• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಏನು ಮಾಡುವುದು ಈಗ ಸಿದ್ದುಜಿ?

Tulunadu News Posted On January 6, 2024
0


0
Shares
  • Share On Facebook
  • Tweet It

ಕೆಲವೊಮ್ಮೆ ಏನೂ ದೊಡ್ಡದು ಆಗುವುದಿಲ್ಲ ಎಂದು ಅಂದುಕೊಂಡಿದ್ದ ಪ್ರಕರಣಗಳು ದೈತ್ಯ ರೂಪವನ್ನು ಪಡೆದುಕೊಂಡು ಇಟ್ಟವರ ಬುಡಕ್ಕೆ ಬರುವಂತಹ ಸಾಧ್ಯತೆ ಇರುತ್ತದೆ. ಸದ್ಯ ಕರ್ನಾಟಕದಲ್ಲಿ ಆಗಿರುವುದು ಕೂಡ ಅದೇ. ಹುಬ್ಬಳ್ಳಿ ಜಿಲ್ಲೆಯ ಚನ್ನಪೇಟೆಯ ಶ್ರೀಕಾಂತ್ ಪೂಜಾರಿ ಎನ್ನುವ ಕರಸೇವಕನ ಬಂಧನಕ್ಕೆ ಪೊಲೀಸರು ಮುಂದಾದಾಗ ಅವರಿಗೂ ಈ ವಿಷಯ ಈ ಪ್ರಮಾಣದಲ್ಲಿ ದೊಡ್ಡದಾಗುತ್ತದೆ ಎಂದು ಅನಿಸಿರಲಿಲ್ಲ. ಆದರೆ ಬಂಧನದ ವಿಷಯ ಹೊರಬೀಳುತ್ತಿದ್ದಂತೆ ಲೋಕಸಭಾ ಚುನಾವಣೆಗೆ ವಿಷಯದ ಬೇಟೆಯಲ್ಲಿದ್ದ ಭಾರತೀಯ ಜನತಾ ಪಾರ್ಟಿ ಈ ವಿಷಯವನ್ನು ಹೇಗೆ ಮೇಲೆತ್ತಿತು ಎಂದರೆ ಕಾಂಗ್ರೆಸ್ ಮೈಸನ್ 5 ಡಿಗ್ರಿ ಸೆಲ್ಸಿಯಸ್ ನಲ್ಲಿ ಥರಗುಟ್ಟಲು ಶುರುವಾಯಿತು. ಕಾಂಗ್ರೆಸ್ಸಿನಲ್ಲಿದ್ದ ಹಿಂದೂಗಳಿಗೆನೆ ತಮ್ಮ ಪಕ್ಷ ಹಿಂದೂ ವಿರೋಧಿ ನೀತಿಯನ್ನು ಅನುಸರಿಸಲು ಮುಂದಾಗಿದೆ ಎನ್ನುವುದು ತಲೆಯ ಒಳಗೆ ಹೊಕ್ಕಾಗಿತ್ತು. ಒಬ್ಬ ಸಿದ್ದುವನ್ನು ಬಿಟ್ಟು ಬೇರೆ ಸಚಿವರೆಲ್ಲಾ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಮಾತನಾಡಲು ಶುರು ಮಾಡಿದರು. ಇಂತಹ ವಿಷಯಗಳು ಬಂದಾಗ ಮಾಧ್ಯಮದೆದುರು ಮಾತನಾಡುವ ಒಂದು ಶಬ್ದ ಕೂಡ ತುಂಬಾ ರಿಸ್ಕ್ ಎಂದು ಅರಿವಿರುವ ಡಿಕೆಶಿ ಸೈಲೆಂಟ್ ಆಗಿಬಿಟ್ಟರು. ಪರಂ ಎಂದಿನ ರೇಡಿಮೇಡ್ ವಾಕ್ಯ ಹಿಡಿದು ಇಂತಹ ವಿಷಯವನ್ನೇಲ್ಲಾ ಮೀಡಿಯಾ ದೊಡ್ಡದು ಮಾಡಬಾರದು ಎನ್ನುವ ಅರ್ಥದ ಮಾತುಗಳನ್ನು ಆಡಿದರು. ತಾವು ಯಾರು ಏನು ಮಾತನಾಡಿದರೂ ಒಂದೊಂದು ಶಬ್ದದಿಂದಲೇ ಹಿಂದೂಗಳ ನೂರು ನೂರು ವೋಟ್ ಗಳು ಕೈತಪ್ಪಿಬಿಡುತ್ತದೆ ಎನ್ನುವ ಹೆದರಿಕೆಯಿಂದ ಕಾಂಗ್ರೆಸ್ ಮುಖಂಡರು ಮುಖದ ಮೇಲೆ ಬಟ್ಟೆ ಹಾಕ್ಕೊಂಡು ಏನೂ ಗೊತ್ತಿಲ್ಲದವರಂತೆ ಆಡಲು ಶುರು ಮಾಡಿದರು. ಆದರೆ ರಾಜಕೀಯ ಇನ್ಸಿಂಗ್ಸಿನ ಕೊನೆಯ ಪಂದ್ಯವನ್ನು ಆಡುತ್ತಿರುವ ಸಿದ್ದು ಮಾತ್ರ ಇದನ್ನು ಡಿಫೆಂಡ್ ಮಾಡಲು ನಿಂತುಬಿಟ್ಟರು.

