• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಅಯೋಧ್ಯಾ ರೈಲ್ವೆ ನಿಲ್ದಾಣವನ್ನು ಲೈಟಿಂಗ್ ಮೂಲಕ ಅಲಂಕರಿಸಿದ್ದು ದಕ್ಷಿಣ ಕನ್ನಡ ಜಿಲ್ಲೆಯವರು!

Tulunadu News Posted On January 18, 2024


  • Share On Facebook
  • Tweet It

ಅಯೋಧ್ಯಾ ರೈಲ್ವೆ ನಿಲ್ದಾಣವನ್ನು ಲೈಟಿಂಗ್ ಮೂಲಕ ಅಲಂಕರಿಸಿದ ಮೂಡಬಿದ್ರೆಯ ಲೆಕ್ಸಾ ಲೈಟಿಂಗ್ ಸಂಸ್ಥೆ.
ಸ್ಪೆಷಲೈಸ್ಡ್ ಲೈಟಿಂಗ್ ನಲ್ಲಿ ಹೆಸರುವಾಸಿಯಾದ ಮೂಡಬಿದ್ರೆಯ ಲೆಕ್ಸಾ ಲೈಟಿಂಗ್ ಟೆಕ್ನಾಲಜಿಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ಉತ್ತರ ಪ್ರದೇಶದ ಅಯೋಧ್ಯಾ ರೈಲ್ವೆ ನಿಲ್ದಾಣದಲ್ಲಿ ಸುಮಾರು 300 ಕ್ಕೂ ಅಧಿಕ RGBW ಕಲರ್ ಲೈಟ್ ಗಳನ್ನು ತಯಾರಿಸಿ ಅಳವಡಿಸುವ ಮೂಲಕ ಲಕ್ಷಾನುಲಕ್ಷ ಬಣ್ಣಗಳನ್ನು ದಿನಕ್ಕೊಂದರಂತೆ ಪ್ರದರ್ಶಿಸಿ ಪ್ರವಾಸಿಗರನ್ನು ಕಣ್ಮನಸೆಳೆಯಲು ಸಿದ್ಧವಾಗಿದೆ.

ಜಪಾನೀಸ್ ಉತ್ಪಾದನಾ ವ್ಯವಸ್ಥೆಯನ್ನು ಅಳವಡಿಸಿಕೊಂಡು ಪ್ರಾರಂಭವಾದ ಈ ಉದ್ಯಮ ಪ್ರಸ್ತುತ 250 ಕ್ಕೂ ಅಧಿಕ ಉತ್ಸಾಹಿ ಸ್ಥಳೀಯ ಪ್ರತಿಭೆಗಳಿಂದ ಬೆಳಗುತ್ತಿದೆ ಎಂದರೆ ಬಹುಶಃ ಅತಿಶಯೋಕ್ತಿ ಆಗದು.

ಭಾರತೀಯ ಲೈಟಿಂಗ್ ಉತ್ಪಾದನ ಸಂಸ್ಥೆಯಾದ ಲೆಕ್ಸಾ ಲೈಟಿಂಗ್ ಮೇಕ್ ಇನ್ ಇಂಡಿಯಾ ತತ್ವವನ್ನು ಸಾಕಾರಗೊಳಿಸುತ್ತಿದೆ.
ಸಂಶೋಧನೆ ಮತ್ತು ಅಭಿವೃದ್ಧಿ, ಪರಿಕಲ್ಪನೆ, ಕಚ್ಚಾ ವಸ್ತುಗಳನ್ನು ಪಡೆಯುವುದು, ಯೋಜನೆ, ವಿನ್ಯಾಸ, ಉತ್ಪಾದನೆ ಮತ್ತು ವಿತರಣೆ ಎಂಬ ಪರಿಕಲ್ಪನೆಯ ಆಧಾರದಲ್ಲಿ 500 ಕ್ಕೂ ಅಧಿಕ ವಿಶೇಷ ಬೆಳಕಿನ ಉತ್ಪನ್ನಗಳನ್ನು ಉತ್ಪಾದಿಸಿ ಭಾರತದ ಪ್ರಮುಖ ಬ್ರಾಂಡ್ ಆಗಿ ಹೊರಹೊಮ್ಮುತ್ತಿದೆ.

ಲೆಕ್ಸಾ ಸಂಸ್ಥೆಯ ಗರಿಮೆಗೆ ಸಾರಥಿಯಾದ ಶ್ರೀ ರೊನಾಲ್ಡ್ ಸಿಲ್ವನ್ ಡಿಸೋಜ ಅವರಿಗೆ ಆತ್ಮನಿರ್ಭರ ಭಾರತ ಅವಾರ್ಡ್, ಹೈ ಪ್ಲೈಯರ್ಸ್ ಗ್ಲೋಬಲ್ ಇಂಡಿಯನ್ಸ್ ಅವಾರ್ಡ್ , ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ವ ಪ್ರಶಸ್ತಿ ಹಾಗು ಇನ್ನೂ ಅನೇಕ ಗೌರವಗಳು ದೊರಕಿದೆ.

