• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಯೋಧ್ಯಾ ರೈಲ್ವೆ ನಿಲ್ದಾಣವನ್ನು ಲೈಟಿಂಗ್ ಮೂಲಕ ಅಲಂಕರಿಸಿದ್ದು ದಕ್ಷಿಣ ಕನ್ನಡ ಜಿಲ್ಲೆಯವರು!

Tulunadu News Posted On January 18, 2024
0


0
Shares
  • Share On Facebook
  • Tweet It

ಅಯೋಧ್ಯಾ ರೈಲ್ವೆ ನಿಲ್ದಾಣವನ್ನು ಲೈಟಿಂಗ್ ಮೂಲಕ ಅಲಂಕರಿಸಿದ ಮೂಡಬಿದ್ರೆಯ ಲೆಕ್ಸಾ ಲೈಟಿಂಗ್ ಸಂಸ್ಥೆ.
ಸ್ಪೆಷಲೈಸ್ಡ್ ಲೈಟಿಂಗ್ ನಲ್ಲಿ ಹೆಸರುವಾಸಿಯಾದ ಮೂಡಬಿದ್ರೆಯ ಲೆಕ್ಸಾ ಲೈಟಿಂಗ್ ಟೆಕ್ನಾಲಜಿಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ಉತ್ತರ ಪ್ರದೇಶದ ಅಯೋಧ್ಯಾ ರೈಲ್ವೆ ನಿಲ್ದಾಣದಲ್ಲಿ ಸುಮಾರು 300 ಕ್ಕೂ ಅಧಿಕ RGBW ಕಲರ್ ಲೈಟ್ ಗಳನ್ನು ತಯಾರಿಸಿ ಅಳವಡಿಸುವ ಮೂಲಕ ಲಕ್ಷಾನುಲಕ್ಷ ಬಣ್ಣಗಳನ್ನು ದಿನಕ್ಕೊಂದರಂತೆ ಪ್ರದರ್ಶಿಸಿ ಪ್ರವಾಸಿಗರನ್ನು ಕಣ್ಮನಸೆಳೆಯಲು ಸಿದ್ಧವಾಗಿದೆ.

ಜಪಾನೀಸ್ ಉತ್ಪಾದನಾ ವ್ಯವಸ್ಥೆಯನ್ನು ಅಳವಡಿಸಿಕೊಂಡು ಪ್ರಾರಂಭವಾದ ಈ ಉದ್ಯಮ ಪ್ರಸ್ತುತ 250 ಕ್ಕೂ ಅಧಿಕ ಉತ್ಸಾಹಿ ಸ್ಥಳೀಯ ಪ್ರತಿಭೆಗಳಿಂದ ಬೆಳಗುತ್ತಿದೆ ಎಂದರೆ ಬಹುಶಃ ಅತಿಶಯೋಕ್ತಿ ಆಗದು.

ಭಾರತೀಯ ಲೈಟಿಂಗ್ ಉತ್ಪಾದನ ಸಂಸ್ಥೆಯಾದ ಲೆಕ್ಸಾ ಲೈಟಿಂಗ್ ಮೇಕ್ ಇನ್ ಇಂಡಿಯಾ ತತ್ವವನ್ನು ಸಾಕಾರಗೊಳಿಸುತ್ತಿದೆ.
ಸಂಶೋಧನೆ ಮತ್ತು ಅಭಿವೃದ್ಧಿ, ಪರಿಕಲ್ಪನೆ, ಕಚ್ಚಾ ವಸ್ತುಗಳನ್ನು ಪಡೆಯುವುದು, ಯೋಜನೆ, ವಿನ್ಯಾಸ, ಉತ್ಪಾದನೆ ಮತ್ತು ವಿತರಣೆ ಎಂಬ ಪರಿಕಲ್ಪನೆಯ ಆಧಾರದಲ್ಲಿ 500 ಕ್ಕೂ ಅಧಿಕ ವಿಶೇಷ ಬೆಳಕಿನ ಉತ್ಪನ್ನಗಳನ್ನು ಉತ್ಪಾದಿಸಿ ಭಾರತದ ಪ್ರಮುಖ ಬ್ರಾಂಡ್ ಆಗಿ ಹೊರಹೊಮ್ಮುತ್ತಿದೆ.

ಲೆಕ್ಸಾ ಸಂಸ್ಥೆಯ ಗರಿಮೆಗೆ ಸಾರಥಿಯಾದ ಶ್ರೀ ರೊನಾಲ್ಡ್ ಸಿಲ್ವನ್ ಡಿಸೋಜ ಅವರಿಗೆ ಆತ್ಮನಿರ್ಭರ ಭಾರತ ಅವಾರ್ಡ್, ಹೈ ಪ್ಲೈಯರ್ಸ್ ಗ್ಲೋಬಲ್ ಇಂಡಿಯನ್ಸ್ ಅವಾರ್ಡ್ , ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ವ ಪ್ರಶಸ್ತಿ ಹಾಗು ಇನ್ನೂ ಅನೇಕ ಗೌರವಗಳು ದೊರಕಿದೆ.

ಕೆಲವೇ ದಿನಗಳ ಹಿಂದೆ ಲೆಕ್ಸಾ ಸಂಸ್ಥೆಯೂ ಕರ್ನಾಟಕದ ಸುವರ್ಣ ವಿಧಾನ ಸೌಧವನ್ನು ಲೈಟಿಂಗ್ ಮೂಲಕ ಅಲಂಕರಿಸಿ ಹೆಸರುವಾಸಿಯಾಗಿದೆ ಹಾಗೂ ದೇಶ ವಿದೇಶಗಳಲ್ಲಿ ಅನೇಕ ಕೆಲಸಗಳನ್ನು ಯಶಸ್ವಿಯಾಗಿ ಪೂರೈಸಿದೆ ಮತ್ತು ಈ ಎಲ್ಲಾ ಸಾಧನೆಗಳ ಪಟ್ಟಿಗೆ ಹೆಚ್ಚುವರಿಯಾಗಿ ಅಯೋಧ್ಯೆಯ ಶ್ರೀ ರಾಮ ಮಂದಿರವನ್ನು ತಲುಪಲು ಪ್ರಮುಖ ಸಾರಿಗೆ ವಿಧಾನವಾದ ಅಯೋಧ್ಯಾ ರೈಲ್ವೆ ನಿಲ್ದಾಣವನ್ನು ಲೈಟಿಂಗ್ ಮೂಲಕ ಅಲಂಕೃತಗೊಳಿಸಿ ಇನ್ನೊಂದು ಮೈಲಿಗಲ್ಲನ್ನು ತನ್ನದಾಗಿಸಿಕೊಂಡಿದೆ.

0
Shares
  • Share On Facebook
  • Tweet It




Trending Now
ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
Tulunadu News October 28, 2025
ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
Tulunadu News October 28, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
  • Popular Posts

    • 1
      ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • 2
      ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • 3
      ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • 4
      ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • 5
      ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!

  • Privacy Policy
  • Contact
© Tulunadu Infomedia.

Press enter/return to begin your search