• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಮ ಪ್ರತಿಷ್ಠೆ ನಡೆಯುವಾಗ ಗರ್ಭಗುಡಿಯೊಳಗೆ ಯಾರೆಲ್ಲಾ ಇರುತ್ತಾರೆ, ಗೊತ್ತಾ?

Tulunadu News Posted On December 29, 2023
0


0
Shares
  • Share On Facebook
  • Tweet It

2024 ರ ಜನವರಿ 22 ಭಾರತೀಯರ ಪಾಲಿಗೆ ಬಹಳ ಪ್ರಮುಖವಾಗಿರುವ ದಿನ. ಅಂದು 500 ವರ್ಷ ಯಾವ ಕಾರಣಕ್ಕೆ ಸನಾತನಿಗಳು ಹೋರಾಟ ಮಾಡಿದರೋ ಅದರ ಫಲ ಕಾಣುವ ಸಮಯ. ಭಗವಂತ ಶ್ರೀ ರಾಮಚಂದ್ರ ಜನ್ಮ ತಾಳಿದ ಪುಣ್ಯಭೂಮಿ ಅಯೋಧ್ಯೆಯಲ್ಲಿ ಅಂದು ಭವ್ಯ ಮಂದಿರ ಲೋಕಾರ್ಪಣೆಗೊಳ್ಳಲಿರುವ ಶುಭ ದಿನ. ರಾಮಚಂದ್ರ ದೇವರ ಪ್ರಾಣಪ್ರತಿಷ್ಟೆ ಮತ್ತು ಇದರ ಧಾರ್ಮಿಕ ವಿಧಿವಿಧಾನಗಳು ಅಂದು ನಡೆಯಲಿವೆ. ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಹಿತ ದೇಶದ ಸುಮಾರು 6 ಸಾವಿರದಿಂದ 7 ಸಾವಿರದ ತನಕ ಗಣ್ಯಾತೀಗಣ್ಯರು ಈ ದಿನದಂದು ಅಯೋಧ್ಯೆಯಲ್ಲಿ ಈ ಐತಿಹಾಸಿಕ ಘಳಿಗೆಗೆ ಸಾಕ್ಷಿಯಾಗಲಿದ್ದಾರೆ.

ಎಲ್ಲರೂ ಈ ದೇವಸ್ಥಾನದ ಆವರಣದಲ್ಲಿ ಮತ್ತು ಪ್ರಾಂಗಣದಲ್ಲಿ ಉಪಸ್ಥಿತರಿದ್ದರೆ ಪ್ರಾಣ ಪ್ರತಿಷ್ಟೆ ಆಗುವ ಗರ್ಭಗುಡಿಯೊಳಗೆ ಯಾರೆಲ್ಲ ಹೋಗಬಹುದು ಎನ್ನುವ ಕುತೂಹಲ ಎಲ್ಲರಿಗೂ ಇರುತ್ತದೆ. ಯಾರಿಗೆಲ್ಲಾ ಗರ್ಭಗುಡಿಯೊಳಗೆ ಪ್ರವೇಶ ಇದೆ ಎನ್ನುವುದಕ್ಕೆ ಈಗ ಉತ್ತರ ಸಿಕ್ಕಿದೆ. ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್, ಉತ್ತರ ಪ್ರದೇಶದ ರಾಜ್ಯಪಾಲೆ ಆನಂದಿ ಬೆನ್ ಪಟೇಲ್ ಮತ್ತು ಪ್ರಮುಖ ಪುರೋಹಿತರು ಗರ್ಭಗುಡಿಯೊಳಗೆ ಹೋಗಲಿದ್ದಾರೆ. ಪ್ರಾಣ ಪ್ರತಿಷ್ಟೆ ನಡೆಯುವಾಗ ಗರ್ಭಗುಡಿಗೆ ಪರದೆ ಎಳೆಯಲಾಗುತ್ತದೆ.

ಅಯೋಧ್ಯೆಯ ಹೋರಾಟದಲ್ಲಿ ಪ್ರಾಣಾರ್ಪಣೆಗೈದ ಕೊಠಾರಿ ಸಹೋದರರ ಸಹಿತ ಎಲ್ಲಾ ಹೋರಾಟಗಾರರ ಕುಟುಂಬಗಳಿಗೆ ವಿಶೇಷ ಗೌರವ ನೀಡಲು ಅಯೋಧ್ಯೆ ಶ್ರೀ ರಾಮಜನ್ಮಭೂಮಿ ಟ್ರಸ್ಟ್ ನಿರ್ಧರಿಸಿದೆ. ಈ ಹೋರಾಟದಲ್ಲಿ ಹುತಾತ್ಮರಾದವರ ಸ್ಮರಣಾರ್ಥ ಒಂದು ಸ್ಮಾರಕ ರಚಿಸಲಾಗುವುದು ಎಂದು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search