• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕ್ಯಾಪ್ಟನ್ ನಿಧನಕ್ಕೆ ಅಭಿಮಾನಿಗಳ ಕಣ್ಣೀರು

Tulunadu News Posted On December 28, 2023
0


0
Shares
  • Share On Facebook
  • Tweet It

ತಮಿಳು ಚಿತ್ರರಂಗದ ಖ್ಯಾತ ನಟ  ವಿಜಯಕಾಂತ್ ಅವರು ನಿಧನರಾಗಿದ್ದಾರೆ. ಡಿಎಂಡಿಕೆ ಪಕ್ಷದ ಸ್ಥಾಪಕರಾಗಿದ್ದ ವಿಜಯಕಾಂತ್ ಅವರ ಮೂಲ ಹೆಸರು ನಾರಾಯಣನ್ ವಿಜಯರಾಜ್ ಅಲಗರಸ್ವಾಮಿ. ಇವರು ತಮಿಳುನಾಡು ವಿಧಾನಸಭೆಯಲ್ಲಿ 2011 ರಿಂದ 2016 ರವರೆಗೆ ಪ್ರತಿಪಕ್ಷದ ನಾಯಕರಾಗಿ ಸೇವೆ ಸಲ್ಲಿಸಿದ್ದಾರೆ.

ಕ್ಯಾಪ್ಟನ್ ಎಂದೇ ಪ್ರಖ್ಯಾತರಾಗಿದ್ದ ವಿಜಯಕಾಂತ್ ಇವರನ್ನು ಇತ್ತೀಚೆಗೆ ವೈದ್ಯಕೀಯ ಪರೀಕ್ಷೆಗೆ ಒಳಪಡಿಸುವಾಗ ಕೊರೊನಾ ಸೋಂಕು ಪತ್ತೆಯಾಗಿತ್ತು. ಇವರಿಗೆ ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡ ಪರಿಣಾಮ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಅನಾರೋಗ್ಯದ ಕಾರಣದಿಂದ ಕಳೆದ ನಾಲ್ಕೈದು ವರ್ಷಗಳಿಂದ ವಿಶ್ರಾಂತಿಯಲ್ಲಿದ್ದ ವಿಜಯಕಾಂತ್ ಅವರು ಪಕ್ಷದ ಜವಾಬ್ದಾರಿಯನ್ನು ಪತ್ನಿ ಪ್ರೇಮಲತಾ ಅವರಿಗೆ ಹಸ್ತಾಂತರಿಸಿದ್ದರು.

ಎರಡು ವಾರಗಳ ಹಿಂದೆಯಷ್ಟೇ ಪ್ರೇಮಲತಾ ಅವರನ್ನು ಡಿಎಂಡಿಕೆ ಪಕ್ಷದ ಪ್ರಧಾನ ಕಾರ್ಯದರ್ಶಿಯನ್ನಾಗಿ ಘೋಷಿಸಲಾಗಿತ್ತು. ವಿಜಯಕಾಂತ್ ನಿಧನಕ್ಕೆ ಪ್ರಧಾನಿ ಮೋದಿಯವರು ಕೂಡ ಸಂತಾಪ ವ್ಯಕ್ತಪಡಿಸಿದ್ದಾರೆ. 71 ವರ್ಷ ವಯಸ್ಸಿನ ವಿಜಯಕಾಂತ್ ಅವರು ಸುಮಾರು 150 ಕ್ಕೂ ಹೆಚ್ಚಿನ ಸಿನೆಮಾಗಳಲ್ಲಿ ವಿಶಿಷ್ಟ ಪಾತ್ರಗಳಿಂದ ಅಭಿಮಾನಿಗಳನ್ನು ರಂಜಿಸಿದ್ದಾರೆ. ವಿಜಯಕಾಂತ್ ಅವರು 2006 ರಲ್ಲಿ ಮೊದಲ ಬಾರಿಗೆ ತಮಿಳುನಾಡು ವಿಧಾನಸಭೆಯಲ್ಲಿ ಶಾಸಕರಾಗಿ ಪ್ರವೇಶ ಮಾಡಿದರು. 2014 ರಲ್ಲಿ ಎನ್ ಡಿಎ ಭಾಗವಾಗಿದ್ದ ಡಿಎಂಡಿಕೆ ಅಂತಹ ಯಶಸ್ಸನ್ನು ಕಾಣಲಿಲ್ಲ. ಪಕ್ಷದಲ್ಲಿ ಆಂತರಿಕ ವೈಮನಸ್ಸು, ಅನೇಕ ಹಿರಿಯ ನಾಯಕರ ಬಂಡಾಯದಿಂದ ಪಕ್ಷ ಕಳೆಗುಂದಿತ್ತು.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search