ಹೇಗೂ ಹಾವಿನ ಮೇಲೆ ಕಾಲಿಟ್ಟಾಗಿದೆ!

ಇದರಿಂದ ತಮಗೆ ಏನೂ ತೊಂದರೆ ಆಗದಂತೆ ಮತ್ತು ಹಾವಿನ ಕತೆ ಕೂಡ ಮುಗಿಯಬೇಕು ಎನ್ನುವ ಉದ್ದೇಶದಿಂದ ಸಿದ್ದು ಹೊಸ ವರಸೆ ತೆಗೆದುಬಿಟ್ಟರು. ಶ್ರೀಕಾಂತ್ ಪೂಜಾರಿ ಮೇಲೆ 16 ಕೇಸುಗಳಿವೆ. ಆತನನ್ನು ಬಿಜೆಪಿಗರು ಬೆಂಬಲಿಸುವುದು ಸರಿಯಲ್ಲ, ಅಪರಾಧಿಯ ಬೆಂಬಲಕ್ಕೆ ಬಿಜೆಪಿ ನಿಂತಿದೆ ಎಂದುಬಿಟ್ಟರು. ಇಲ್ಲಿ ಸಿದ್ದು ಒಬ್ಬರು ವಕೀಲರಾಗಿ ಯೋಚಿಸಿದ್ದರೆ ಅವರು ಶ್ರೀಕಾಂತ್ ಪೂಜಾರಿಯವರನ್ನು ಅಪರಾಧಿ ಎನ್ನುತ್ತಿರಲಿಲ್ಲ. ಯಾಕೆಂದರೆ ಆತನ ಮೇಲಿರುವುದು ಆರೋಪ ಮಾತ್ರ. ಆರೋಪ ಸಾಬೀತಾಗುವ ತನಕ ಆತ ಆರೋಪಿ ಮಾತ್ರ. ಆದರೆ ಸಿದ್ದುಜಿಗೆ ಶ್ರೀಕಾಂತ್ ಪೂಜಾರಿಯನ್ನು ಹೇಗಾದರೂ ಮಾಡಿ ತಪ್ಪಿತಸ್ಥ ಎಂದು ಪ್ರೂವ್ ಮಾಡಲೇಬೇಕಿದ್ದ ಕಾರಣ ಅವರು ನ್ಯಾಯಾಲಯ ತೀರ್ಪು ಕೊಡುವ ಮೊದಲೇ ತಾವೇ ಅಪರಾಧಿ ಎಂದು ಹೇಳಿಬಿಟ್ಟರು. ಆದರೆ ಅಲ್ಲಿಯ ತನಕ ಸಿದ್ದು ಸಾಹೇಬ್ರಿಗೆ ಗೊತ್ತಿಲ್ಲದ ವಿಷಯ ಏನೆಂದರೆ ಶ್ರೀಕಾಂತ್ ಅವರ ಮೇಲಿದ್ದ 16 ಕೇಸುಗಳಲ್ಲಿ 15 ಕೇಸು ಈಗಾಗಲೇ ಬಿದ್ದು ಹೋಗಿದೆ. ಅದರ ಅರ್ಥ ನ್ಯಾಯಾಲಯವೇ ಇಲ್ಲಿಯ ತನಕ ಯಾವುದೇ ಪ್ರಕರಣದಲ್ಲಿಯೂ ಶ್ರೀಕಾಂತ್ ಅವರನ್ನು ಅಪರಾಧಿ ಎಂದು ಘೋಷಿಸಿಲ್ಲ. ಆದರೆ ಸಿದ್ದು ಅವರಿಗೆ ಹೇಗಾದರೂ ಇದನ್ನು ಡಿಫೆಂಡ್ ಮಾಡಬೇಕಿತ್ತು. ಆದರಿಂದ ಪೊಲೀಸರ ಬಳಿ ಅರ್ಧಬರ್ಧ ಮಾಹಿತಿ ಪಡೆದ ಸಿದ್ದು ಮತ್ತೊಮ್ಮೆ ನಗೆಪಾಟಲಿಗೆ ಈಡಾಗಿ ಹೋದರು.

