• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದಾವೂದ್ ಆಸ್ತಿ ಹರಾಜಿಗೆ ದಿನ ಫಿಕ್ಸ್!

Tulunadu News Posted On December 25, 2023
0


0
Shares
  • Share On Facebook
  • Tweet It

ಕುಖ್ಯಾತ ಭೂಗತ ಪಾತಕಿ, ಕ್ರಿಮಿನಲ್ ದಾವೂದ್ ಇಬ್ರಾಹಿಂನ ಮುಂಬೈ ಮತ್ತು ರತ್ನಗಿರಿಯಲ್ಲಿರುವ ಕೋಟ್ಯಾಂತರ ರೂಪಾಯಿ ಬೆಲೆಬಾಳುವ ಆಸ್ತಿಯನ್ನು ಹರಾಜಿಗೆ ಇಡಲಾಗಿದೆ. 2024 ರ ಜನವರಿ 5 ರಂದು ಕೇಂದ್ರ ಸರಕಾರ ಈ ಆಸ್ತಿಗಳನ್ನು ಹರಾಜಿನ ಮೂಲಕ ಮಾರಾಟ ಮಾಡಲಿದೆ.

ಒಂದು ವೇಳೆ ದಾವೂದ್ ಇನ್ನೂ ಬದುಕಿದ್ದರೆ ಅವನಿಗೆ ಇದೊಂದು ಶಾಕ್ ಆಗಬಹುದು ಎಂದು ಹೇಳಲಾಗುತ್ತಿದೆ. ಇತ್ತೀಚೆಗೆ ವಿಷಪ್ರಾಶನದ ಮೂಲಕ ದಾವೂದ್ ಮೃತನಾಗಿದ್ದಾನೆ ಎನ್ನುವ ವಿಚಾರವನ್ನು ಅಲ್ಲಿಯ ಪತ್ರಕರ್ತರೊಬ್ಬರು ನೀಡಿದ ಸುಳಿವಿನ ಮೇರೆಗೆ ಭಾರತೀಯ ಮಾಧ್ಯಮಗಳು ಅದನ್ನು ಬಹಿರಂಗಗೊಳಿಸಿದ್ದರು. ಆದರೆ ಆ ಸುದ್ದಿ ಇನ್ನು ಕೂಡ ಅಧಿಕೃತವಾಗಿ ಘೋಷಣೆಯಾಗಿಲ್ಲ. ಆ ಸುದ್ದಿ ನಿಜವೋ, ಅಲ್ಲವೋ ಎನ್ನುವುದು ಜನವರಿ 5 ಕ್ಕೆ ತಿಳಿಯಲಿದೆ. ಒಂದು ವೇಳೆ ಆತ ಸತ್ತಿದ್ದರೆ ಈ ಏಲಂ ವಿಷಯದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಯಾವುದೇ ಸಂಚಲನ ಮೂಡದೇ ವಿಷಯ ಅಲ್ಲಿಗೆ ಮುಕ್ತಾಯವಾಗಬಹುದು. ಒಂದು ವೇಳೆ ಆತ ಬದುಕಿದ್ದರೆ ಆತ ಏನಾದರೂ ಒಂದು ಕ್ರಮ ತೆಗೆದುಕೊಂಡೇ ಕೊಳ್ಳುತ್ತಾನೆ. ಅದನ್ನು ರಾ ಬಹಳ ಸೂಕ್ಷ್ಮವಾಗಿ ಗಮನಿಸುತ್ತಿದೆ. ದಾವೂದ್ ಏನಾದರೂ ಒಂದು ತಪ್ಪು ಮಾಡಲಿ ಎಂದು ಅಂತರಾಷ್ಟ್ರೀಯ ತನಿಖಾ ಸಂಸ್ಥೆಗಳು ಕೂಡ ಕಾಯುತ್ತಿವೆ.

ಈಗ ಜನವರಿ 5 ರಂದು ಹರಾಜಿಗೆ ಇಟ್ಟಿರುವ ಆಸ್ತಿಗಳಲ್ಲಿ ದಾವೂದ್ ಹುಟ್ಟಿದ ರತ್ನಗಿರಿ ಜಿಲ್ಲೆಯ ಖೇಡಾ ತಾಲೂಕಿನಲ್ಲಿ ಆತನ ಬಂಗ್ಲೆ ಮತ್ತು ವಿಶಾಲ ಮಾವಿನ ತೋಪು ಕೂಡ ಇದೆ. 2017 ರಲ್ಲಿ ದಾವೂದ್ ಮಾಲೀಕತ್ವದ ದಕ್ಷಿಣ ಮುಂಬೈನಲ್ಲಿದ್ದ ಹೋಟೇಲ್, ರೂಂಗಳನ್ನು, ಅತಿಥಿ ಗೃಹವನ್ನು ಎನ್ ಡಿಎ ನೇತೃತ್ವದ ಕೇಂದ್ರ ಸರಕಾರ ಹರಾಜಿನ ಮೂಲಕ ಮಾರಿತ್ತು ಎನ್ನುವುದನ್ನು ಇಲ್ಲಿ ಸ್ಮರಿಸಬಹುದು.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search