• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಯೋಧ್ಯೆಗೆ 1 ಲಕ್ಷ ಲಡ್ಡು ಬರುತ್ತಿರುವುದು ಎಲ್ಲಿಂದ ಗೊತ್ತಾ?

Tulunadu News Posted On January 6, 2024
0


0
Shares
  • Share On Facebook
  • Tweet It

ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರದ ಉದ್ಘಾಟನೆಗೆ ಬೆರಳೆಣಿಕೆಯ ದಿನಗಳು ಬಾಕಿ ಇವೆ. ಜನವರಿ 22 ರಂದು ನಡೆಯುವ ಉದ್ಘಾಟನಾ ಕಾರ್ಯಕ್ರಮಕ್ಕೆ ಕೊನೆಯ ಹಂತದ ತಯಾರಿಗಳು ನಡೆಯುತ್ತಿವೆ. ದೇಶದ ವಿವಿಧ ಭಾಗಗಳಿಂದ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಈ ಹಂತದಲ್ಲಿ ಒಂದು ಲಕ್ಷ ಲಡ್ಡುಗಳನ್ನು ತಿರುಪತಿ ತಿರುಮಲ ದೇವಸ್ವಂ ಕಡೆಯಿಂದ ಅಯೋಧ್ಯೆಯ ರಾಮ ಮಂದಿರಕ್ಕೆ ಕಳುಹಿಸಿಕೊಡಲು ಟಿಟಿಡಿ ನಿರ್ಧರಿಸಿದೆ. ಈ ಬಗ್ಗೆ ಮಾತನಾಡಿದ ಟಿಟಿಡಿ ಇದರ ಕಾರ್ಯನಿರ್ವಹಣಾ ಅಧಿಕಾರಿ ಎ ವಿ ಧರ್ಮಾ ರೆಡ್ಡಿಯವರು ಶ್ರೀ ವೆಂಕಟೇಶ್ವರ ದೇವರು ಮತ್ತು ಶ್ರೀ ರಾಮ ದೇವರು ಮಹಾವಿಷ್ಣುವಿನ ಅವತಾರವಾಗಿದ್ದಾರೆ.

ಇಡೀ ದೇಶವೇ ಭವ್ಯ ಶ್ರೀರಾಮ ಮಂದಿರದ ಉದ್ಘಾಟನೆಗಾಗಿ ಎದುರು ನೋಡುತ್ತಾ ಇದೆ. ಅಯೋಧ್ಯೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮ ಐತಿಹಾಸಿಕವಾದುದು. ನಾವು ಅಲ್ಲಿ ಭಕ್ತಾದಿಗಳಿಗೆ ತಿರುಪತಿ ಲಡ್ಡುಗಳನ್ನು ಪ್ರಸಾದ ರೂಪವಾಗಿ ಹಂಚಲಿದ್ದೇವೆ ಎಂದು ತಿಳಿಸಿದ್ದಾರೆ. ತಿರುಪತಿ ಲಡ್ಡು ಪ್ರಸಾದಕ್ಕೆ ವಿಶೇಷ ಮಹತ್ವವಿದೆ. ತಿರುಪತಿಗೆ ಬರುವ ಭಕ್ತರು ಈ ಪ್ರಸಾದವನ್ನು ತೆಗೆದುಕೊಂಡು ಊರಿಗೆ ಮರಳಿದ ನಂತರ ತಮ್ಮ ಸಂಬಂಧಿಕರಿಗೆ, ಗೆಳೆಯರಿಗೆ ಹಂಚುವ ವಾಡಿಕೆ ಇದೆ. ತಿರುಪತಿ ಪ್ರಸಾದವನ್ನು ಸೇವಿಸಿದವರು ಅಲ್ಲಿಗೆ ಹೋಗಿಬಂದಷ್ಟೇ ಭಕ್ತಿಭಾವದಿಂದ ಖುಷಿಪಡುತ್ತಾರೆ. ಈಗ ಅಯೋಧ್ಯೆಯಲ್ಲಿ ಜನವರಿ 22 ರಂದು ಕನಿಷ್ಟ 10 ಸಾವಿರ ಜನರು ಉದ್ಘಾಟನೆಯ ದಿನ ಸೇರುವ ನಿರೀಕ್ಷೆ ಇದೆ. ಉಳಿದ ಲಡ್ಡು ಪ್ರಸಾದವನ್ನು ನಂತರದ ದಿನಗಳಲ್ಲಿ ಬರುವ ಭಕ್ತರಿಗಾಗಿ ನೀಡುವ ವ್ಯವಸ್ಥೆ ಆಗಬಹುದು. ಒಟ್ಟಿನಲ್ಲಿ ದೇಶದ ಪ್ರತಿಯೊಬ್ಬ ಪ್ರಜೆಯೂ ಪ್ರಭು ಶ್ರೀ ರಾಮನಿಗಾಗಿ ಏನಾದರೂ ಸೇವೆ ಸಲ್ಲಿಸಿ ಪಾವನರಾಗುವ ಸಂಕಲ್ಪದಲ್ಲಿದ್ದಾರೆ.

