• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದಾವೂದ್ ಆಸ್ತಿ ಹರಾಜಿಗೆ ದಿನ ಫಿಕ್ಸ್!

Tulunadu News Posted On December 25, 2023
0


0
Shares
  • Share On Facebook
  • Tweet It

ಕುಖ್ಯಾತ ಭೂಗತ ಪಾತಕಿ, ಕ್ರಿಮಿನಲ್ ದಾವೂದ್ ಇಬ್ರಾಹಿಂನ ಮುಂಬೈ ಮತ್ತು ರತ್ನಗಿರಿಯಲ್ಲಿರುವ ಕೋಟ್ಯಾಂತರ ರೂಪಾಯಿ ಬೆಲೆಬಾಳುವ ಆಸ್ತಿಯನ್ನು ಹರಾಜಿಗೆ ಇಡಲಾಗಿದೆ. 2024 ರ ಜನವರಿ 5 ರಂದು ಕೇಂದ್ರ ಸರಕಾರ ಈ ಆಸ್ತಿಗಳನ್ನು ಹರಾಜಿನ ಮೂಲಕ ಮಾರಾಟ ಮಾಡಲಿದೆ.

ಒಂದು ವೇಳೆ ದಾವೂದ್ ಇನ್ನೂ ಬದುಕಿದ್ದರೆ ಅವನಿಗೆ ಇದೊಂದು ಶಾಕ್ ಆಗಬಹುದು ಎಂದು ಹೇಳಲಾಗುತ್ತಿದೆ. ಇತ್ತೀಚೆಗೆ ವಿಷಪ್ರಾಶನದ ಮೂಲಕ ದಾವೂದ್ ಮೃತನಾಗಿದ್ದಾನೆ ಎನ್ನುವ ವಿಚಾರವನ್ನು ಅಲ್ಲಿಯ ಪತ್ರಕರ್ತರೊಬ್ಬರು ನೀಡಿದ ಸುಳಿವಿನ ಮೇರೆಗೆ ಭಾರತೀಯ ಮಾಧ್ಯಮಗಳು ಅದನ್ನು ಬಹಿರಂಗಗೊಳಿಸಿದ್ದರು. ಆದರೆ ಆ ಸುದ್ದಿ ಇನ್ನು ಕೂಡ ಅಧಿಕೃತವಾಗಿ ಘೋಷಣೆಯಾಗಿಲ್ಲ. ಆ ಸುದ್ದಿ ನಿಜವೋ, ಅಲ್ಲವೋ ಎನ್ನುವುದು ಜನವರಿ 5 ಕ್ಕೆ ತಿಳಿಯಲಿದೆ. ಒಂದು ವೇಳೆ ಆತ ಸತ್ತಿದ್ದರೆ ಈ ಏಲಂ ವಿಷಯದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಯಾವುದೇ ಸಂಚಲನ ಮೂಡದೇ ವಿಷಯ ಅಲ್ಲಿಗೆ ಮುಕ್ತಾಯವಾಗಬಹುದು. ಒಂದು ವೇಳೆ ಆತ ಬದುಕಿದ್ದರೆ ಆತ ಏನಾದರೂ ಒಂದು ಕ್ರಮ ತೆಗೆದುಕೊಂಡೇ ಕೊಳ್ಳುತ್ತಾನೆ. ಅದನ್ನು ರಾ ಬಹಳ ಸೂಕ್ಷ್ಮವಾಗಿ ಗಮನಿಸುತ್ತಿದೆ. ದಾವೂದ್ ಏನಾದರೂ ಒಂದು ತಪ್ಪು ಮಾಡಲಿ ಎಂದು ಅಂತರಾಷ್ಟ್ರೀಯ ತನಿಖಾ ಸಂಸ್ಥೆಗಳು ಕೂಡ ಕಾಯುತ್ತಿವೆ.

ಈಗ ಜನವರಿ 5 ರಂದು ಹರಾಜಿಗೆ ಇಟ್ಟಿರುವ ಆಸ್ತಿಗಳಲ್ಲಿ ದಾವೂದ್ ಹುಟ್ಟಿದ ರತ್ನಗಿರಿ ಜಿಲ್ಲೆಯ ಖೇಡಾ ತಾಲೂಕಿನಲ್ಲಿ ಆತನ ಬಂಗ್ಲೆ ಮತ್ತು ವಿಶಾಲ ಮಾವಿನ ತೋಪು ಕೂಡ ಇದೆ. 2017 ರಲ್ಲಿ ದಾವೂದ್ ಮಾಲೀಕತ್ವದ ದಕ್ಷಿಣ ಮುಂಬೈನಲ್ಲಿದ್ದ ಹೋಟೇಲ್, ರೂಂಗಳನ್ನು, ಅತಿಥಿ ಗೃಹವನ್ನು ಎನ್ ಡಿಎ ನೇತೃತ್ವದ ಕೇಂದ್ರ ಸರಕಾರ ಹರಾಜಿನ ಮೂಲಕ ಮಾರಿತ್ತು ಎನ್ನುವುದನ್ನು ಇಲ್ಲಿ ಸ್ಮರಿಸಬಹುದು.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search