• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜನವರಿ 22 ರಂದು ರಜೆ ನೀಡಲು ಸಿಎಂಗೆ ಶಾಸಕ ಮನವಿ!

Tulunadu News Posted On January 2, 2024
0


0
Shares
  • Share On Facebook
  • Tweet It

ಇದೇ ಜನವರಿ 22 ರಂದು ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ಭವ್ಯ ರಾಮಮಂದಿರದಲ್ಲಿ ಭಗವಾನ್ ಶ್ರೀರಾಮಚಂದ್ರ ದೇವರನ್ನು ಪರಿವಾರ ಸಹಿತ ಪ್ರತಿಷ್ಠಾಪಿಸಲಾಗುತ್ತದೆ. ಅಂದು ಇಡೀ ದೇಶದಲ್ಲಿ ಸಂಭ್ರಮದ ವಾತಾವರಣ ಇರಲಿದೆ. ಆ ದಿನವನ್ನು ದೀಪಾವಳಿಯ ರೀತಿಯಲ್ಲಿ ಆಚರಿಸುವಂತೆ ಪ್ರಧಾನಿ ನರೇಂದ್ರ ಮೋದಿಯವರು ಕರೆ ನೀಡಿದ್ದಾರೆ. ಅಂದು ದೇಶದ ಎಲ್ಲಾ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಭಜನೆ, ಪ್ರಸಾದ ವಿತರಣೆ ನಡೆಯಲಿದೆ. ಈ ದಿನ ನಮ್ಮ ಜೀವಿತಾವಧಿಯಲ್ಲಿ ಒಮ್ಮೆ ಮಾತ್ರ ಸಿಗಲಿದ್ದು, ಅಂದು ಎಲ್ಲರೂ ಏಕಮನಸ್ಸಿನಿಂದ ಅದರಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಸಾವರ್ತಿಕ ರಜೆ ನೀಡುವಂತೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಅವರು ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.


ಈ ಬಗ್ಗೆ ಮಾತನಾಡಿರುವ ಅವರು ಜನರಿಗೆ ಅನೇಕ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಅನುಕೂಲವಾಗುತ್ತದೆ. ಪೂಜೆ, ಭಜನಾ ಕಾರ್ಯಕ್ರಮದಲ್ಲಿ ಯುವ ಜನತೆ ಭಾಗಿಯಾಗಬೇಕು. ಅದಕ್ಕಾಗಿ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇನೆ. ರಜೆ ಕೊಡ್ತಾರೋ ಬಿಡ್ತಾರೋ ಅವರಿಗೆ ಬಿಟ್ಟಿದ್ದು ಎಂದು ಬಿಜೆಪಿ ಶಾಸಕ ಯಶಪಾಲ್ ಸುವರ್ಣ ಹೇಳಿದ್ದಾರೆ.


ಶ್ರೀರಾಮ ಮಂದಿರದ ಲೋಕಾರ್ಪಣೆಯು ಭಕ್ತರ ಭಾವನಾತ್ಮಕ ಮತ್ತು ಧಾರ್ಮಿಕತೆಯ ಐತಿಹಾಸಿಕ ಕ್ಷಣವಾಗಿ ಇತಿಹಾಸದ ಪುಟಗಳಲ್ಲಿ ದಾಖಲಾಗಲಿದೆ. ಈ ಪೂಜ್ಯ ದಿನವನ್ನು ದೇಶಾದ್ಯಂತ ದೇವಸ್ಥಾನ, ಮಂದಿರ, ಸಂಘ ಸಂಸ್ಥೆಗಳು ಮತ್ತು ಮನೆ ಮನೆಗಳಲ್ಲಿ ರಾಮ ಜ್ಯೋತಿ ಬೆಳಗಿಸುವುದರೊಂದಿಗೆ ವಿಶೇಷ ಪೂಜೆಗಳು, ಭಜನಾ ಸಂಕೀರ್ತನೆಗಳು ಹಾಗೂ ಅನ್ನ ಸಂತರ್ಪಣೆಗಳ ಮೂಲಕ ಅತ್ಯಂತ ಸಂಭ್ರಮ ಸಡಗರದಿಂದ ದೀಪಾವಳಿ ಹಬ್ಬದಂದು ಆಚರಿಸಲು ಕೋಟ್ಯಾಂತರ ಶ್ರೀರಾಮ ಭಕ್ತರು ಇಚ್ಛಿಸಿರುತ್ತಾರೆ ಎಂದು ಅವರು ಪತ್ರದಲ್ಲಿ ಬರೆದಿದ್ದಾರೆ.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search