• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದಾವೂದ್ ಆಸ್ತಿ ಹರಾಜಿಗೆ ದಿನ ಫಿಕ್ಸ್!

Tulunadu News Posted On December 25, 2023
0


0
Shares
  • Share On Facebook
  • Tweet It

ಕುಖ್ಯಾತ ಭೂಗತ ಪಾತಕಿ, ಕ್ರಿಮಿನಲ್ ದಾವೂದ್ ಇಬ್ರಾಹಿಂನ ಮುಂಬೈ ಮತ್ತು ರತ್ನಗಿರಿಯಲ್ಲಿರುವ ಕೋಟ್ಯಾಂತರ ರೂಪಾಯಿ ಬೆಲೆಬಾಳುವ ಆಸ್ತಿಯನ್ನು ಹರಾಜಿಗೆ ಇಡಲಾಗಿದೆ. 2024 ರ ಜನವರಿ 5 ರಂದು ಕೇಂದ್ರ ಸರಕಾರ ಈ ಆಸ್ತಿಗಳನ್ನು ಹರಾಜಿನ ಮೂಲಕ ಮಾರಾಟ ಮಾಡಲಿದೆ.

ಒಂದು ವೇಳೆ ದಾವೂದ್ ಇನ್ನೂ ಬದುಕಿದ್ದರೆ ಅವನಿಗೆ ಇದೊಂದು ಶಾಕ್ ಆಗಬಹುದು ಎಂದು ಹೇಳಲಾಗುತ್ತಿದೆ. ಇತ್ತೀಚೆಗೆ ವಿಷಪ್ರಾಶನದ ಮೂಲಕ ದಾವೂದ್ ಮೃತನಾಗಿದ್ದಾನೆ ಎನ್ನುವ ವಿಚಾರವನ್ನು ಅಲ್ಲಿಯ ಪತ್ರಕರ್ತರೊಬ್ಬರು ನೀಡಿದ ಸುಳಿವಿನ ಮೇರೆಗೆ ಭಾರತೀಯ ಮಾಧ್ಯಮಗಳು ಅದನ್ನು ಬಹಿರಂಗಗೊಳಿಸಿದ್ದರು. ಆದರೆ ಆ ಸುದ್ದಿ ಇನ್ನು ಕೂಡ ಅಧಿಕೃತವಾಗಿ ಘೋಷಣೆಯಾಗಿಲ್ಲ. ಆ ಸುದ್ದಿ ನಿಜವೋ, ಅಲ್ಲವೋ ಎನ್ನುವುದು ಜನವರಿ 5 ಕ್ಕೆ ತಿಳಿಯಲಿದೆ. ಒಂದು ವೇಳೆ ಆತ ಸತ್ತಿದ್ದರೆ ಈ ಏಲಂ ವಿಷಯದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಯಾವುದೇ ಸಂಚಲನ ಮೂಡದೇ ವಿಷಯ ಅಲ್ಲಿಗೆ ಮುಕ್ತಾಯವಾಗಬಹುದು. ಒಂದು ವೇಳೆ ಆತ ಬದುಕಿದ್ದರೆ ಆತ ಏನಾದರೂ ಒಂದು ಕ್ರಮ ತೆಗೆದುಕೊಂಡೇ ಕೊಳ್ಳುತ್ತಾನೆ. ಅದನ್ನು ರಾ ಬಹಳ ಸೂಕ್ಷ್ಮವಾಗಿ ಗಮನಿಸುತ್ತಿದೆ. ದಾವೂದ್ ಏನಾದರೂ ಒಂದು ತಪ್ಪು ಮಾಡಲಿ ಎಂದು ಅಂತರಾಷ್ಟ್ರೀಯ ತನಿಖಾ ಸಂಸ್ಥೆಗಳು ಕೂಡ ಕಾಯುತ್ತಿವೆ.

ಈಗ ಜನವರಿ 5 ರಂದು ಹರಾಜಿಗೆ ಇಟ್ಟಿರುವ ಆಸ್ತಿಗಳಲ್ಲಿ ದಾವೂದ್ ಹುಟ್ಟಿದ ರತ್ನಗಿರಿ ಜಿಲ್ಲೆಯ ಖೇಡಾ ತಾಲೂಕಿನಲ್ಲಿ ಆತನ ಬಂಗ್ಲೆ ಮತ್ತು ವಿಶಾಲ ಮಾವಿನ ತೋಪು ಕೂಡ ಇದೆ. 2017 ರಲ್ಲಿ ದಾವೂದ್ ಮಾಲೀಕತ್ವದ ದಕ್ಷಿಣ ಮುಂಬೈನಲ್ಲಿದ್ದ ಹೋಟೇಲ್, ರೂಂಗಳನ್ನು, ಅತಿಥಿ ಗೃಹವನ್ನು ಎನ್ ಡಿಎ ನೇತೃತ್ವದ ಕೇಂದ್ರ ಸರಕಾರ ಹರಾಜಿನ ಮೂಲಕ ಮಾರಿತ್ತು ಎನ್ನುವುದನ್ನು ಇಲ್ಲಿ ಸ್ಮರಿಸಬಹುದು.

0
Shares
  • Share On Facebook
  • Tweet It




Trending Now
ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
Tulunadu News December 22, 2025
ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
Tulunadu News December 22, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
  • Popular Posts

    • 1
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 2
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • 3
      ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • 4
      ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • 5
      ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!

  • Privacy Policy
  • Contact
© Tulunadu Infomedia.

Press enter/return to begin your search