• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜನವರಿ 22 ರಂದು ದೀಪಾವಳಿ ಆಚರಣೆಗೆ ಮಹಾರಾಷ್ಟ್ರ ಸಿಎಂ ಕರೆ!

Tulunadu News Posted On January 2, 2024
0


0
Shares
  • Share On Facebook
  • Tweet It

ಮುಂಬೈಯಲ್ಲಿರುವ ದೇವಸ್ಥಾನಗಳನ್ನು ಮತ್ತು ಸರಕಾರಿ ಕಟ್ಟಡಗಳನ್ನು ವಿದ್ಯುದೀಪಾಲಂಕಾರಗಳ ಮೂಲಕ ಚೆಂದ ಕಾಣಿಸಲು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆಯವರು ಮುಂಬೈ ಮಹಾನಗರ ಪಾಲಿಕೆ ಆಯುಕ್ತರಿಗೆ ಸೂಚಿಸಿದ್ದಾರೆ. ಜನವರಿ 22 ರಂದು ಮುಂಬೈ ದೀಪಾವಳಿಯಂತೆ ಸಂಭ್ರಮಿಸಬೇಕು ಎಂದು ಬಯಸಿರುವ ಅವರು ಅಯೋಧ್ಯೆಯಲ್ಲಿ ಶ್ರೀರಾಮ ದೇವರ ಭವ್ಯ ದೇಗುಲ ಉದ್ಘಾಟನೆ ಆಗುವ ದಿನ ಮುಂಬೈಯಲ್ಲಿಯೂ ಅದರ ಸಂಭ್ರಮ ರಾರಾಜಿಸಬೇಕು ಎಂದು ಅವರು ಯೋಜನೆ ಹಾಕಿಕೊಂಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅವರು ” ಶ್ರೀರಾಮ ಮಂದಿರ ಜನವರಿ 22 ರಂದು ಉದ್ಘಾಟನೆಗೊಳ್ಳಲಿದೆ. ಆವತ್ತು ಬೃಹನ್ಮುಂಬಯಿ ಮುನ್ಸಿಪಲ್ ಕಾರ್ಪೋರೇಶನ್ (ಬಿಎಂಸಿ) ವತಿಯಿಂದ ಇಡೀ ಮುಂಬೈಯಲ್ಲಿ ದೀಪಾವಳಿಯ ಸಂಭ್ರಮವನ್ನು ಅನುಭವಿಸುವ ವಾತಾವರಣ ನಿರ್ಮಿಸಲಾಗುವುದು. ಅದಕ್ಕಾಗಿ ಅಲಂಕಾರಿಕ ವಿದ್ಯುದೀಪಗಳನ್ನು ದೇವಸ್ಥಾನಗಳ ಮೇಲೆ, ಕಟ್ಟಡಗಳ ಮೇಲೆ ಹಾಕಿದರೆ ಅದು ಚೆಂದವಾಗಿ ಕಾಣುತ್ತದೆ ” ಎಂದು ಹೇಳಿದ್ದಾರೆ. ರಾಮ ಮಂದಿರ ಅಯೋಧ್ಯೆಯಲ್ಲಿ ನಿರ್ಮಾಣವಾಗುವುದು ಶಿವಸೇನೆಯ ಸ್ಥಾಪಕ ಬಾಳಾ ಸಾಹೇಬ್ ಠಾಕ್ರೆಯವರ ಕನಸಾಗಿತ್ತು ಎಂದು ಅವರು ಹೇಳಿದ್ದಾರೆ.

“ಮೋದಿಯವರು ನಮ್ಮ ಕನಸನ್ನು ಸಾಕಾರಗೊಳಿಸಿದ್ದಾರೆ. ಪ್ರಧಾನಿ ಏನು ಹೇಳುತ್ತಾರೋ ಅದನ್ನು ಮಾಡಿ ತೋರಿಸುತ್ತಾರೆ. ಅದು ರೈಲ್ವೆ ನಿಲ್ದಾಣವಿರಲಿ, ವಿಮಾನ ನಿಲ್ದಾಣವಿರಲಿ, ಮೋದಿಯವರ ಭರವಸೆಗಳು ಅನುಷ್ಟಾನಕ್ಕೆ ಬರಲು ತಡವಾಗುವುದಿಲ್ಲ. ಪ್ರತಿಯೊಬ್ಬರಿಗೂ ಮೋದಿಯವರೇ ಗ್ಯಾರಂಟಿ” ಎಂದು ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search