ಹಾಗಾದರೆ ಶ್ರೀಕಾಂತ್ ಅವರನ್ನು ಹಳೆ ಪ್ರಕರಣದಲ್ಲಿ ಬಂಧಿಸಲೇಬಾರದಾ?

ಹಾಗೇನೂ ಇಲ್ಲ. ಈ ದೇಶದ ಯಾವುದೇ ವ್ಯಕ್ತಿಯ ವಿರುದ್ಧ ಯಾವುದೇ ಪ್ರಕರಣ ಕ್ಲೋಸ್ ಆಗದೇ ಇದ್ದರೆ ಅದನ್ನು ಶೀಘ್ರ ವಿಚಾರಣೆ ನಡೆಸಿ ಮುಗಿಸಲು ಕಾನೂನಿನಲ್ಲಿ ಅವಕಾಶವಿದೆ. ಹಾಗೆ ಈ ಪ್ರಕರಣದಲ್ಲಿ ಆಗಿದೆ ಎಂದೇ ಇಟ್ಟುಕೊಳ್ಳೋಣ. ಹಾಗಾದರೆ ಇಷ್ಟು ದಿನ ಯಾಕೆ ಕರೆದು ವಿಚಾರಿಸಿಲ್ಲ. ಇನ್ನೇನೂ ರಾಮ ಮಂದಿರದ ಉದ್ಘಾಟನೆಗೆ ಕೆಲವೇ ದಿನಗಳು ಇರುವಾಗ ಅಯೋಧ್ಯೆಯ ಕರಸೇವೆಯಲ್ಲಿ ಭಾಗಿಯಾಗಿದ್ದ ವ್ಯಕ್ತಿಯನ್ನು ಬಂಧಿಸಲು ಹೋದಾಗಲೇ ಸಮಸ್ಯೆಗಳು ಆಗುವುದು. ಬಂಧಿಸಿದ ಪೊಲೀಸ್ ಅಧಿಕಾರಿ ಹಿಂದೂಯೇತರನಾಗಿರುವುದರಿಂದ ಅದು ಇನ್ನಷ್ಟು ಗೊಂದಲಕ್ಕೆ ಕಾರಣವಾಗಿರಬಹುದು. ಕೆಲವೊಮ್ಮೆ ಈ ಅಧಿಕಾರಿಗಳು ಕೂಡ ತಮ್ಮ ಮೇಲಿನವರನ್ನು ಖುಷಿಪಡಿಸಲು ಏನೇನೋ ಮಾಡಲು ಹೋಗುತ್ತಾರೆ. ಹೇಗೆ ಸರ್ ಎಂದು ಎದೆಯುಬ್ಬಿಸಿ ಹೇಳಿ ಶಹಬ್ಬಾಷ್ ಎಂದು ಹೇಳಿಸಿಕೊಳ್ಳುವ ಹಂಬಲ ಇರುತ್ತದೆ. ಅವರು ತಮ್ಮ ಲಾಭ ನೋಡುತ್ತಾರೆ ವಿನ: ಈ ಕ್ರಮದಿಂದ ಒಂದು ಸರಕಾರದ ಕುತ್ತಿಗೆಗೆ ಬರುತ್ತೆ ಎಂದು ಯೋಚಿಸುವುದಿಲ್ಲ. ಒಟ್ಟಿನಲ್ಲಿ ಸಿದ್ದು ಟ್ರಾಪ್ ಆಗಿಬಿಟ್ಟಿದ್ದಾರೆ. ಇದನ್ನು ಕೂಡ ಜೀರ್ಣಿಸಿಕೊಂಡು ಎಂತಹ ಕಾಲಕ್ಕೂ ಅಲ್ಪಸಂಖ್ಯಾತರಿಗೆ ಖುಷಿ ಮಾಡದೇ ಬಿಡುವುದಿಲ್ಲ ಎಂದು ಅವರು ನಿರ್ಧರಿಸಿರಬಹುದು, ಆದರೆ ಅವರ ಪಕ್ಷದ್ದೇ ಹಿಂದೂಗಳು ಏನು ಮಾಡಬೇಕು, ಅಲ್ವಾ!

