• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿ ಭೇಟಿ ಕೊಟ್ಟ ಆಂಧ್ರಪ್ರದೇಶದ ವೀರಭದ್ರ ದೇವಸ್ಥಾನಕ್ಕೆ ರಾಮಾಯಣ ಕನೆಕ್ಷನ್!

Tulunadu News Posted On January 17, 2024
0


0
Shares
  • Share On Facebook
  • Tweet It

ಭಾರತದಲ್ಲಿರುವ ವಿವಿಧ ರಾಜ್ಯಗಳಲ್ಲಿ ಶ್ರೀರಾಮನ ಹೆಜ್ಜೆಗಳ ಗುರುತುಗಳು ಇರುವುದನ್ನು ನಾವು ವಿವಿಧ ಮೂಲಗಳಿಂದ ಕೇಳಿ ತಿಳಿದುಕೊಂಡಿದ್ದೇವೆ. ಪ್ರಸ್ತುತ ಆಂಧ್ರಪ್ರದೇಶದ ಲೇಪಾಕ್ಷಿಯಲ್ಲಿರುವ ವೀರಭದ್ರ ದೇವಸ್ಥಾನಕ್ಕೂ ಭಗವಂತ ರಾಮನಿಗೂ ಪೌರಾಣಿಕ ಲಿಂಕ್ ಸಿಕ್ಕಿದೆ. ಪ್ರಧಾನಿ ನರೇಂದ್ರ ಮೋದಿಯವರು ಈ ದೇವಸ್ಥಾನಕ್ಕೆ ಭೇಟಿ ಕೊಟ್ಟ ಬಳಿಕ ಅದರ ವಿಶಿಷ್ಟತೆ ಜಗತ್ತಿಗೆ ಗೊತ್ತಾಗಿದೆ.

ಸೀತಾ ಮಾತೆಯನ್ನು ರಾವಣ ಅಪಹರಿಸುವಾಗ ಜಟಾಯು ರಾವಣನನ್ನು ಬೆನ್ನಟ್ಟಿದ್ದ ಕಥೆ ನಾವು ಕೇಳಿದ್ದೇವೆ. ಬಳಿಕ ರಾವಣನ ವಿರುದ್ಧ ಪ್ರಬಲ ಹೋರಾಟ ಮಾಡಿ ಆತನ ದಾಳಿಯಿಂದ ನೆಲಕ್ಕೆ ಬಿದ್ದು ಜಟಾಯು ಸಾಯುವ ಸ್ಥಿತಿಯಲ್ಲಿತ್ತು. ಆದರೆ ಶ್ರೀರಾಮ ಸೀತಾದೇವಿಯನ್ನು ಹುಡುಕಿ ಆ ದಾರಿಯಲ್ಲಿ ಬರುವುದನ್ನು ಕಾದು ರಾವಣ ಅಪಹರಿಸಿದ ವಿಚಾರವನ್ನು ಶ್ರೀರಾಮನಿಗೆ ತಿಳಿಸಿ ಬಳಿಕ ಇಹಲೋಕ ತ್ಯಜಿಸಿತ್ತು. ನಂತರ ರಾಮ ಜಟಾಯುವಿನ ಅಂತ್ಯಕ್ರಿಯೆ ನಡೆಸಿ ಮೋಕ್ಷ ಕಲ್ಪಿಸಿದ್ದ ಎಂಬ ಪ್ರತೀತಿ ಇದೆ.
ಮೋದಿ ಈ ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಇದರ ವಿಶೇಷತೆಯನ್ನು ಕಂಡು ಕೆಲವರು ಜಟಾಯುವಿನ ಸ್ವಾಮಿನಿಷ್ಟೆಯನ್ನು ಕೊಂಡಾಡಿದ್ದಾರೆ. ತನ್ನ ಶಕ್ತಿ ಸಾಮರ್ತ್ಯವನ್ನು ಪಣಕ್ಕಿಟ್ಟು ಸೀತೆಯನ್ನು ಉಳಿಸಲು ಹೋರಾಡಿದ ಜಟಾಯುವಿನ ತ್ಯಾಗ ನಿಜಕ್ಕೂ ಅಜರಾಮರವಾಗಿದೆ. ಇಲ್ಲಿ ಸೀತಾಮಾತೆಯನ್ನು ಸ್ತ್ರೀಶಕ್ತಿ ಎಂದು ನಾವು ಪರಿಗಣಿಸಿದರೆ ಜಟಾಯುವಿನ ಶೌರ್ಯ ಮತ್ತು ಬಲಿದಾನವನ್ನು ನಮ್ಮಲ್ಲಿ ಆವಾಹನೆ ಮಾಡಿ ಇಂದಿನ ಕಾಲದಲ್ಲಿ ಮಾಡಬೇಕಾದ ಕಾರ್ಯ ಹಲವಿದೆ ಎನ್ನುವುದು ಜಟಾಯುವಿನ ಅಧ್ಯಾಯದಿಂದ ಕಲಿಯಬೇಕಾದ ಸಂಗತಿಗಳಾಗಿವೆ. ಆಂಧ್ರಪ್ರದೇಶ, ಕೇರಳ ಪ್ರವಾಸದಲ್ಲಿರುವ ಮೋದಿಯವರು ಕೇರಳದ ಗುರುವಾಯನಕೆರೆ ಮತ್ತು ತ್ರಿಪ್ರಯಾರ್ನ ಶ್ರೀ ರಾಮಸ್ವಾಮಿ ದೇವಾಲಯಗಳಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ ಎಂದು ಪ್ರಧಾನ ಮಂತ್ರಿ ಕಚೇರಿ ತಿಳಿಸಿದೆ.

0
Shares
  • Share On Facebook
  • Tweet It




Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
  • Popular Posts

    • 1
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 2
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 3
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..

  • Privacy Policy
  • Contact
© Tulunadu Infomedia.

Press enter/return to begin your search