• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜನವರಿ 22 ರಂದು ದೀಪಾವಳಿ ಆಚರಣೆಗೆ ಮಹಾರಾಷ್ಟ್ರ ಸಿಎಂ ಕರೆ!

Tulunadu News Posted On January 2, 2024
0


0
Shares
  • Share On Facebook
  • Tweet It

ಮುಂಬೈಯಲ್ಲಿರುವ ದೇವಸ್ಥಾನಗಳನ್ನು ಮತ್ತು ಸರಕಾರಿ ಕಟ್ಟಡಗಳನ್ನು ವಿದ್ಯುದೀಪಾಲಂಕಾರಗಳ ಮೂಲಕ ಚೆಂದ ಕಾಣಿಸಲು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆಯವರು ಮುಂಬೈ ಮಹಾನಗರ ಪಾಲಿಕೆ ಆಯುಕ್ತರಿಗೆ ಸೂಚಿಸಿದ್ದಾರೆ. ಜನವರಿ 22 ರಂದು ಮುಂಬೈ ದೀಪಾವಳಿಯಂತೆ ಸಂಭ್ರಮಿಸಬೇಕು ಎಂದು ಬಯಸಿರುವ ಅವರು ಅಯೋಧ್ಯೆಯಲ್ಲಿ ಶ್ರೀರಾಮ ದೇವರ ಭವ್ಯ ದೇಗುಲ ಉದ್ಘಾಟನೆ ಆಗುವ ದಿನ ಮುಂಬೈಯಲ್ಲಿಯೂ ಅದರ ಸಂಭ್ರಮ ರಾರಾಜಿಸಬೇಕು ಎಂದು ಅವರು ಯೋಜನೆ ಹಾಕಿಕೊಂಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅವರು ” ಶ್ರೀರಾಮ ಮಂದಿರ ಜನವರಿ 22 ರಂದು ಉದ್ಘಾಟನೆಗೊಳ್ಳಲಿದೆ. ಆವತ್ತು ಬೃಹನ್ಮುಂಬಯಿ ಮುನ್ಸಿಪಲ್ ಕಾರ್ಪೋರೇಶನ್ (ಬಿಎಂಸಿ) ವತಿಯಿಂದ ಇಡೀ ಮುಂಬೈಯಲ್ಲಿ ದೀಪಾವಳಿಯ ಸಂಭ್ರಮವನ್ನು ಅನುಭವಿಸುವ ವಾತಾವರಣ ನಿರ್ಮಿಸಲಾಗುವುದು. ಅದಕ್ಕಾಗಿ ಅಲಂಕಾರಿಕ ವಿದ್ಯುದೀಪಗಳನ್ನು ದೇವಸ್ಥಾನಗಳ ಮೇಲೆ, ಕಟ್ಟಡಗಳ ಮೇಲೆ ಹಾಕಿದರೆ ಅದು ಚೆಂದವಾಗಿ ಕಾಣುತ್ತದೆ ” ಎಂದು ಹೇಳಿದ್ದಾರೆ. ರಾಮ ಮಂದಿರ ಅಯೋಧ್ಯೆಯಲ್ಲಿ ನಿರ್ಮಾಣವಾಗುವುದು ಶಿವಸೇನೆಯ ಸ್ಥಾಪಕ ಬಾಳಾ ಸಾಹೇಬ್ ಠಾಕ್ರೆಯವರ ಕನಸಾಗಿತ್ತು ಎಂದು ಅವರು ಹೇಳಿದ್ದಾರೆ.

“ಮೋದಿಯವರು ನಮ್ಮ ಕನಸನ್ನು ಸಾಕಾರಗೊಳಿಸಿದ್ದಾರೆ. ಪ್ರಧಾನಿ ಏನು ಹೇಳುತ್ತಾರೋ ಅದನ್ನು ಮಾಡಿ ತೋರಿಸುತ್ತಾರೆ. ಅದು ರೈಲ್ವೆ ನಿಲ್ದಾಣವಿರಲಿ, ವಿಮಾನ ನಿಲ್ದಾಣವಿರಲಿ, ಮೋದಿಯವರ ಭರವಸೆಗಳು ಅನುಷ್ಟಾನಕ್ಕೆ ಬರಲು ತಡವಾಗುವುದಿಲ್ಲ. ಪ್ರತಿಯೊಬ್ಬರಿಗೂ ಮೋದಿಯವರೇ ಗ್ಯಾರಂಟಿ” ಎಂದು ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
  • Popular Posts

    • 1
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • 2
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 3
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!

  • Privacy Policy
  • Contact
© Tulunadu Infomedia.

Press enter/return to begin your search