• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಮ ಪ್ರತಿಷ್ಠೆ ನಡೆಯುವಾಗ ಗರ್ಭಗುಡಿಯೊಳಗೆ ಯಾರೆಲ್ಲಾ ಇರುತ್ತಾರೆ, ಗೊತ್ತಾ?

Tulunadu News Posted On December 29, 2023
0


0
Shares
  • Share On Facebook
  • Tweet It

2024 ರ ಜನವರಿ 22 ಭಾರತೀಯರ ಪಾಲಿಗೆ ಬಹಳ ಪ್ರಮುಖವಾಗಿರುವ ದಿನ. ಅಂದು 500 ವರ್ಷ ಯಾವ ಕಾರಣಕ್ಕೆ ಸನಾತನಿಗಳು ಹೋರಾಟ ಮಾಡಿದರೋ ಅದರ ಫಲ ಕಾಣುವ ಸಮಯ. ಭಗವಂತ ಶ್ರೀ ರಾಮಚಂದ್ರ ಜನ್ಮ ತಾಳಿದ ಪುಣ್ಯಭೂಮಿ ಅಯೋಧ್ಯೆಯಲ್ಲಿ ಅಂದು ಭವ್ಯ ಮಂದಿರ ಲೋಕಾರ್ಪಣೆಗೊಳ್ಳಲಿರುವ ಶುಭ ದಿನ. ರಾಮಚಂದ್ರ ದೇವರ ಪ್ರಾಣಪ್ರತಿಷ್ಟೆ ಮತ್ತು ಇದರ ಧಾರ್ಮಿಕ ವಿಧಿವಿಧಾನಗಳು ಅಂದು ನಡೆಯಲಿವೆ. ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಹಿತ ದೇಶದ ಸುಮಾರು 6 ಸಾವಿರದಿಂದ 7 ಸಾವಿರದ ತನಕ ಗಣ್ಯಾತೀಗಣ್ಯರು ಈ ದಿನದಂದು ಅಯೋಧ್ಯೆಯಲ್ಲಿ ಈ ಐತಿಹಾಸಿಕ ಘಳಿಗೆಗೆ ಸಾಕ್ಷಿಯಾಗಲಿದ್ದಾರೆ.

ಎಲ್ಲರೂ ಈ ದೇವಸ್ಥಾನದ ಆವರಣದಲ್ಲಿ ಮತ್ತು ಪ್ರಾಂಗಣದಲ್ಲಿ ಉಪಸ್ಥಿತರಿದ್ದರೆ ಪ್ರಾಣ ಪ್ರತಿಷ್ಟೆ ಆಗುವ ಗರ್ಭಗುಡಿಯೊಳಗೆ ಯಾರೆಲ್ಲ ಹೋಗಬಹುದು ಎನ್ನುವ ಕುತೂಹಲ ಎಲ್ಲರಿಗೂ ಇರುತ್ತದೆ. ಯಾರಿಗೆಲ್ಲಾ ಗರ್ಭಗುಡಿಯೊಳಗೆ ಪ್ರವೇಶ ಇದೆ ಎನ್ನುವುದಕ್ಕೆ ಈಗ ಉತ್ತರ ಸಿಕ್ಕಿದೆ. ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್, ಉತ್ತರ ಪ್ರದೇಶದ ರಾಜ್ಯಪಾಲೆ ಆನಂದಿ ಬೆನ್ ಪಟೇಲ್ ಮತ್ತು ಪ್ರಮುಖ ಪುರೋಹಿತರು ಗರ್ಭಗುಡಿಯೊಳಗೆ ಹೋಗಲಿದ್ದಾರೆ. ಪ್ರಾಣ ಪ್ರತಿಷ್ಟೆ ನಡೆಯುವಾಗ ಗರ್ಭಗುಡಿಗೆ ಪರದೆ ಎಳೆಯಲಾಗುತ್ತದೆ.

ಅಯೋಧ್ಯೆಯ ಹೋರಾಟದಲ್ಲಿ ಪ್ರಾಣಾರ್ಪಣೆಗೈದ ಕೊಠಾರಿ ಸಹೋದರರ ಸಹಿತ ಎಲ್ಲಾ ಹೋರಾಟಗಾರರ ಕುಟುಂಬಗಳಿಗೆ ವಿಶೇಷ ಗೌರವ ನೀಡಲು ಅಯೋಧ್ಯೆ ಶ್ರೀ ರಾಮಜನ್ಮಭೂಮಿ ಟ್ರಸ್ಟ್ ನಿರ್ಧರಿಸಿದೆ. ಈ ಹೋರಾಟದಲ್ಲಿ ಹುತಾತ್ಮರಾದವರ ಸ್ಮರಣಾರ್ಥ ಒಂದು ಸ್ಮಾರಕ ರಚಿಸಲಾಗುವುದು ಎಂದು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
  • Popular Posts

    • 1
      ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್

  • Privacy Policy
  • Contact
© Tulunadu Infomedia.

Press enter/return to begin your search