0
Shares
  • Share On Facebook
  • Tweet It




Trending Now
ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
Tulunadu News August 23, 2025
'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ
Tulunadu News August 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
    • 'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ
    • ರಸ್ತೆಗೆ ಅಡ್ಡಬಂದ ನಾಯಿ- ತಪ್ಪಿಸಲು ಹೋಗಿ ಕಾರು ಪಲ್ಟಿ -ಖ್ಯಾತ ಡಿಜೆ ಮಾರ್ಮಿನ್ ಮೆಂಡೋನ್ಸಾ ನಿಧನ
    • ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
    • ನಮಸ್ತೆ ಸದಾ ವತ್ಸಲೆ... ಆರ್ ಎಸ್ ಎಸ್ ಗೀತೆ ಹಾಡಿದ ಡಿಕೆಶಿವಕುಮಾರ್!
    • ಸ್ನೇಹಮಯಿ ಕೃಷ್ಣ ಅವರಿಂದ ಸುಜಾತ ಭಟ್ ಹಾಗೂ ಇತರರ ಮೇಲೆ ಪ್ರಕರಣ ದಾಖಲು!
    • ಕಾನೂನು ಸ್ಪಷ್ಟವಾಗಿದೆ, ಡಿಜೆಗಳಿಗೆ ಅವಕಾಶ ನೀಡುವುದಿಲ್ಲ: ಕಮಿಷನ‌ರ್ ಸುಧೀರ್ ಕುಮಾರ್ ರೆಡ್ಡಿ
    • ಡಿಜೆ ಬಳಕೆಗೆ ವಿರೋಧವಿದೆ, ಆದರೆ ಧಾರ್ಮಿಕ ಕಾರ್ಯಕ್ರಮಗಳ ಆಚರಣೆಗೆ ಅಡ್ಡಿ ಪಡಿಸುವ ನಿಯಮ ಸಲ್ಲದು!
    • ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!
    • ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ಗೊತ್ತು, ಸಾಕ್ಷ್ಯವಿಲ್ಲ ಎಂದ ಹೆಗ್ಗಡೆ!
  • Popular Posts

    • 1
      ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
    • 2
      'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ
    • 3
      ರಸ್ತೆಗೆ ಅಡ್ಡಬಂದ ನಾಯಿ- ತಪ್ಪಿಸಲು ಹೋಗಿ ಕಾರು ಪಲ್ಟಿ -ಖ್ಯಾತ ಡಿಜೆ ಮಾರ್ಮಿನ್ ಮೆಂಡೋನ್ಸಾ ನಿಧನ
    • 4
      ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
    • 5
      ನಮಸ್ತೆ ಸದಾ ವತ್ಸಲೆ... ಆರ್ ಎಸ್ ಎಸ್ ಗೀತೆ ಹಾಡಿದ ಡಿಕೆಶಿವಕುಮಾರ್!

  • Privacy Policy
  • Contact
© Tulunadu Infomedia.

Press enter/return to begin your search