• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ರಾಜ್ಯದ ಅಕಾಡೆಮಿಗಳಿಗೆ 1 ವರ್ಷದಿಂದ ಕೇಳುವವರೇ ಇಲ್ಲ!

Tulunadu News Posted On December 25, 2023
0


0
Shares
  • Share On Facebook
  • Tweet It

ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಅರು ತಿಂಗಳು ಕಳೆದಿದೆ. ರಾಜ್ಯದ ನಾಡು – ನುಡಿ ಸಂಸ್ಕೃತಿಯನ್ನು ಉಳಿಸಿ, ಬೆಳೆಸುವ, ಕಲಾವಿದರನ್ನು ಪ್ರೋತ್ಸಾಹಿಸುವ ಹೊಣೆ ಹೊತ್ತಿರುವ ಅಕಾಡೆಮಿಗಳಿಗೆ ಇಲ್ಲಿಯ ತನಕ ಅಧ್ಯಕ್ಷರುಗಳನ್ನು, ಸದಸ್ಯರನ್ನು ನೇಮಿಸದೇ ದಿವ್ಯ ನಿರ್ಲಕ್ಷ್ಯ ವಹಿಸಿರುವುದು ಎದ್ದು ಕಾಣುತ್ತದೆ.

ರಾಜ್ಯದಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ, ಜಾನಪದ ಅಕಾಡೆಮಿ, ಸಂಗಿತ ನೃತ್ಯ ಅಕಾಡೆಮಿ, ಶಿಲ್ಪಕಲಾ ಅಕಾಡೆಮಿ, ಲಲಿತಕಲಾ ಅಕಾಡೆಮಿ, ನಾಟಕ ಅಕಾಡೆಮಿ, ಯಕ್ಷಗಾನ ಅಕಾಡೆಮಿ, ತುಳು ಸಾಹಿತ್ಯ ಅಕಾಡೆಮಿ, ಕೊಂಕಣಿ ಸಾಹಿತ್ಯ ಅಕಾಡೆಮಿ, ಬ್ಯಾರಿ ಸಾಹಿತ್ಯ ಅಕಾಡೆಮಿ, ಕೊಡವ ಸಾಹಿತ್ಯ ಅಕಾಡೆಮಿ, ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಬಯಲಾಟ ಅಕಾಡೆಮಿ, ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗಳ ಅಧ್ಯಕ್ಷರು ಮತ್ತು ಸದಸ್ಯರ ನೇಮಕ ಆಗಬೇಕಿದೆ.

ಇದರೊಂದಿಗೆ ಕನ್ನಡ ಪುಸ್ತಕ ಪ್ರಾಧಿಕಾರ, ಕುವೆಂಪು ಭಾಷಾ ಭಾರತಿ ಪ್ರಾಧಿಕಾರ, ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಗಡಿ ಅಭಿವೃದ್ಧಿ, ಪ್ರಾಧಿಕಾರದ ಅಧ್ಯಕ್ಷ ಮತ್ತು ಸದಸ್ಯರ ನೇಮಕವೂ ಬಾಕಿ ಇದೆ. ಹಿಂದಿನ ಸರಕಾರದ ಅವಧಿ ಮುಗಿಯುವ ನಾಲ್ಕೈದು ತಿಂಗಳ ಮೊದಲೇ ಬಹುತೇಕ ಅಕಾಡೆಮಿಗಳ ಅಧ್ಯಕ್ಷರ ಮತ್ತು ಸದಸ್ಯರ ಅವಧಿ ಮುಕ್ತಾಯಗೊಂಡು ಸಮಿತಿ ಭರ್ಖಾಸ್ತುಗೊಂಡಿತ್ತು. ಈಗ ಅಧ್ಯಕ್ಷರು, ಸದಸ್ಯರಿಲ್ಲದೇ ಬಹುತೇಕ ಅಕಾಡೆಮಿಗಳು ಖಾಲಿ ಹೊಡೆದು ವರ್ಷವಾಗುತ್ತಿದೆ.

ಕಾಂಗ್ರೆಸ್ ಸರಕಾರದಲ್ಲಿ ಈ ನೇಮಕಾತಿಗಳು ಬೇಗ ಆಗಬಹುದು ಎನ್ನುವ ಸಾಹಿತ್ಯಾಭಿಮಾನಿಗಳ ನಿರೀಕ್ಷೆ ಹುಸಿಯಾಗಿದೆ. ಸರಕಾರ ಈಗ ಅನೇಕ ಗ್ಯಾರಂಟಿ ಯೋಜನೆ ಜಾರಿ ಮಾಡುವುದರಿಂದ ಆರ್ಥಿಕ ಸಂಕಷ್ಟ ಎದುರಾಗಿರುವುದರಿಂದಲೇ ಅಕಾಡೆಮಿಗಳ ನೇಮಕ ನಿಧಾನ ಆಗುತ್ತಿದೆ. ಹೀಗಾಗಿ ವಿಧಿಇಲ್ಲದೇ ನೇಮಕಾತಿ ಪ್ರಕ್ರಿಯೆ ಮುಂದೂಡಲಾಗುತ್ತಿದೆ ಎನ್ನಲಾಗುತ್ತಿದೆ. ಒಟ್ಟಿನಲ್ಲಿ ಈ ವಿಳಂಬದಿಂದಾಗಿ ಕನ್ನಡ ನಾಡಿನ ಕೆಲಸಗಳು ನಿಂತಿರುವುದು ಮಾತ್ರ ನಿಜ.

0
Shares
  • Share On Facebook
  • Tweet It




Trending Now
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
  • Popular Posts

    • 1
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 2
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search