• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿ ಭೇಟಿ ಕೊಟ್ಟ ಆಂಧ್ರಪ್ರದೇಶದ ವೀರಭದ್ರ ದೇವಸ್ಥಾನಕ್ಕೆ ರಾಮಾಯಣ ಕನೆಕ್ಷನ್!

Tulunadu News Posted On January 17, 2024
0


0
Shares
  • Share On Facebook
  • Tweet It

ಭಾರತದಲ್ಲಿರುವ ವಿವಿಧ ರಾಜ್ಯಗಳಲ್ಲಿ ಶ್ರೀರಾಮನ ಹೆಜ್ಜೆಗಳ ಗುರುತುಗಳು ಇರುವುದನ್ನು ನಾವು ವಿವಿಧ ಮೂಲಗಳಿಂದ ಕೇಳಿ ತಿಳಿದುಕೊಂಡಿದ್ದೇವೆ. ಪ್ರಸ್ತುತ ಆಂಧ್ರಪ್ರದೇಶದ ಲೇಪಾಕ್ಷಿಯಲ್ಲಿರುವ ವೀರಭದ್ರ ದೇವಸ್ಥಾನಕ್ಕೂ ಭಗವಂತ ರಾಮನಿಗೂ ಪೌರಾಣಿಕ ಲಿಂಕ್ ಸಿಕ್ಕಿದೆ. ಪ್ರಧಾನಿ ನರೇಂದ್ರ ಮೋದಿಯವರು ಈ ದೇವಸ್ಥಾನಕ್ಕೆ ಭೇಟಿ ಕೊಟ್ಟ ಬಳಿಕ ಅದರ ವಿಶಿಷ್ಟತೆ ಜಗತ್ತಿಗೆ ಗೊತ್ತಾಗಿದೆ.

ಸೀತಾ ಮಾತೆಯನ್ನು ರಾವಣ ಅಪಹರಿಸುವಾಗ ಜಟಾಯು ರಾವಣನನ್ನು ಬೆನ್ನಟ್ಟಿದ್ದ ಕಥೆ ನಾವು ಕೇಳಿದ್ದೇವೆ. ಬಳಿಕ ರಾವಣನ ವಿರುದ್ಧ ಪ್ರಬಲ ಹೋರಾಟ ಮಾಡಿ ಆತನ ದಾಳಿಯಿಂದ ನೆಲಕ್ಕೆ ಬಿದ್ದು ಜಟಾಯು ಸಾಯುವ ಸ್ಥಿತಿಯಲ್ಲಿತ್ತು. ಆದರೆ ಶ್ರೀರಾಮ ಸೀತಾದೇವಿಯನ್ನು ಹುಡುಕಿ ಆ ದಾರಿಯಲ್ಲಿ ಬರುವುದನ್ನು ಕಾದು ರಾವಣ ಅಪಹರಿಸಿದ ವಿಚಾರವನ್ನು ಶ್ರೀರಾಮನಿಗೆ ತಿಳಿಸಿ ಬಳಿಕ ಇಹಲೋಕ ತ್ಯಜಿಸಿತ್ತು. ನಂತರ ರಾಮ ಜಟಾಯುವಿನ ಅಂತ್ಯಕ್ರಿಯೆ ನಡೆಸಿ ಮೋಕ್ಷ ಕಲ್ಪಿಸಿದ್ದ ಎಂಬ ಪ್ರತೀತಿ ಇದೆ.
ಮೋದಿ ಈ ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಇದರ ವಿಶೇಷತೆಯನ್ನು ಕಂಡು ಕೆಲವರು ಜಟಾಯುವಿನ ಸ್ವಾಮಿನಿಷ್ಟೆಯನ್ನು ಕೊಂಡಾಡಿದ್ದಾರೆ. ತನ್ನ ಶಕ್ತಿ ಸಾಮರ್ತ್ಯವನ್ನು ಪಣಕ್ಕಿಟ್ಟು ಸೀತೆಯನ್ನು ಉಳಿಸಲು ಹೋರಾಡಿದ ಜಟಾಯುವಿನ ತ್ಯಾಗ ನಿಜಕ್ಕೂ ಅಜರಾಮರವಾಗಿದೆ. ಇಲ್ಲಿ ಸೀತಾಮಾತೆಯನ್ನು ಸ್ತ್ರೀಶಕ್ತಿ ಎಂದು ನಾವು ಪರಿಗಣಿಸಿದರೆ ಜಟಾಯುವಿನ ಶೌರ್ಯ ಮತ್ತು ಬಲಿದಾನವನ್ನು ನಮ್ಮಲ್ಲಿ ಆವಾಹನೆ ಮಾಡಿ ಇಂದಿನ ಕಾಲದಲ್ಲಿ ಮಾಡಬೇಕಾದ ಕಾರ್ಯ ಹಲವಿದೆ ಎನ್ನುವುದು ಜಟಾಯುವಿನ ಅಧ್ಯಾಯದಿಂದ ಕಲಿಯಬೇಕಾದ ಸಂಗತಿಗಳಾಗಿವೆ. ಆಂಧ್ರಪ್ರದೇಶ, ಕೇರಳ ಪ್ರವಾಸದಲ್ಲಿರುವ ಮೋದಿಯವರು ಕೇರಳದ ಗುರುವಾಯನಕೆರೆ ಮತ್ತು ತ್ರಿಪ್ರಯಾರ್ನ ಶ್ರೀ ರಾಮಸ್ವಾಮಿ ದೇವಾಲಯಗಳಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ ಎಂದು ಪ್ರಧಾನ ಮಂತ್ರಿ ಕಚೇರಿ ತಿಳಿಸಿದೆ.

0
Shares
  • Share On Facebook
  • Tweet It




Trending Now
ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
Tulunadu News December 17, 2025
ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
Tulunadu News December 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
  • Popular Posts

    • 1
      ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • 2
      ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • 3
      ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • 4
      ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ

  • Privacy Policy
  • Contact
© Tulunadu Infomedia.

Press enter/return to begin your search