ಕೆಲವೇ ದಿನಗಳ ಹಿಂದೆ ಲೆಕ್ಸಾ ಸಂಸ್ಥೆಯೂ ಕರ್ನಾಟಕದ ಸುವರ್ಣ ವಿಧಾನ ಸೌಧವನ್ನು ಲೈಟಿಂಗ್ ಮೂಲಕ ಅಲಂಕರಿಸಿ ಹೆಸರುವಾಸಿಯಾಗಿದೆ ಹಾಗೂ ದೇಶ ವಿದೇಶಗಳಲ್ಲಿ ಅನೇಕ ಕೆಲಸಗಳನ್ನು ಯಶಸ್ವಿಯಾಗಿ ಪೂರೈಸಿದೆ ಮತ್ತು ಈ ಎಲ್ಲಾ ಸಾಧನೆಗಳ ಪಟ್ಟಿಗೆ ಹೆಚ್ಚುವರಿಯಾಗಿ ಅಯೋಧ್ಯೆಯ ಶ್ರೀ ರಾಮ ಮಂದಿರವನ್ನು ತಲುಪಲು ಪ್ರಮುಖ ಸಾರಿಗೆ ವಿಧಾನವಾದ ಅಯೋಧ್ಯಾ ರೈಲ್ವೆ ನಿಲ್ದಾಣವನ್ನು ಲೈಟಿಂಗ್ ಮೂಲಕ ಅಲಂಕೃತಗೊಳಿಸಿ ಇನ್ನೊಂದು ಮೈಲಿಗಲ್ಲನ್ನು ತನ್ನದಾಗಿಸಿಕೊಂಡಿದೆ.

  • Share On Facebook
  • Tweet It


- Advertisement -


Trending Now
ಪ್ರತಿ ತಿಂಗಳು ಗೃಹಲಕ್ಷ್ಮಿ ಹಣ ಕೊಡುತ್ತೇವೆ ಎಂದು ಹೇಳಿರಲಿಲ್ಲ - ಡಿಸಿಎಂ
Tulunadu News May 20, 2025
ಮದರಸಾ ಪಠ್ಯದಲ್ಲಿ ಆಪರೇಶನ್ ಸಿಂಧೂರ್ ಅಳವಡಿಕೆ!
Tulunadu News May 20, 2025
Leave A Reply

  • Recent Posts

    • ಪ್ರತಿ ತಿಂಗಳು ಗೃಹಲಕ್ಷ್ಮಿ ಹಣ ಕೊಡುತ್ತೇವೆ ಎಂದು ಹೇಳಿರಲಿಲ್ಲ - ಡಿಸಿಎಂ
    • ಮದರಸಾ ಪಠ್ಯದಲ್ಲಿ ಆಪರೇಶನ್ ಸಿಂಧೂರ್ ಅಳವಡಿಕೆ!
    • ಕೂದಲು ಉದುರುವ ಸಮಸ್ಯೆ; ಮಂಗಳೂರಿನ ಯುವಕ ಆತ್ಮಹತ್ಯೆ!
    • ಬೆಂಗಳೂರಿನ ಹಲವೆಡೆ ಮಳೆಯಿಂದ ಮನೆಗಳಿಗೆ ನುಗ್ಗಿದ ನೀರು.. ಇದು ಹೊಸದಲ್ಲ - ಡಿಕೆಶಿ
    • ಭಯೋತ್ಪಾದಕತೆಯ ವಿರುದ್ಧ ವಿದೇಶಕ್ಕೆ ತೆರಳುವ ಭಾರತದ ನಿಯೋಗದಲ್ಲಿ ಓವೈಸಿ! ಹೇಳಿದ್ದೇನು?
    • ಧರ್ಮಸ್ಥಳದ ಆಕಾಂಕ್ಷ ಆತ್ಮಹತ್ಯೆಯ ಬಗ್ಗೆ ಅನುಮಾನ ಎಂದ ಹೆತ್ತವರು!
    • RSS ಕಚೇರಿ ದಾಳಿಯ ಮಾಸ್ಟರ್ ಮೈಂಡ್ ಫಿನಿಶ್.. ಅಬು ಸೈಫುಲ್ಲಾ ಹತ್ಯೆ!
    • ನಂದಿನಿ ನದಿ ಮಾಲಿನ್ಯ ಮಾಡುವವರಿಗೆ ಕಾದಿದೆ ಶಿಕ್ಷೆ: ಉಳ್ಳಾಯ ದೈವ ಅಭಯ
    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
  • Popular Posts

    • 1
      ಪ್ರತಿ ತಿಂಗಳು ಗೃಹಲಕ್ಷ್ಮಿ ಹಣ ಕೊಡುತ್ತೇವೆ ಎಂದು ಹೇಳಿರಲಿಲ್ಲ - ಡಿಸಿಎಂ
    • 2
      ಮದರಸಾ ಪಠ್ಯದಲ್ಲಿ ಆಪರೇಶನ್ ಸಿಂಧೂರ್ ಅಳವಡಿಕೆ!
    • 3
      ಕೂದಲು ಉದುರುವ ಸಮಸ್ಯೆ; ಮಂಗಳೂರಿನ ಯುವಕ ಆತ್ಮಹತ್ಯೆ!
    • 4
      ಬೆಂಗಳೂರಿನ ಹಲವೆಡೆ ಮಳೆಯಿಂದ ಮನೆಗಳಿಗೆ ನುಗ್ಗಿದ ನೀರು.. ಇದು ಹೊಸದಲ್ಲ - ಡಿಕೆಶಿ
    • 5
      ಭಯೋತ್ಪಾದಕತೆಯ ವಿರುದ್ಧ ವಿದೇಶಕ್ಕೆ ತೆರಳುವ ಭಾರತದ ನಿಯೋಗದಲ್ಲಿ ಓವೈಸಿ! ಹೇಳಿದ್ದೇನು?


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search