• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿ ಸರಕಾರದಲ್ಲಿ ಕ್ರೀಡಾಪಟುಗಳಿಗೆ ವಿಶೇಷ ಸ್ಥಾನಮಾನ ಸಿಗುತ್ತಿದೆ – ಅಂಜು ಬಾಬ್ಬಿ ಜಾರ್ಜ್

Tulunadu News Posted On December 26, 2023
0


0
Shares
  • Share On Facebook
  • Tweet It

20 ವರ್ಷಗಳ ಹಿಂದೆ ನನಗೆ ಮೊದಲ ಬಾರಿ ವಿಶ್ವ ಚಾಂಪಿಯನ್ ಶಿಪ್ ನಲ್ಲಿ ಪದಕ ದೊರೆತಾಗ ನನ್ನ ಇಲಾಖೆಯಲ್ಲಿ ಪದೋನ್ನತಿ ಕೊಡಲು ಅಧಿಕಾರಿಗಳು ಸಿದ್ಧರಿರಲಿಲ್ಲ. ಯಾಕೆಂದರೆ ಅದು ತಮ್ಮ ಅಧಿಕಾರದ ವ್ಯಾಪ್ತಿಯಲ್ಲಿ ಬರುವುದಿಲ್ಲ ಎನ್ನುತ್ತಿದ್ದರು.

ಆದರೆ ನೀರಜ್ (ಒಲಿಂಪಿಕ್ಸ್ ವಿಜೇತ) ಪದಕ ಗೆದ್ದ ಬಳಿಕ ಬಹಳ ಬದಲಾವಣೆ ಆಗಿತ್ತು. ನಾವು ಅದನ್ನು ಸಂಭ್ರಮಿಸಿದ ರೀತಿ, ನೀವು (ಮೋದಿ) ಸಂಭ್ರಮಿಸಿದ ರೀತಿ, ದೇಶ ಸಂಭ್ರಮಿಸಿದ ರೀತಿ ಎಲ್ಲವೂ ವಿಶೇಷ ಖುಷಿ ನೀಡುತ್ತಿತ್ತು. ನನಗೆ ಅವರ ಬಗ್ಗೆ ಅಸೂಯೆ ಬರುತ್ತಿತ್ತು. ಯಾಕೆಂದರೆ ನಾನು ಗೆದ್ದ ಅವಧಿಯಲ್ಲಿ ಇಷ್ಟೆಲ್ಲಾ ಇರಲೇ ಇಲ್ಲ. ಖೇಲೋ ಇಂಡಿಯಾ ಯೋಜನೆ ಹಾಗೂ ಕೇಂದ್ರ ಸರಕಾರದ ಯೋಜನೆಗಳಿಂದ ಕ್ರೀಡಾಳುಗಳ ಭವಿಷ್ಯ ಬದಲಾಗುತ್ತಿದೆ. ಎಲ್ಲರೂ ನಮ್ಮ ಗೆಲುವನ್ನು ತಮ್ಮ ಗೆಲುವೆಂದು ಸಂಭ್ರಮಿಸುತ್ತಿದ್ದಾರೆ. ನಮ್ಮ ಕ್ರೀಡಾಪಟುಗಳು ಅಂತರಾಷ್ಟ್ರೀಯ ಮಟ್ಟದಲ್ಲಿಯೂ ಉತ್ತಮ ಸಾಧನೆ ಮಾಡುತ್ತಿದ್ದಾರೆ. ನಮ್ಮ ಸಮಯದಲ್ಲಿ ಒಂದೆರಡು ಅಥ್ಲಿಟ್ ಗಳು ಕಾಣುತ್ತಿದ್ದರು. ಈಗ ಅಥ್ಲಿಟ್ ಗಳ ಸಮೂಹವೇ ಕಾಣಸಿಗುತ್ತಿದೆ. ಇದಕ್ಕೆಲ್ಲಾ ನಿಮ್ಮದೇ (ಮೋದಿ) ನಾಯಕತ್ವ ಕಾರಣ ಎಂದು ಅಂಜು ಬಾಬ್ಬಿ ಜಾರ್ಜ್ ಹೇಳಿದ್ದಾರೆ.


ಪ್ರತಿಯೊಬ್ಬ ಹೆಣ್ಣುಮಗಳು ಕೂಡ ಈಗ ಕ್ರೀಡಾಕ್ಷೇತ್ರದಲ್ಲಿ ಏನಾದರೂ ಸಾಧನೆ ಮಾಡಬೇಕೆಂಬ ಕನಸು ಕಾಣುತ್ತಿದ್ದಾಳೆ. ಅದು ನಿಜವಾಗುತ್ತದೆ ಎಂಬ ಕಲ್ಪನೆ ಕೂಡ ಅವಳಿಗಿದೆ. ಅದರೊಂದಿಗೆ 36 ನೇ ಒಲಿಂಪಿಕ್ಸ್ ಕ್ರೀಡಾಕೂಟದ ಅತಿಥೇಯವನ್ನು ನಾವು ವಹಿಸುತ್ತೇವೆ ಎಂದು ನೀವು ಘೋಷಣೆ ಮಾಡಿದ ಬಳಿಕ ನಮ್ಮ ಖುಷಿ ಇನ್ನಷ್ಟು ಗರಿಗೆದರಿದೆ. ಅದರ ಸಿದ್ಧತೆಯನ್ನು ನಾವು ಈಗಾಗಲೇ ಆರಂಭಿಸಿದ್ದೇವೆ. ಇನ್ನು ಆ ಕ್ರೀಡಾಕೂಟವನ್ನು ಸೇರಿಸಿಕೊಂಡು ಭಾರತ ವಿಶ್ವದಲ್ಲಿ ಕ್ರೀಡೆಯಲ್ಲಿ ಉನ್ನತ ಸ್ಥಾನಕ್ಕೆ ಏರಲಿದೆ ಎಂದು ಅಂಜು ಹೇಳಿದರು. ಪ್ರಧಾನಿ ನರೇಂದ್ರ ಮೋದಿಯವರು ವಿವಿಧ ಕ್ರೈಸ್ತ ಪ್ರಮುಖರೊಂದಿಗೆ ಕ್ರಿಸ್ ಮಸ್ ಹಬ್ಬದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿದಾಗ ಅಂಜು ಅವರು ಪ್ರಧಾನಿ ಸಮ್ಮುಖದಲ್ಲಿ ಈ ರೀತಿ ಮಾತನಾಡಿ ತಮ್ಮ ಖುಷಿ ವ್ಯಕ್ತಪಡಿಸಿದ್ದಾರೆ

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • 3
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search