• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಈಗ ರಾಜಸ್ಥಾನದಲ್ಲಿಯೂ ಬುಲ್ಡೋಜರ್ ಪ್ರಯೋಗ!

Tulunadu News Posted On December 29, 2023
0


0
Shares
  • Share On Facebook
  • Tweet It

ರಾಜಸ್ಥಾನ ಸರಕಾರ ಕೂಡ ಬುಲ್ಡೋಜರ್ ಅಸ್ತ್ರವನ್ನು ಸಮಾಜ ವಿಧ್ವಂಸಕ ಕೃತ್ಯ ಮಾಡುವವರ ವಿರುದ್ಧ ಪ್ರಯೋಗಿಸುವ ಮೂಲಕ ಉತ್ತರ ಪ್ರದೇಶ, ಮಧ್ಯಪ್ರದೇಶ ಸರಕಾರದ ಮಾದರಿಯನ್ನು ಅನುಸರಿಸಿದೆ. ರಾಜಸ್ಥಾನದ ಕರಣಿ ಸೇನಾ ಅಧ್ಯಕ್ಷ ಸುಖದೇವ್ ಸಿಂಗ್ ಗೊಗಮೆಡಿಯವರನ್ನು ಅವರ ಮನೆಗೆ ಬಂದು ಮಾತನಾಡುವ ನೆಪದಲ್ಲಿ ಆರೋಪಿಗಳು ಹತ್ಯೆಗೈದಿದ್ದರು. ಈ ಪ್ರಕರಣದ ಸಂಬಂಧ ಮೂವರನ್ನು ಬಂಧಿಸಲಾಗಿದೆ. ಈ ಪೈಕಿ ಪ್ರಮುಖ ಆರೋಪಿಯ ಮನೆಯನ್ನು ಬುಲ್ಡೋಜರ್ ಮೂಲಕ ಧ್ವಂಸಗೊಳಿಸಲಾಗಿದೆ. ಪ್ರಮುಖ ಆರೋಪಿ ರೋಹಿತ್ ರಾಥೋರ್ ಮನೆಯನ್ನು ಬುಲ್ಡೋಜರ್ ಮೂಲಕ ಧ್ವಂಸ ಮಾಡಲಾಗಿದೆ.

ಖಾಟಿಪುರದಲ್ಲಿರುವ ಆರೋಪಿ ರೋಹಿತ್ ಮನೆ ಅಕ್ರಮವಾಗಿ ಕಟ್ಟಲಾಗಿದೆ. ಈ ಕುರಿತು ಜೈಪುರ್ ಮುನ್ಸಿಪಾಲಿಟಿ ಕಾರ್ಪೋರೇಶನ್ ಸರಕಾರಿ ಜಾಗದಲ್ಲಿ ಅತಿಕ್ರಮವಾಗಿ ಹಾಗೂ ಅಕ್ರಮವಾಗಿ ಕಟ್ಟಿದ ಮನೆಯನ್ನು ಧ್ವಂಸಗೊಳಿಸಿದೆ. ಸುಖದೇವ್ ಹತ್ಯೆ ಬೆನ್ನಲ್ಲೇ ಗೋಲ್ಡಿ ಬ್ರಾರ್ ಗ್ಯಾಂಗ್ ಸ್ಟರ್ ಸಂಘಟನೆ ಇದರ ಹೊಣೆ ಹೊತ್ತುಕೊಂಡಿತ್ತು. ಇದೇ ಸಂಘಟನೆಯ ರೋಹಿತ್ ರಾಥೋರ್ ಫೇಸ್ ಬುಕ್ ಪೋಸ್ಟ್ ಮಾಡಿ ಹತ್ಯೆಯನ್ನು ಸಂಭ್ರಮಿಸಿದ್ದ. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಪ್ರಮುಖ ಆರೋಪಿ ರೋಹಿತ್ ರಾಥೋರ್, ನಿತಿನ್ ಫೌಜಿ, ಉದ್ದಮ್ ನನ್ನು ಬಂಧಿಸಲಾಗಿತ್ತು.

ಮೃತ ಸುಖ್ ದೇವ್ ಗೊಡಮೇಡಿ ಮೂಲತ: ರಾಷ್ಟ್ರೀಯ ರಜಪೂತ್ ಕರ್ಣಿ ಸೇನೆಯಲ್ಲಿದ್ದು, 2015 ರಲ್ಲಿ ಪದ್ಮಾವತ್ ಚಿತ್ರದ ಕುರಿತು ತಮ್ಮ ನಾಯಕ ಲೋಕೇಂದ್ರ ಸಿಂಗ್ ಕಲ್ವಿ ಜೊತೆ ಭಿನ್ನಾಭಿಪ್ರಾಯ ಬಂದ ಹಿನ್ನಲೆಯಲ್ಲಿ ತಮ್ಮದೇ ಪ್ರತ್ಯೇಕ ಬಣವನ್ನು ಸ್ಥಾಪಿಸಿದ್ದರು.

0
Shares
  • Share On Facebook
  • Tweet It




Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
  • Popular Posts

    • 1
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 2
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 3
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 4
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 5
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?

  • Privacy Policy
  • Contact
© Tulunadu Infomedia.

Press enter/return to begin your search