• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಮ ಪ್ರತಿಷ್ಠೆ ನಡೆಯುವಾಗ ಗರ್ಭಗುಡಿಯೊಳಗೆ ಯಾರೆಲ್ಲಾ ಇರುತ್ತಾರೆ, ಗೊತ್ತಾ?

Tulunadu News Posted On December 29, 2023
0


0
Shares
  • Share On Facebook
  • Tweet It

2024 ರ ಜನವರಿ 22 ಭಾರತೀಯರ ಪಾಲಿಗೆ ಬಹಳ ಪ್ರಮುಖವಾಗಿರುವ ದಿನ. ಅಂದು 500 ವರ್ಷ ಯಾವ ಕಾರಣಕ್ಕೆ ಸನಾತನಿಗಳು ಹೋರಾಟ ಮಾಡಿದರೋ ಅದರ ಫಲ ಕಾಣುವ ಸಮಯ. ಭಗವಂತ ಶ್ರೀ ರಾಮಚಂದ್ರ ಜನ್ಮ ತಾಳಿದ ಪುಣ್ಯಭೂಮಿ ಅಯೋಧ್ಯೆಯಲ್ಲಿ ಅಂದು ಭವ್ಯ ಮಂದಿರ ಲೋಕಾರ್ಪಣೆಗೊಳ್ಳಲಿರುವ ಶುಭ ದಿನ. ರಾಮಚಂದ್ರ ದೇವರ ಪ್ರಾಣಪ್ರತಿಷ್ಟೆ ಮತ್ತು ಇದರ ಧಾರ್ಮಿಕ ವಿಧಿವಿಧಾನಗಳು ಅಂದು ನಡೆಯಲಿವೆ. ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಹಿತ ದೇಶದ ಸುಮಾರು 6 ಸಾವಿರದಿಂದ 7 ಸಾವಿರದ ತನಕ ಗಣ್ಯಾತೀಗಣ್ಯರು ಈ ದಿನದಂದು ಅಯೋಧ್ಯೆಯಲ್ಲಿ ಈ ಐತಿಹಾಸಿಕ ಘಳಿಗೆಗೆ ಸಾಕ್ಷಿಯಾಗಲಿದ್ದಾರೆ.

ಎಲ್ಲರೂ ಈ ದೇವಸ್ಥಾನದ ಆವರಣದಲ್ಲಿ ಮತ್ತು ಪ್ರಾಂಗಣದಲ್ಲಿ ಉಪಸ್ಥಿತರಿದ್ದರೆ ಪ್ರಾಣ ಪ್ರತಿಷ್ಟೆ ಆಗುವ ಗರ್ಭಗುಡಿಯೊಳಗೆ ಯಾರೆಲ್ಲ ಹೋಗಬಹುದು ಎನ್ನುವ ಕುತೂಹಲ ಎಲ್ಲರಿಗೂ ಇರುತ್ತದೆ. ಯಾರಿಗೆಲ್ಲಾ ಗರ್ಭಗುಡಿಯೊಳಗೆ ಪ್ರವೇಶ ಇದೆ ಎನ್ನುವುದಕ್ಕೆ ಈಗ ಉತ್ತರ ಸಿಕ್ಕಿದೆ. ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್, ಉತ್ತರ ಪ್ರದೇಶದ ರಾಜ್ಯಪಾಲೆ ಆನಂದಿ ಬೆನ್ ಪಟೇಲ್ ಮತ್ತು ಪ್ರಮುಖ ಪುರೋಹಿತರು ಗರ್ಭಗುಡಿಯೊಳಗೆ ಹೋಗಲಿದ್ದಾರೆ. ಪ್ರಾಣ ಪ್ರತಿಷ್ಟೆ ನಡೆಯುವಾಗ ಗರ್ಭಗುಡಿಗೆ ಪರದೆ ಎಳೆಯಲಾಗುತ್ತದೆ.

ಅಯೋಧ್ಯೆಯ ಹೋರಾಟದಲ್ಲಿ ಪ್ರಾಣಾರ್ಪಣೆಗೈದ ಕೊಠಾರಿ ಸಹೋದರರ ಸಹಿತ ಎಲ್ಲಾ ಹೋರಾಟಗಾರರ ಕುಟುಂಬಗಳಿಗೆ ವಿಶೇಷ ಗೌರವ ನೀಡಲು ಅಯೋಧ್ಯೆ ಶ್ರೀ ರಾಮಜನ್ಮಭೂಮಿ ಟ್ರಸ್ಟ್ ನಿರ್ಧರಿಸಿದೆ. ಈ ಹೋರಾಟದಲ್ಲಿ ಹುತಾತ್ಮರಾದವರ ಸ್ಮರಣಾರ್ಥ ಒಂದು ಸ್ಮಾರಕ ರಚಿಸಲಾಗುವುದು ಎಂದು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
Tulunadu News August 23, 2025
'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ
Tulunadu News August 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
    • 'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ
    • ರಸ್ತೆಗೆ ಅಡ್ಡಬಂದ ನಾಯಿ- ತಪ್ಪಿಸಲು ಹೋಗಿ ಕಾರು ಪಲ್ಟಿ -ಖ್ಯಾತ ಡಿಜೆ ಮಾರ್ಮಿನ್ ಮೆಂಡೋನ್ಸಾ ನಿಧನ
    • ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
    • ನಮಸ್ತೆ ಸದಾ ವತ್ಸಲೆ... ಆರ್ ಎಸ್ ಎಸ್ ಗೀತೆ ಹಾಡಿದ ಡಿಕೆಶಿವಕುಮಾರ್!
    • ಸ್ನೇಹಮಯಿ ಕೃಷ್ಣ ಅವರಿಂದ ಸುಜಾತ ಭಟ್ ಹಾಗೂ ಇತರರ ಮೇಲೆ ಪ್ರಕರಣ ದಾಖಲು!
    • ಕಾನೂನು ಸ್ಪಷ್ಟವಾಗಿದೆ, ಡಿಜೆಗಳಿಗೆ ಅವಕಾಶ ನೀಡುವುದಿಲ್ಲ: ಕಮಿಷನ‌ರ್ ಸುಧೀರ್ ಕುಮಾರ್ ರೆಡ್ಡಿ
    • ಡಿಜೆ ಬಳಕೆಗೆ ವಿರೋಧವಿದೆ, ಆದರೆ ಧಾರ್ಮಿಕ ಕಾರ್ಯಕ್ರಮಗಳ ಆಚರಣೆಗೆ ಅಡ್ಡಿ ಪಡಿಸುವ ನಿಯಮ ಸಲ್ಲದು!
    • ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!
    • ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ಗೊತ್ತು, ಸಾಕ್ಷ್ಯವಿಲ್ಲ ಎಂದ ಹೆಗ್ಗಡೆ!
  • Popular Posts

    • 1
      ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
    • 2
      'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ
    • 3
      ರಸ್ತೆಗೆ ಅಡ್ಡಬಂದ ನಾಯಿ- ತಪ್ಪಿಸಲು ಹೋಗಿ ಕಾರು ಪಲ್ಟಿ -ಖ್ಯಾತ ಡಿಜೆ ಮಾರ್ಮಿನ್ ಮೆಂಡೋನ್ಸಾ ನಿಧನ
    • 4
      ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
    • 5
      ನಮಸ್ತೆ ಸದಾ ವತ್ಸಲೆ... ಆರ್ ಎಸ್ ಎಸ್ ಗೀತೆ ಹಾಡಿದ ಡಿಕೆಶಿವಕುಮಾರ್!

  • Privacy Policy
  • Contact
© Tulunadu Infomedia.

Press enter/return to begin your search