• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಯೋಧ್ಯಾ ರೈಲ್ವೆ ನಿಲ್ದಾಣವನ್ನು ಲೈಟಿಂಗ್ ಮೂಲಕ ಅಲಂಕರಿಸಿದ್ದು ದಕ್ಷಿಣ ಕನ್ನಡ ಜಿಲ್ಲೆಯವರು!

Tulunadu News Posted On January 18, 2024
0


0
Shares
  • Share On Facebook
  • Tweet It

ಅಯೋಧ್ಯಾ ರೈಲ್ವೆ ನಿಲ್ದಾಣವನ್ನು ಲೈಟಿಂಗ್ ಮೂಲಕ ಅಲಂಕರಿಸಿದ ಮೂಡಬಿದ್ರೆಯ ಲೆಕ್ಸಾ ಲೈಟಿಂಗ್ ಸಂಸ್ಥೆ.
ಸ್ಪೆಷಲೈಸ್ಡ್ ಲೈಟಿಂಗ್ ನಲ್ಲಿ ಹೆಸರುವಾಸಿಯಾದ ಮೂಡಬಿದ್ರೆಯ ಲೆಕ್ಸಾ ಲೈಟಿಂಗ್ ಟೆಕ್ನಾಲಜಿಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ಉತ್ತರ ಪ್ರದೇಶದ ಅಯೋಧ್ಯಾ ರೈಲ್ವೆ ನಿಲ್ದಾಣದಲ್ಲಿ ಸುಮಾರು 300 ಕ್ಕೂ ಅಧಿಕ RGBW ಕಲರ್ ಲೈಟ್ ಗಳನ್ನು ತಯಾರಿಸಿ ಅಳವಡಿಸುವ ಮೂಲಕ ಲಕ್ಷಾನುಲಕ್ಷ ಬಣ್ಣಗಳನ್ನು ದಿನಕ್ಕೊಂದರಂತೆ ಪ್ರದರ್ಶಿಸಿ ಪ್ರವಾಸಿಗರನ್ನು ಕಣ್ಮನಸೆಳೆಯಲು ಸಿದ್ಧವಾಗಿದೆ.

ಜಪಾನೀಸ್ ಉತ್ಪಾದನಾ ವ್ಯವಸ್ಥೆಯನ್ನು ಅಳವಡಿಸಿಕೊಂಡು ಪ್ರಾರಂಭವಾದ ಈ ಉದ್ಯಮ ಪ್ರಸ್ತುತ 250 ಕ್ಕೂ ಅಧಿಕ ಉತ್ಸಾಹಿ ಸ್ಥಳೀಯ ಪ್ರತಿಭೆಗಳಿಂದ ಬೆಳಗುತ್ತಿದೆ ಎಂದರೆ ಬಹುಶಃ ಅತಿಶಯೋಕ್ತಿ ಆಗದು.

ಭಾರತೀಯ ಲೈಟಿಂಗ್ ಉತ್ಪಾದನ ಸಂಸ್ಥೆಯಾದ ಲೆಕ್ಸಾ ಲೈಟಿಂಗ್ ಮೇಕ್ ಇನ್ ಇಂಡಿಯಾ ತತ್ವವನ್ನು ಸಾಕಾರಗೊಳಿಸುತ್ತಿದೆ.
ಸಂಶೋಧನೆ ಮತ್ತು ಅಭಿವೃದ್ಧಿ, ಪರಿಕಲ್ಪನೆ, ಕಚ್ಚಾ ವಸ್ತುಗಳನ್ನು ಪಡೆಯುವುದು, ಯೋಜನೆ, ವಿನ್ಯಾಸ, ಉತ್ಪಾದನೆ ಮತ್ತು ವಿತರಣೆ ಎಂಬ ಪರಿಕಲ್ಪನೆಯ ಆಧಾರದಲ್ಲಿ 500 ಕ್ಕೂ ಅಧಿಕ ವಿಶೇಷ ಬೆಳಕಿನ ಉತ್ಪನ್ನಗಳನ್ನು ಉತ್ಪಾದಿಸಿ ಭಾರತದ ಪ್ರಮುಖ ಬ್ರಾಂಡ್ ಆಗಿ ಹೊರಹೊಮ್ಮುತ್ತಿದೆ.

ಲೆಕ್ಸಾ ಸಂಸ್ಥೆಯ ಗರಿಮೆಗೆ ಸಾರಥಿಯಾದ ಶ್ರೀ ರೊನಾಲ್ಡ್ ಸಿಲ್ವನ್ ಡಿಸೋಜ ಅವರಿಗೆ ಆತ್ಮನಿರ್ಭರ ಭಾರತ ಅವಾರ್ಡ್, ಹೈ ಪ್ಲೈಯರ್ಸ್ ಗ್ಲೋಬಲ್ ಇಂಡಿಯನ್ಸ್ ಅವಾರ್ಡ್ , ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ವ ಪ್ರಶಸ್ತಿ ಹಾಗು ಇನ್ನೂ ಅನೇಕ ಗೌರವಗಳು ದೊರಕಿದೆ.

ಕೆಲವೇ ದಿನಗಳ ಹಿಂದೆ ಲೆಕ್ಸಾ ಸಂಸ್ಥೆಯೂ ಕರ್ನಾಟಕದ ಸುವರ್ಣ ವಿಧಾನ ಸೌಧವನ್ನು ಲೈಟಿಂಗ್ ಮೂಲಕ ಅಲಂಕರಿಸಿ ಹೆಸರುವಾಸಿಯಾಗಿದೆ ಹಾಗೂ ದೇಶ ವಿದೇಶಗಳಲ್ಲಿ ಅನೇಕ ಕೆಲಸಗಳನ್ನು ಯಶಸ್ವಿಯಾಗಿ ಪೂರೈಸಿದೆ ಮತ್ತು ಈ ಎಲ್ಲಾ ಸಾಧನೆಗಳ ಪಟ್ಟಿಗೆ ಹೆಚ್ಚುವರಿಯಾಗಿ ಅಯೋಧ್ಯೆಯ ಶ್ರೀ ರಾಮ ಮಂದಿರವನ್ನು ತಲುಪಲು ಪ್ರಮುಖ ಸಾರಿಗೆ ವಿಧಾನವಾದ ಅಯೋಧ್ಯಾ ರೈಲ್ವೆ ನಿಲ್ದಾಣವನ್ನು ಲೈಟಿಂಗ್ ಮೂಲಕ ಅಲಂಕೃತಗೊಳಿಸಿ ಇನ್ನೊಂದು ಮೈಲಿಗಲ್ಲನ್ನು ತನ್ನದಾಗಿಸಿಕೊಂಡಿದೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ

  • Privacy Policy
  • Contact
© Tulunadu Infomedia.

Press enter/return to begin your search