• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜನವರಿ 22 ರಂದು ಮೋದಿ ಉಪವಾಸ ವ್ರತ!

Tulunadu News Posted On January 5, 2024
0


0
Shares
  • Share On Facebook
  • Tweet It

ಜನವರಿ 22 ರಂದು ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ನಡೆಯುವ ಪ್ರಾಣ ಪ್ರತಿಷ್ಟೆ ಸಹಿತ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಆವತ್ತು ಇಡೀ ದಿನ ಮೋದಿಯವರು ಅಯೋಧ್ಯೆಯಲ್ಲಿ ನಡೆಯುವ ವಿವಿಧ ಧಾರ್ಮಿಕ ವಿಧಿವಿಧಾನಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಎಲ್ಲಾ ಆಚರಣೆಗಳು, ಸಂಪ್ರದಾಯಗಳು ಮುಗಿಯುವ ತನಕ ಪ್ರಧಾನಿಯವರು ಉಪವಾಸ ವ್ರತದಲ್ಲಿರುತ್ತಾರೆ.

ಹಿಂದೂ ಶಾಸ್ತ್ರಗಳಲ್ಲಿ ಯಾವುದೇ ಶುಭ ಕಾರ್ಯಗಳನ್ನು ನಡೆಸುವ ಮೊದಲು ಅಂದು ಬೆಳಿಗ್ಗೆ ಅಕ್ಕಿಯಿಂದ ತಯಾರಿಸಲಾಗುವ ಯಾವುದೇ ಆಹಾರವನ್ನು ಸೇವಿಸುವ ಪದ್ಧತಿ ಇಲ್ಲ. ಎಲ್ಲಾ ವಿಧಿವಿಧಾನಗಳು ಮುಗಿದ ಬಳಿಕವೇ ಅಕ್ಕಿಯಿಂದ ತಯಾರಿಸಿದ ತಿಂಡಿಯನ್ನು ಸೇವಿಸಬಹುದು. ಇನ್ನು ಕೆಲವೊಮ್ಮೆ ಖಾಲಿ ಹೊಟ್ಟೆಯಲ್ಲಿಯೇ ಇದ್ದು ಎಲ್ಲಾ ಮುಗಿದ ಮೇಲೆ ಆಹಾರ ಸೇವಿಸಬೇಕಾಗುತ್ತದೆ.

ಮೋದಿಯವರು ಯಾವಾಗಲೂ ಶುಭ ದಿನಗಳು ಇರುವಾಗ ಉಪವಾಸ ವ್ರತವನ್ನೇ ಆಚರಿಸುತ್ತಾರೆ. ಅವರು ಅಯೋಧ್ಯೆಯಲ್ಲಿ ಶಿಲಾನ್ಯಾಸ, ಭೂಮಿ ಪೂಜೆಯ ದಿನದಂದು ಕೂಡ ಯಾವುದೇ ಆಹಾರ ಸೇವಿಸದೇ ಉಪವಾಸ ವ್ರತವನ್ನು ಆಚರಿಸಿದ್ದರು. ಈ ಬಾರಿಯೂ ಅದೇ ರೀತಿಯಲ್ಲಿ ಕಠಿಣ ವ್ರತಕ್ಕೆ ಮುಂದಾಗಲಿದ್ದಾರೆ. ಪ್ರತಿ ಬಾರಿ ನವರಾತ್ರಿಯ ದಿನಗಳಲ್ಲಿಯೂ ಮೋದಿ ಕೇವಲ ನೀರು ಮಾತ್ರ ಸೇವಿಸುತ್ತಾರೆ. ಇದು ಅನೇಕ ವರ್ಷಗಳಿಂದ ಅವರು ನಡೆಸಿಕೊಂಡು ಬರುತ್ತಿರುವ ಸಂಪ್ರದಾಯವಾಗಿದೆ.
500 ವರ್ಷಗಳ ಹೋರಾಟದಿಂದ ದೊರೆತಿರುವ ಈ ಪುಣ್ಯದಿನದಂದು ಅವರು ಕೈಗೊಂಡಿರುವ ಹೆಜ್ಜೆಗಳು ನಿಜಕ್ಕೂ ಮಾದರಿ. ಅಂದು ಕನಿಷ್ಟ 10 ಸಾವಿರ ಜನರು ಅಯೋಧ್ಯೆಯಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ಪ್ರತ್ಯಕ್ಷವಾಗಿ ಸಾಕ್ಷಿಯಾಗಲಿದ್ದಾರೆ.

0
Shares
  • Share On Facebook
  • Tweet It




Trending Now
ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
Tulunadu News August 23, 2025
'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ
Tulunadu News August 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
    • 'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ
    • ರಸ್ತೆಗೆ ಅಡ್ಡಬಂದ ನಾಯಿ- ತಪ್ಪಿಸಲು ಹೋಗಿ ಕಾರು ಪಲ್ಟಿ -ಖ್ಯಾತ ಡಿಜೆ ಮಾರ್ಮಿನ್ ಮೆಂಡೋನ್ಸಾ ನಿಧನ
    • ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
    • ನಮಸ್ತೆ ಸದಾ ವತ್ಸಲೆ... ಆರ್ ಎಸ್ ಎಸ್ ಗೀತೆ ಹಾಡಿದ ಡಿಕೆಶಿವಕುಮಾರ್!
    • ಸ್ನೇಹಮಯಿ ಕೃಷ್ಣ ಅವರಿಂದ ಸುಜಾತ ಭಟ್ ಹಾಗೂ ಇತರರ ಮೇಲೆ ಪ್ರಕರಣ ದಾಖಲು!
    • ಕಾನೂನು ಸ್ಪಷ್ಟವಾಗಿದೆ, ಡಿಜೆಗಳಿಗೆ ಅವಕಾಶ ನೀಡುವುದಿಲ್ಲ: ಕಮಿಷನ‌ರ್ ಸುಧೀರ್ ಕುಮಾರ್ ರೆಡ್ಡಿ
    • ಡಿಜೆ ಬಳಕೆಗೆ ವಿರೋಧವಿದೆ, ಆದರೆ ಧಾರ್ಮಿಕ ಕಾರ್ಯಕ್ರಮಗಳ ಆಚರಣೆಗೆ ಅಡ್ಡಿ ಪಡಿಸುವ ನಿಯಮ ಸಲ್ಲದು!
    • ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!
    • ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ಗೊತ್ತು, ಸಾಕ್ಷ್ಯವಿಲ್ಲ ಎಂದ ಹೆಗ್ಗಡೆ!
  • Popular Posts

    • 1
      ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
    • 2
      'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ
    • 3
      ರಸ್ತೆಗೆ ಅಡ್ಡಬಂದ ನಾಯಿ- ತಪ್ಪಿಸಲು ಹೋಗಿ ಕಾರು ಪಲ್ಟಿ -ಖ್ಯಾತ ಡಿಜೆ ಮಾರ್ಮಿನ್ ಮೆಂಡೋನ್ಸಾ ನಿಧನ
    • 4
      ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
    • 5
      ನಮಸ್ತೆ ಸದಾ ವತ್ಸಲೆ... ಆರ್ ಎಸ್ ಎಸ್ ಗೀತೆ ಹಾಡಿದ ಡಿಕೆಶಿವಕುಮಾರ್!

  • Privacy Policy
  • Contact
© Tulunadu Infomedia.

Press enter/return to begin your search