share On Facebook
  • Tweet It




Trending Now
ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
Hanumantha Kamath July 11, 2025
ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
Hanumantha Kamath July 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
  • Popular Posts

    • 1
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 2
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • 3
      ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • 4
      ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • 5
      ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!

  • Privacy Policy
  • Contact
© Tulunadu Infomedia.

Press enter/return to begin your search