• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕ್ಯಾಪ್ಟನ್ ನಿಧನಕ್ಕೆ ಅಭಿಮಾನಿಗಳ ಕಣ್ಣೀರು

Tulunadu News Posted On December 28, 2023
0


0
Shares
  • Share On Facebook
  • Tweet It

ತಮಿಳು ಚಿತ್ರರಂಗದ ಖ್ಯಾತ ನಟ  ವಿಜಯಕಾಂತ್ ಅವರು ನಿಧನರಾಗಿದ್ದಾರೆ. ಡಿಎಂಡಿಕೆ ಪಕ್ಷದ ಸ್ಥಾಪಕರಾಗಿದ್ದ ವಿಜಯಕಾಂತ್ ಅವರ ಮೂಲ ಹೆಸರು ನಾರಾಯಣನ್ ವಿಜಯರಾಜ್ ಅಲಗರಸ್ವಾಮಿ. ಇವರು ತಮಿಳುನಾಡು ವಿಧಾನಸಭೆಯಲ್ಲಿ 2011 ರಿಂದ 2016 ರವರೆಗೆ ಪ್ರತಿಪಕ್ಷದ ನಾಯಕರಾಗಿ ಸೇವೆ ಸಲ್ಲಿಸಿದ್ದಾರೆ.

ಕ್ಯಾಪ್ಟನ್ ಎಂದೇ ಪ್ರಖ್ಯಾತರಾಗಿದ್ದ ವಿಜಯಕಾಂತ್ ಇವರನ್ನು ಇತ್ತೀಚೆಗೆ ವೈದ್ಯಕೀಯ ಪರೀಕ್ಷೆಗೆ ಒಳಪಡಿಸುವಾಗ ಕೊರೊನಾ ಸೋಂಕು ಪತ್ತೆಯಾಗಿತ್ತು. ಇವರಿಗೆ ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡ ಪರಿಣಾಮ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಅನಾರೋಗ್ಯದ ಕಾರಣದಿಂದ ಕಳೆದ ನಾಲ್ಕೈದು ವರ್ಷಗಳಿಂದ ವಿಶ್ರಾಂತಿಯಲ್ಲಿದ್ದ ವಿಜಯಕಾಂತ್ ಅವರು ಪಕ್ಷದ ಜವಾಬ್ದಾರಿಯನ್ನು ಪತ್ನಿ ಪ್ರೇಮಲತಾ ಅವರಿಗೆ ಹಸ್ತಾಂತರಿಸಿದ್ದರು.

ಎರಡು ವಾರಗಳ ಹಿಂದೆಯಷ್ಟೇ ಪ್ರೇಮಲತಾ ಅವರನ್ನು ಡಿಎಂಡಿಕೆ ಪಕ್ಷದ ಪ್ರಧಾನ ಕಾರ್ಯದರ್ಶಿಯನ್ನಾಗಿ ಘೋಷಿಸಲಾಗಿತ್ತು. ವಿಜಯಕಾಂತ್ ನಿಧನಕ್ಕೆ ಪ್ರಧಾನಿ ಮೋದಿಯವರು ಕೂಡ ಸಂತಾಪ ವ್ಯಕ್ತಪಡಿಸಿದ್ದಾರೆ. 71 ವರ್ಷ ವಯಸ್ಸಿನ ವಿಜಯಕಾಂತ್ ಅವರು ಸುಮಾರು 150 ಕ್ಕೂ ಹೆಚ್ಚಿನ ಸಿನೆಮಾಗಳಲ್ಲಿ ವಿಶಿಷ್ಟ ಪಾತ್ರಗಳಿಂದ ಅಭಿಮಾನಿಗಳನ್ನು ರಂಜಿಸಿದ್ದಾರೆ. ವಿಜಯಕಾಂತ್ ಅವರು 2006 ರಲ್ಲಿ ಮೊದಲ ಬಾರಿಗೆ ತಮಿಳುನಾಡು ವಿಧಾನಸಭೆಯಲ್ಲಿ ಶಾಸಕರಾಗಿ ಪ್ರವೇಶ ಮಾಡಿದರು. 2014 ರಲ್ಲಿ ಎನ್ ಡಿಎ ಭಾಗವಾಗಿದ್ದ ಡಿಎಂಡಿಕೆ ಅಂತಹ ಯಶಸ್ಸನ್ನು ಕಾಣಲಿಲ್ಲ. ಪಕ್ಷದಲ್ಲಿ ಆಂತರಿಕ ವೈಮನಸ್ಸು, ಅನೇಕ ಹಿರಿಯ ನಾಯಕರ ಬಂಡಾಯದಿಂದ ಪಕ್ಷ ಕಳೆಗುಂದಿತ್ತು.

0
Shares
  • Share On Facebook
  • Tweet It




Trending Now
ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
Tulunadu News December 22, 2025
ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
Tulunadu News December 22, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
  • Popular Posts

    • 1
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • 2
      ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • 3
      ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • 4
      ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • 5
      ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!

  • Privacy Policy
  • Contact
© Tulunadu Infomedia.

Press enter/return to begin your search