• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಚುನಾವಣೆ: ರಕ್ಷಣೆ ಕೋರಿ ಉಗ್ರ ಹಫೀಜ್ ಸಯಿದ್ ಮನವಿ!

Tulunadu News Posted On December 26, 2023
0


0
Shares
  • Share On Facebook
  • Tweet It

ಮುಂದಿನ ವರ್ಷ ಫೆಬ್ರವರಿಯಲ್ಲಿ ಪಾಕಿಸ್ತಾನದಲ್ಲಿ ನಡೆಯಲಿರುವ ಸಾವರ್ತಿಕ ಚುನಾವಣೆಯಲ್ಲಿ ತನ್ನ ಪಕ್ಷ ಪಾಕಿಸ್ತಾನ ಮರ್ಖಾಜಿ ಮುಸ್ಲಿಂ ಲೀಗ್ ಹೆಚ್ಚಿನ ಪ್ರಾಂತ್ರ್ಯಗಳಲ್ಲಿ ಸ್ಪರ್ಧಿಸಲಿದೆ ಎಂದು ಉಗ್ರ ಹಫೀಜ್ ಸಯೀದ್ ಘೋಷಿಸಿದ್ದಾನೆ. ತನ್ನ ಪುತ್ರ ತಾಲ್ಹಾ ಸಯೀದ್ ಲಾಹೋರ್ ನಿಂದ ಲೋಕಸಭೆಗೆ ಸ್ಪರ್ಧಿಸುವುದಾಗಿ ಹೇಳಿಕೆ ನೀಡಿರುವ ಹಫೀಜ್ ಪಿಎಂಎಂಎಲ್ ಕೇಂದ್ರೀಯ ಅಧ್ಯಕ್ಷ ಖಾಲೀದ್ ಮಸೂದ್ ಸಿಂಧೂ ಮಾಜಿ ಪ್ರಧಾನಿ, ಪಾಕಿಸ್ತಾನ ಮುಸ್ಲಿಂ ಲೀಗ್ ಅಧ್ಯಕ್ಷ ನವಾಜ್ ಶರೀಫ್ ವಿರುದ್ಧ ಕಣಕ್ಕೆ ಇಳಿಯಲಿದ್ದಾನೆ ಎಂದು ಹೇಳಿದ್ದಾನೆ. ಪಿಎಂಎಂಎಲ್ ಚಿನ್ನೆ ಕುರ್ಚಿ ಎಂದು ತಿಳಿಸಲಾಗಿದೆ.

ಆದರೆ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪಿಎಂಎಂಎಲ್ ಅಧ್ಯಕ್ಷ ಸಿಂಧೂ ” ನಾವು ಅಧಿಕಾರಕ್ಕೆ ಬರುವುದು ಭಷ್ಟ್ರಾಚಾರ ಮಾಡಲು ಅಲ್ಲ, ಪಾಕಿಸ್ತಾನದ ಜನರ ಉನ್ನತಿ ಮತ್ತು ಪಾಕಿಸ್ತಾನವನ್ನು ಇಸ್ಲಾಮಿಕ್ ವೆಲ್ಫೇರ್ ದೇಶವನ್ನಾಗಿ ಮಾಡುವುದೇ ಗುರಿ” ಎಂದಿದ್ದಾರೆ. ಇನ್ನು ಸಿಂಧೂ ತಮ್ಮ ಪಕ್ಷಕ್ಕೂ ಉಗ್ರ ಹಫೀಜ್ ಸಯೀದ್ ಸಂಘಟನೆಗೂ ಸಂಬಂಧವೇ ಇಲ್ಲ. ಆತ ನಮ್ಮ ಪಕ್ಷಕ್ಕೆ ನೆರವು ನೀಡಿಲ್ಲ ಎಂದು ಹೇಳಿದ್ದಾರೆ. ಹಫೀಜ್ ಸಯೀದ್ ಲಷ್ಕರ್ ಈ ತೈಬಾದ ಮುಖ್ಯಸ್ಥನಾಗಿದ್ದು, ಇತನ ತಲೆಗೆ ಯುನೈಟೆಡ್ ಸ್ಟೇಟ್ ಹತ್ತು ಮಿಲಿಯನ್ ಡಾಲರ್ ಬಹುಮಾನ ಘೋಷಿಸಿದೆ.

ತಾವು ಚುನಾವಣೆಗೆ ಸ್ಪರ್ಧಿಸುತ್ತಿರುವುದರಿಂದ ತಮಗೆ ಪ್ರಚಾರದ ಸಮಯದಲ್ಲಿ ಸುರಕ್ಷತೆ ಅವಶ್ಯವಾಗಿದೆ. ಆದ್ದರಿಂದ ಪಾಕಿಸ್ತಾನ ಆಡಳಿತ ತನಗೆ ಮತ್ತು ಕುಟುಂಬಕ್ಕೆ ರಕ್ಷಣೆ ನೀಡಬೇಕು ಎಂದು ಆತ ಕೋರಿದ್ದಾನೆ. ಅವನು ಕೂಡ ಅನಾಮಧೇಯ ವ್ಯಕ್ತಿಗಳಿಂದ ಯಾವಾಗ ತನ್ನ ಸಾವು ಸಂಭವಿಸಬಹುದು ಎನ್ನುವ ಆತಂಕದಿಂದ ದಿನ ದೂಡುತ್ತಿದ್ದಾನೆ ಎಂದು ನಿಕಟವರ್ತಿಗಳು ಹೇಳಿದ್ದಾರೆ. ಹಫೀಜ್ ಮುಂಬೈ 26/11 ದಾಳಿಯ ಪ್ರಧಾನ ಸೂತ್ರಧಾರನಾಗಿದ್ದು, ಭಾರತದ ಟಾಪ್ ಉಗ್ರರ ಲಿಸ್ಟ್ ನಲ್ಲಿ ಅವರ ಹೆಸರಿದೆ.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
  • Popular Posts

    • 1
      ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

  • Privacy Policy
  • Contact
© Tulunadu Infomedia.

Press enter/return to begin your search