• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ರಾಜ್ಯದ ಅಕಾಡೆಮಿಗಳಿಗೆ 1 ವರ್ಷದಿಂದ ಕೇಳುವವರೇ ಇಲ್ಲ!

Tulunadu News Posted On December 25, 2023
0


0
Shares
  • Share On Facebook
  • Tweet It

ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಅರು ತಿಂಗಳು ಕಳೆದಿದೆ. ರಾಜ್ಯದ ನಾಡು – ನುಡಿ ಸಂಸ್ಕೃತಿಯನ್ನು ಉಳಿಸಿ, ಬೆಳೆಸುವ, ಕಲಾವಿದರನ್ನು ಪ್ರೋತ್ಸಾಹಿಸುವ ಹೊಣೆ ಹೊತ್ತಿರುವ ಅಕಾಡೆಮಿಗಳಿಗೆ ಇಲ್ಲಿಯ ತನಕ ಅಧ್ಯಕ್ಷರುಗಳನ್ನು, ಸದಸ್ಯರನ್ನು ನೇಮಿಸದೇ ದಿವ್ಯ ನಿರ್ಲಕ್ಷ್ಯ ವಹಿಸಿರುವುದು ಎದ್ದು ಕಾಣುತ್ತದೆ.

ರಾಜ್ಯದಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ, ಜಾನಪದ ಅಕಾಡೆಮಿ, ಸಂಗಿತ ನೃತ್ಯ ಅಕಾಡೆಮಿ, ಶಿಲ್ಪಕಲಾ ಅಕಾಡೆಮಿ, ಲಲಿತಕಲಾ ಅಕಾಡೆಮಿ, ನಾಟಕ ಅಕಾಡೆಮಿ, ಯಕ್ಷಗಾನ ಅಕಾಡೆಮಿ, ತುಳು ಸಾಹಿತ್ಯ ಅಕಾಡೆಮಿ, ಕೊಂಕಣಿ ಸಾಹಿತ್ಯ ಅಕಾಡೆಮಿ, ಬ್ಯಾರಿ ಸಾಹಿತ್ಯ ಅಕಾಡೆಮಿ, ಕೊಡವ ಸಾಹಿತ್ಯ ಅಕಾಡೆಮಿ, ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಬಯಲಾಟ ಅಕಾಡೆಮಿ, ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗಳ ಅಧ್ಯಕ್ಷರು ಮತ್ತು ಸದಸ್ಯರ ನೇಮಕ ಆಗಬೇಕಿದೆ.

ಇದರೊಂದಿಗೆ ಕನ್ನಡ ಪುಸ್ತಕ ಪ್ರಾಧಿಕಾರ, ಕುವೆಂಪು ಭಾಷಾ ಭಾರತಿ ಪ್ರಾಧಿಕಾರ, ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಗಡಿ ಅಭಿವೃದ್ಧಿ, ಪ್ರಾಧಿಕಾರದ ಅಧ್ಯಕ್ಷ ಮತ್ತು ಸದಸ್ಯರ ನೇಮಕವೂ ಬಾಕಿ ಇದೆ. ಹಿಂದಿನ ಸರಕಾರದ ಅವಧಿ ಮುಗಿಯುವ ನಾಲ್ಕೈದು ತಿಂಗಳ ಮೊದಲೇ ಬಹುತೇಕ ಅಕಾಡೆಮಿಗಳ ಅಧ್ಯಕ್ಷರ ಮತ್ತು ಸದಸ್ಯರ ಅವಧಿ ಮುಕ್ತಾಯಗೊಂಡು ಸಮಿತಿ ಭರ್ಖಾಸ್ತುಗೊಂಡಿತ್ತು. ಈಗ ಅಧ್ಯಕ್ಷರು, ಸದಸ್ಯರಿಲ್ಲದೇ ಬಹುತೇಕ ಅಕಾಡೆಮಿಗಳು ಖಾಲಿ ಹೊಡೆದು ವರ್ಷವಾಗುತ್ತಿದೆ.

ಕಾಂಗ್ರೆಸ್ ಸರಕಾರದಲ್ಲಿ ಈ ನೇಮಕಾತಿಗಳು ಬೇಗ ಆಗಬಹುದು ಎನ್ನುವ ಸಾಹಿತ್ಯಾಭಿಮಾನಿಗಳ ನಿರೀಕ್ಷೆ ಹುಸಿಯಾಗಿದೆ. ಸರಕಾರ ಈಗ ಅನೇಕ ಗ್ಯಾರಂಟಿ ಯೋಜನೆ ಜಾರಿ ಮಾಡುವುದರಿಂದ ಆರ್ಥಿಕ ಸಂಕಷ್ಟ ಎದುರಾಗಿರುವುದರಿಂದಲೇ ಅಕಾಡೆಮಿಗಳ ನೇಮಕ ನಿಧಾನ ಆಗುತ್ತಿದೆ. ಹೀಗಾಗಿ ವಿಧಿಇಲ್ಲದೇ ನೇಮಕಾತಿ ಪ್ರಕ್ರಿಯೆ ಮುಂದೂಡಲಾಗುತ್ತಿದೆ ಎನ್ನಲಾಗುತ್ತಿದೆ. ಒಟ್ಟಿನಲ್ಲಿ ಈ ವಿಳಂಬದಿಂದಾಗಿ ಕನ್ನಡ ನಾಡಿನ ಕೆಲಸಗಳು ನಿಂತಿರುವುದು ಮಾತ್ರ ನಿಜ.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
  • Popular Posts

    • 1
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 2
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 3
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 4
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?

  • Privacy Policy
  • Contact
© Tulunadu Infomedia.

Press enter/return to begin your search