0
Shares
  • Share On Facebook
  • Tweet It


- Advertisement -


Trending Now
ಸ್ಮೃತಿ ಇರಾನಿ ಸಾಸ್ ಬಿ ಕಬಿ ಭಹೂ ತೀ - 2 ನಿಂದ ಮತ್ತೆ ಕಿರುತೆರೆಗೆ ವಾಪಾಸ್!
Tulunadu News May 31, 2025
ದುಬೈಯಲ್ಲಿ ಕೇರಳ ಸಮಾಜದ ಕಾರ್ಯಕ್ರಮಕ್ಕೆ ಅಫ್ರಿದಿ ಅತಿಥಿ!
Tulunadu News May 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸ್ಮೃತಿ ಇರಾನಿ ಸಾಸ್ ಬಿ ಕಬಿ ಭಹೂ ತೀ - 2 ನಿಂದ ಮತ್ತೆ ಕಿರುತೆರೆಗೆ ವಾಪಾಸ್!
    • ದುಬೈಯಲ್ಲಿ ಕೇರಳ ಸಮಾಜದ ಕಾರ್ಯಕ್ರಮಕ್ಕೆ ಅಫ್ರಿದಿ ಅತಿಥಿ!
    • ದಯವಿಟ್ಟು 500 ರೂಪಾಯಿ ನೋಟ್ ಬ್ಯಾನ್ ಮಾಡಿ - ಮೋದಿಗೆ ಚಂದ್ರಬಾಬು ನಾಯ್ಡು ಮತ್ತೆ ಮನವಿ!
    • ಅಯೋಧ್ಯೆಯಲ್ಲಿ ಇನ್ನು ಮಾಂಸಹಾರ, ಮದ್ಯ ಸಂಪೂರ್ಣ ನಿಷೇಧ!
    • ಪೊಲೀಸ್ ಕಮೀಷನರ್, ಎಸ್ಪಿ ವರ್ಗಾವಣೆ ಮಾಡಿ ಡ್ಯಾಮೇಜ್ ಕಂಟ್ರೋಲ್ ಮಾಡಿದ ಸರಕಾರ!
    • ಜಬ್ಬಾರ್ ನಿಂದ ರಹೀಂ ತನಕ, ದಕ್ಷಿಣ ಕನ್ನಡದ ಅಧ್ಯಾಯದಲ್ಲಿ ರಕ್ತದ ಸಹಿ ಕಂಡ ಪುಟಗಳು!
    • ಹುಬ್ಬಳ್ಳಿ ಕ್ರಿಮಿನಲ್ ಪ್ರಕರಣ ಹಿಂದೆಗೆದುಕೊಳ್ಳುವಂತಿಲ್ಲ - ಹೈಕೋರ್ಟ್ ಆದೇಶ... ರಾಜ್ಯ ಸರಕಾರಕ್ಕೆ ಮುಖಭಂಗ!
    • ಹನಿಮೂನಿಗೆ ಶಿಲ್ಲಾಂಗಿಗೆ ಹೋದ ನವಜೋಡಿ ಕಣ್ಮರೆ! ನಾಪತ್ತೆಯಾದ ಪ್ರದೇಶ ತುಂಬಾ ಡೇಂಜರ್!
    • ತಮಿಳಿನಿಂದಲೇ ಕನ್ನಡ ಹುಟ್ಟಿದ್ದು- ಕಮಲ್ ಹಾಸನ್ ಹೇಳಿಕೆಗೆ ಕರ್ನಾಟಕದಲ್ಲಿ ವಿರೋಧ..
    • ಬೆಂಗಳೂರಿನಲ್ಲಿ ಟ್ರೋಯಿಂಗ್ ಶುರು, ಮಂಗಳೂರಿನಲ್ಲಿಯೂ ಆರಂಭವಾಗಬೇಕಾ?

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search