• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಯೋಧ್ಯೆಗೆ ತಲುಪಿ ದೇವರ ದರ್ಶನದ ತನಕ ಹೇಗಿದೆ ವ್ಯವಸ್ಥೆ..

Tulunadu News Posted On January 2, 2024
0


0
Shares
  • Share On Facebook
  • Tweet It

ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ಭವ್ಯ ಶ್ರೀ ರಾಮ ಮಂದಿರದಲ್ಲಿ ಶ್ರೀರಾಮ ದೇವರನ್ನು ನೋಡುವ ಕೌತುಕ ನಿಮ್ಮಲ್ಲಿ ಈಗ ಮೂಡಿರಬಹುದು. ಜನವರಿ 22 ರಂದು ದೇವಸ್ಥಾನದಲ್ಲಿ ಪ್ರಾಣ ಪ್ರತಿಷ್ಠಾಪನಾ ಕಾರ್ಯ ನಡೆಯುವುದರಿಂದ ದೇಶದ 6000 ಗಣ್ಯಾತೀಗಣ್ಯರಿಗೆ ಮಾತ್ರ ಆಹ್ವಾನ ನೀಡಿರುವುದರಿಂದ ಆವತ್ತು ಭಕ್ತಾದಿಗಳು ದೇವಸ್ಥಾನಕ್ಕೆ ಬರದೇ ಮುಂದಿನ ದಿನಗಳಲ್ಲಿ ಆಗಮಿಸಬಹುದು ಎಂದು ಪ್ರಧಾನಿ ನರೇಂದ್ರ ಮೋದಿಯೇ ಹೇಳಿದ್ದಾರೆ. ಆದರೆ ಮುಂದಿನ ದಿನಗಳಲ್ಲಿ ದೇವಸ್ಥಾನಕ್ಕೆ ಹೋಗಲು ಬಯಸುವವರು ಹೇಗೆ ಅಯೋಧ್ಯೆಗೆ ತೆರಳಬಹುದು ಎನ್ನುವ ಮಾಹಿತಿ ಇಲ್ಲಿದೆ.

ನೀವು ರೈಲಿನಲ್ಲಿ ಹೋಗುವವರಾದರೆ ರೈಲ್ವೆ ನಿಲ್ದಾಣದಿಂದ ಕೇವಲ ಐದು ಕಿಲೋ ಮೀಟರ್ ದೂರದಲ್ಲಿ ರೈಲು ನಿಲ್ದಾಣವಿದೆ. ಇನ್ನು ಲಕ್ನೋ ಹಾಗೂ ದೆಹಲಿ ಸಹಿತ ಆಸುಪಾಸಿನ ಪ್ರದೇಶಗಳಿಂದ ನೇರ ಬಸ್ ಸೇವೆಯ ಮೂಲಕ ಅಯೋಧ್ಯೆಯನ್ನು ತಲುಪಬಹುದು. ಇನ್ನು ನೀವು ವಿಮಾನದಲ್ಲಿ ಪ್ರಯಾಣ ಬೆಳೆಸುವವರಾದರೆ ಅಯೋಧ್ಯೆಯಲ್ಲಿ ನೂತನ ವಿಮಾನ ನಿಲ್ದಾಣವೂ ನಿರ್ಮಾಣವಾಗಿದೆ. ಅದನ್ನು ಇತ್ತೀಚೆಗೆ ಪ್ರಧಾನಿ ಮೋದಿಯವರೇ ಉದ್ಘಾಟಿಸಿರುವುದು ನಮಗೆಲ್ಲಾ ಗೊತ್ತೆ ಇದೆ.

ಅಯೋಧ್ಯೆಯ ಮಹರ್ಷಿ ವಾಲ್ಮೀಕಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ರಾಮ ಮಂದಿರಕ್ಕೆ ಹತ್ತು ಕಿಲೋ ಮೀಟರ್ ಅಂತರವಿದೆ. ಪ್ರಸ್ತುತ ದೆಹಲಿ ಮತ್ತು ಅಹಮದಾಬಾದಿನಿಂದ ಅಯೋಧ್ಯೆಗೆ ವಿಮಾನ ಸಂಪರ್ಕಗಳಿವೆ. ಇನ್ನು ದೇಶದ ವಿವಿಧ ಭಾಗಗಳಿಂದ ತೆರಳುವವರು ಲಕ್ನೋ, ಗೋರಖಪುರ ಹಾಗೂ ವಾರಣಾಸಿ ವಿಮಾನ ನಿಲ್ದಾಣಗಳಲ್ಲಿ ಇಳಿದು ಅಲ್ಲಿಂದ ರೈಲು ಮತ್ತು ಬಸ್ ಮೂಲಕ ಅಯೋಧ್ಯೆಯನ್ನು ತಲುಪಬಹುದು.


ಶ್ರೀರಾಮನ ಪ್ರತಿಮೆಯನ್ನು ದೇವಾಲಯದಲ್ಲಿ 30 ಅಡಿ ದೂರದಿಂದ ನೋಡಬಹುದು. ದೇವಾಲಯದ ಪೂರ್ವ ದಿಕ್ಕಿನಿಂದ ಭಕ್ತರು ದರ್ಶನಕ್ಕೆ ಬರುತ್ತಾರೆ. ಅವರು ಸಿಂಹದ್ವಾರದ ಮೂಲಕ ಚಲಿಸಿದ ತಕ್ಷಣ, ರಾಮ ಲಲ್ಲಾನ ದರ್ಶನ ಪಡೆದು ಎಡಕ್ಕೆ ತಿರುಗಿ ಹೊರಗೆ ಹೋಗಬೇಕು.

0
Shares
  • Share On Facebook
  • Tweet It




Trending Now
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
  • Popular Posts

    • 1
      ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • 2
      ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • 3
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search