• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕ್ಯಾಪ್ಟನ್ ನಿಧನಕ್ಕೆ ಅಭಿಮಾನಿಗಳ ಕಣ್ಣೀರು

Tulunadu News Posted On December 28, 2023
0


0
Shares
  • Share On Facebook
  • Tweet It

ತಮಿಳು ಚಿತ್ರರಂಗದ ಖ್ಯಾತ ನಟ  ವಿಜಯಕಾಂತ್ ಅವರು ನಿಧನರಾಗಿದ್ದಾರೆ. ಡಿಎಂಡಿಕೆ ಪಕ್ಷದ ಸ್ಥಾಪಕರಾಗಿದ್ದ ವಿಜಯಕಾಂತ್ ಅವರ ಮೂಲ ಹೆಸರು ನಾರಾಯಣನ್ ವಿಜಯರಾಜ್ ಅಲಗರಸ್ವಾಮಿ. ಇವರು ತಮಿಳುನಾಡು ವಿಧಾನಸಭೆಯಲ್ಲಿ 2011 ರಿಂದ 2016 ರವರೆಗೆ ಪ್ರತಿಪಕ್ಷದ ನಾಯಕರಾಗಿ ಸೇವೆ ಸಲ್ಲಿಸಿದ್ದಾರೆ.

ಕ್ಯಾಪ್ಟನ್ ಎಂದೇ ಪ್ರಖ್ಯಾತರಾಗಿದ್ದ ವಿಜಯಕಾಂತ್ ಇವರನ್ನು ಇತ್ತೀಚೆಗೆ ವೈದ್ಯಕೀಯ ಪರೀಕ್ಷೆಗೆ ಒಳಪಡಿಸುವಾಗ ಕೊರೊನಾ ಸೋಂಕು ಪತ್ತೆಯಾಗಿತ್ತು. ಇವರಿಗೆ ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡ ಪರಿಣಾಮ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಅನಾರೋಗ್ಯದ ಕಾರಣದಿಂದ ಕಳೆದ ನಾಲ್ಕೈದು ವರ್ಷಗಳಿಂದ ವಿಶ್ರಾಂತಿಯಲ್ಲಿದ್ದ ವಿಜಯಕಾಂತ್ ಅವರು ಪಕ್ಷದ ಜವಾಬ್ದಾರಿಯನ್ನು ಪತ್ನಿ ಪ್ರೇಮಲತಾ ಅವರಿಗೆ ಹಸ್ತಾಂತರಿಸಿದ್ದರು.

ಎರಡು ವಾರಗಳ ಹಿಂದೆಯಷ್ಟೇ ಪ್ರೇಮಲತಾ ಅವರನ್ನು ಡಿಎಂಡಿಕೆ ಪಕ್ಷದ ಪ್ರಧಾನ ಕಾರ್ಯದರ್ಶಿಯನ್ನಾಗಿ ಘೋಷಿಸಲಾಗಿತ್ತು. ವಿಜಯಕಾಂತ್ ನಿಧನಕ್ಕೆ ಪ್ರಧಾನಿ ಮೋದಿಯವರು ಕೂಡ ಸಂತಾಪ ವ್ಯಕ್ತಪಡಿಸಿದ್ದಾರೆ. 71 ವರ್ಷ ವಯಸ್ಸಿನ ವಿಜಯಕಾಂತ್ ಅವರು ಸುಮಾರು 150 ಕ್ಕೂ ಹೆಚ್ಚಿನ ಸಿನೆಮಾಗಳಲ್ಲಿ ವಿಶಿಷ್ಟ ಪಾತ್ರಗಳಿಂದ ಅಭಿಮಾನಿಗಳನ್ನು ರಂಜಿಸಿದ್ದಾರೆ. ವಿಜಯಕಾಂತ್ ಅವರು 2006 ರಲ್ಲಿ ಮೊದಲ ಬಾರಿಗೆ ತಮಿಳುನಾಡು ವಿಧಾನಸಭೆಯಲ್ಲಿ ಶಾಸಕರಾಗಿ ಪ್ರವೇಶ ಮಾಡಿದರು. 2014 ರಲ್ಲಿ ಎನ್ ಡಿಎ ಭಾಗವಾಗಿದ್ದ ಡಿಎಂಡಿಕೆ ಅಂತಹ ಯಶಸ್ಸನ್ನು ಕಾಣಲಿಲ್ಲ. ಪಕ್ಷದಲ್ಲಿ ಆಂತರಿಕ ವೈಮನಸ್ಸು, ಅನೇಕ ಹಿರಿಯ ನಾಯಕರ ಬಂಡಾಯದಿಂದ ಪಕ್ಷ ಕಳೆಗುಂದಿತ್ತು.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search