• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಏಕನಾಥ ಶೆಟ್ಟಿ ಇದ್ದ ಸೇನಾ ವಿಮಾನ ಏಳೂವರೆ ವರ್ಷಗಳ ಬಳಿಕ ಪತ್ತೆ!

Tulunadu News Posted On January 13, 2024
0


0
Shares
  • Share On Facebook
  • Tweet It

ಅವರ ಹೆಸರು ಏಕನಾಥ ಶೆಟ್ಟಿ. ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಅದು 2016 ರ ಜುಲೈ ತಿಂಗಳ 22 ನೇ ದಿನ. ನಮ್ಮ ಹೆಮ್ಮೆಯ ಯೋಧ ಏಕನಾಥ ಶೆಟ್ಟಿ ಸೇರಿ 29 ಯೋಧರಿದ್ದ ಭಾರತೀಯ ವಾಯುಸೇನೆಯ ಎಎನ್ 37 ವಿಮಾನ ಚೆನೈನ ತಾಂಬರಂ ವಾಯುನೆಲೆಯಿಂದ ಆಗಸಕ್ಕೆ ನೆಗೆದಿತ್ತು. ಅದು ಅಂಡಮಾನ್ ನ ಫೋರ್ಟ್ ಬ್ಲೇರ್ ಗೆ ತೆರಳಬೇಕಿತ್ತು. ಆದರೆ ವಿಧಿಯ ಕ್ರೂರ ಅಟ್ಟಹಾಸ. ಏಕನಾಥ್ ಶೆಟ್ಟಿ ಇದ್ದ ಆ ವಿಮಾನ ನಾಪತ್ತೆಯಾಗಿ ಹೋಗಿತ್ತು.

ವಾಯುಸೇನೆ, ನೌಕಾ ಸೇನೆ ಮತ್ತು ಭೂಸೇನೆಯ ಸತತ ಪ್ರಯತ್ನ, ಶೋಧದ ನಂತರವೂ ವಿಮಾನ ಎಲ್ಲಿ ನಾಪತ್ತೆಯಾಯಿತು ಎಂದು ಗೊತ್ತಾಗಲೇ ಇಲ್ಲ.


ತುರ್ತು ಪರಿಹಾರ ಎಂದು ಆಗಿನ ಸರಕಾರ ಐದು ಲಕ್ಷ ರೂಪಾಯಿ ನೀಡಿ ಕೈತೊಳೆದುಕೊಂಡಿತು. ಈಗ ಇದೆಲ್ಲಾ ಆಗಿ ಏಳೂವರೆ ವರ್ಷಗಳು ಕಳೆದಿವೆ. ಆವತ್ತು ಕಣ್ಮರೆಯಾಗಿದ್ದ ವಿಮಾನ ಈಗ ಪತ್ತೆಯಾಗಿದೆ. ಆದರೆ ಪತ್ತೆಯಾಗಿರುವುದು ಬಂಗಾಳ ಕೊಲ್ಲಿಯ ತಳಭಾಗದಲ್ಲಿ 140 ನಾಟಿಕಲ್ ಮೈಲ್ ಕೆಳಗೆ ಅಂದರೆ ಸುಮಾರು 310 ಕಿ.ಮೀ ದೂರದಲ್ಲಿ.

ಚೆನೈಯಿಂದ ಹೊರಟ ವಿಮಾನ ಆವತ್ತು ಪತನಗೊಂಡು ಬಂಗಾಳಕೊಲ್ಲಿಯಲ್ಲಿ ಬಿದ್ದಿರಬಹುದು. ಈಗ ತಳಭಾಗದಲ್ಲಿ ಅದರ ಅವಶೇಷಗಳು ಪತ್ತೆಯಾಗಿವೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯಲ್ಲಿ ನೆಲೆಸಿರುವ ಏಕನಾಥ ಶೆಟ್ಟಿ ಕುಟುಂಬ ತಮ್ಮ ಮನೆಯ ಯಜಮಾನ ಈಗಲೂ ಬದುಕುಳಿದಿರಬಹುದು ಎಂಬ ನಿರೀಕ್ಷೆಯಲ್ಲಿದೆ. ಎಲ್ಲಿಯಾದರೂ ದೇಶಸೇವೆ ಮಾಡುತ್ತಿರಬಹುದು ಎಂಬ ಆಶಾಭಾವನೆಯಲ್ಲಿದೆ. ಆದರೆ ಸರಕಾರಗಳು ಮಾತ್ರ ಈ ವೀರಯೋಧನ ತ್ಯಾಗವನ್ನು, ಬಲಿದಾನವನ್ನು ಮರೆತು ಸರಕಾರಿ ಉದ್ಯೋಗ, ನೀಡಬೇಕಾಗಿದ್ದ ನಿವೇಶನವನ್ನು ನೀಡದೇ ಮರೆತಿರುವುದು ಮಾತ್ರ ದುರಂತ…

0
Shares
  • Share On Facebook
  • Tweet It




Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
  • Popular Posts

    • 1
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 2
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 3
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..

  • Privacy Policy
  • Contact
© Tulunadu Infomedia.

Press enter/return to begin your search