• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಅಯೋಧ್ಯೆಗೆ 1 ಲಕ್ಷ ಲಡ್ಡು ಬರುತ್ತಿರುವುದು ಎಲ್ಲಿಂದ ಗೊತ್ತಾ?

Tulunadu News Posted On January 6, 2024


  • Share On Facebook
  • Tweet It

ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರದ ಉದ್ಘಾಟನೆಗೆ ಬೆರಳೆಣಿಕೆಯ ದಿನಗಳು ಬಾಕಿ ಇವೆ. ಜನವರಿ 22 ರಂದು ನಡೆಯುವ ಉದ್ಘಾಟನಾ ಕಾರ್ಯಕ್ರಮಕ್ಕೆ ಕೊನೆಯ ಹಂತದ ತಯಾರಿಗಳು ನಡೆಯುತ್ತಿವೆ. ದೇಶದ ವಿವಿಧ ಭಾಗಗಳಿಂದ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಈ ಹಂತದಲ್ಲಿ ಒಂದು ಲಕ್ಷ ಲಡ್ಡುಗಳನ್ನು ತಿರುಪತಿ ತಿರುಮಲ ದೇವಸ್ವಂ ಕಡೆಯಿಂದ ಅಯೋಧ್ಯೆಯ ರಾಮ ಮಂದಿರಕ್ಕೆ ಕಳುಹಿಸಿಕೊಡಲು ಟಿಟಿಡಿ ನಿರ್ಧರಿಸಿದೆ. ಈ ಬಗ್ಗೆ ಮಾತನಾಡಿದ ಟಿಟಿಡಿ ಇದರ ಕಾರ್ಯನಿರ್ವಹಣಾ ಅಧಿಕಾರಿ ಎ ವಿ ಧರ್ಮಾ ರೆಡ್ಡಿಯವರು ಶ್ರೀ ವೆಂಕಟೇಶ್ವರ ದೇವರು ಮತ್ತು ಶ್ರೀ ರಾಮ ದೇವರು ಮಹಾವಿಷ್ಣುವಿನ ಅವತಾರವಾಗಿದ್ದಾರೆ.

ಇಡೀ ದೇಶವೇ ಭವ್ಯ ಶ್ರೀರಾಮ ಮಂದಿರದ ಉದ್ಘಾಟನೆಗಾಗಿ ಎದುರು ನೋಡುತ್ತಾ ಇದೆ. ಅಯೋಧ್ಯೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮ ಐತಿಹಾಸಿಕವಾದುದು. ನಾವು ಅಲ್ಲಿ ಭಕ್ತಾದಿಗಳಿಗೆ ತಿರುಪತಿ ಲಡ್ಡುಗಳನ್ನು ಪ್ರಸಾದ ರೂಪವಾಗಿ ಹಂಚಲಿದ್ದೇವೆ ಎಂದು ತಿಳಿಸಿದ್ದಾರೆ. ತಿರುಪತಿ ಲಡ್ಡು ಪ್ರಸಾದಕ್ಕೆ ವಿಶೇಷ ಮಹತ್ವವಿದೆ. ತಿರುಪತಿಗೆ ಬರುವ ಭಕ್ತರು ಈ ಪ್ರಸಾದವನ್ನು ತೆಗೆದುಕೊಂಡು ಊರಿಗೆ ಮರಳಿದ ನಂತರ ತಮ್ಮ ಸಂಬಂಧಿಕರಿಗೆ, ಗೆಳೆಯರಿಗೆ ಹಂಚುವ ವಾಡಿಕೆ ಇದೆ. ತಿರುಪತಿ ಪ್ರಸಾದವನ್ನು ಸೇವಿಸಿದವರು ಅಲ್ಲಿಗೆ ಹೋಗಿಬಂದಷ್ಟೇ ಭಕ್ತಿಭಾವದಿಂದ ಖುಷಿಪಡುತ್ತಾರೆ. ಈಗ ಅಯೋಧ್ಯೆಯಲ್ಲಿ ಜನವರಿ 22 ರಂದು ಕನಿಷ್ಟ 10 ಸಾವಿರ ಜನರು ಉದ್ಘಾಟನೆಯ ದಿನ ಸೇರುವ ನಿರೀಕ್ಷೆ ಇದೆ. ಉಳಿದ ಲಡ್ಡು ಪ್ರಸಾದವನ್ನು ನಂತರದ ದಿನಗಳಲ್ಲಿ ಬರುವ ಭಕ್ತರಿಗಾಗಿ ನೀಡುವ ವ್ಯವಸ್ಥೆ ಆಗಬಹುದು. ಒಟ್ಟಿನಲ್ಲಿ ದೇಶದ ಪ್ರತಿಯೊಬ್ಬ ಪ್ರಜೆಯೂ ಪ್ರಭು ಶ್ರೀ ರಾಮನಿಗಾಗಿ ಏನಾದರೂ ಸೇವೆ ಸಲ್ಲಿಸಿ ಪಾವನರಾಗುವ ಸಂಕಲ್ಪದಲ್ಲಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search