• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಯೋಧ್ಯಾ ರೈಲ್ವೆ ನಿಲ್ದಾಣವನ್ನು ಲೈಟಿಂಗ್ ಮೂಲಕ ಅಲಂಕರಿಸಿದ್ದು ದಕ್ಷಿಣ ಕನ್ನಡ ಜಿಲ್ಲೆಯವರು!

Tulunadu News Posted On January 18, 2024
0


0
Shares
  • Share On Facebook
  • Tweet It

ಅಯೋಧ್ಯಾ ರೈಲ್ವೆ ನಿಲ್ದಾಣವನ್ನು ಲೈಟಿಂಗ್ ಮೂಲಕ ಅಲಂಕರಿಸಿದ ಮೂಡಬಿದ್ರೆಯ ಲೆಕ್ಸಾ ಲೈಟಿಂಗ್ ಸಂಸ್ಥೆ.
ಸ್ಪೆಷಲೈಸ್ಡ್ ಲೈಟಿಂಗ್ ನಲ್ಲಿ ಹೆಸರುವಾಸಿಯಾದ ಮೂಡಬಿದ್ರೆಯ ಲೆಕ್ಸಾ ಲೈಟಿಂಗ್ ಟೆಕ್ನಾಲಜಿಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ಉತ್ತರ ಪ್ರದೇಶದ ಅಯೋಧ್ಯಾ ರೈಲ್ವೆ ನಿಲ್ದಾಣದಲ್ಲಿ ಸುಮಾರು 300 ಕ್ಕೂ ಅಧಿಕ RGBW ಕಲರ್ ಲೈಟ್ ಗಳನ್ನು ತಯಾರಿಸಿ ಅಳವಡಿಸುವ ಮೂಲಕ ಲಕ್ಷಾನುಲಕ್ಷ ಬಣ್ಣಗಳನ್ನು ದಿನಕ್ಕೊಂದರಂತೆ ಪ್ರದರ್ಶಿಸಿ ಪ್ರವಾಸಿಗರನ್ನು ಕಣ್ಮನಸೆಳೆಯಲು ಸಿದ್ಧವಾಗಿದೆ.

ಜಪಾನೀಸ್ ಉತ್ಪಾದನಾ ವ್ಯವಸ್ಥೆಯನ್ನು ಅಳವಡಿಸಿಕೊಂಡು ಪ್ರಾರಂಭವಾದ ಈ ಉದ್ಯಮ ಪ್ರಸ್ತುತ 250 ಕ್ಕೂ ಅಧಿಕ ಉತ್ಸಾಹಿ ಸ್ಥಳೀಯ ಪ್ರತಿಭೆಗಳಿಂದ ಬೆಳಗುತ್ತಿದೆ ಎಂದರೆ ಬಹುಶಃ ಅತಿಶಯೋಕ್ತಿ ಆಗದು.

ಭಾರತೀಯ ಲೈಟಿಂಗ್ ಉತ್ಪಾದನ ಸಂಸ್ಥೆಯಾದ ಲೆಕ್ಸಾ ಲೈಟಿಂಗ್ ಮೇಕ್ ಇನ್ ಇಂಡಿಯಾ ತತ್ವವನ್ನು ಸಾಕಾರಗೊಳಿಸುತ್ತಿದೆ.
ಸಂಶೋಧನೆ ಮತ್ತು ಅಭಿವೃದ್ಧಿ, ಪರಿಕಲ್ಪನೆ, ಕಚ್ಚಾ ವಸ್ತುಗಳನ್ನು ಪಡೆಯುವುದು, ಯೋಜನೆ, ವಿನ್ಯಾಸ, ಉತ್ಪಾದನೆ ಮತ್ತು ವಿತರಣೆ ಎಂಬ ಪರಿಕಲ್ಪನೆಯ ಆಧಾರದಲ್ಲಿ 500 ಕ್ಕೂ ಅಧಿಕ ವಿಶೇಷ ಬೆಳಕಿನ ಉತ್ಪನ್ನಗಳನ್ನು ಉತ್ಪಾದಿಸಿ ಭಾರತದ ಪ್ರಮುಖ ಬ್ರಾಂಡ್ ಆಗಿ ಹೊರಹೊಮ್ಮುತ್ತಿದೆ.

ಲೆಕ್ಸಾ ಸಂಸ್ಥೆಯ ಗರಿಮೆಗೆ ಸಾರಥಿಯಾದ ಶ್ರೀ ರೊನಾಲ್ಡ್ ಸಿಲ್ವನ್ ಡಿಸೋಜ ಅವರಿಗೆ ಆತ್ಮನಿರ್ಭರ ಭಾರತ ಅವಾರ್ಡ್, ಹೈ ಪ್ಲೈಯರ್ಸ್ ಗ್ಲೋಬಲ್ ಇಂಡಿಯನ್ಸ್ ಅವಾರ್ಡ್ , ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ವ ಪ್ರಶಸ್ತಿ ಹಾಗು ಇನ್ನೂ ಅನೇಕ ಗೌರವಗಳು ದೊರಕಿದೆ.

ಕೆಲವೇ ದಿನಗಳ ಹಿಂದೆ ಲೆಕ್ಸಾ ಸಂಸ್ಥೆಯೂ ಕರ್ನಾಟಕದ ಸುವರ್ಣ ವಿಧಾನ ಸೌಧವನ್ನು ಲೈಟಿಂಗ್ ಮೂಲಕ ಅಲಂಕರಿಸಿ ಹೆಸರುವಾಸಿಯಾಗಿದೆ ಹಾಗೂ ದೇಶ ವಿದೇಶಗಳಲ್ಲಿ ಅನೇಕ ಕೆಲಸಗಳನ್ನು ಯಶಸ್ವಿಯಾಗಿ ಪೂರೈಸಿದೆ ಮತ್ತು ಈ ಎಲ್ಲಾ ಸಾಧನೆಗಳ ಪಟ್ಟಿಗೆ ಹೆಚ್ಚುವರಿಯಾಗಿ ಅಯೋಧ್ಯೆಯ ಶ್ರೀ ರಾಮ ಮಂದಿರವನ್ನು ತಲುಪಲು ಪ್ರಮುಖ ಸಾರಿಗೆ ವಿಧಾನವಾದ ಅಯೋಧ್ಯಾ ರೈಲ್ವೆ ನಿಲ್ದಾಣವನ್ನು ಲೈಟಿಂಗ್ ಮೂಲಕ ಅಲಂಕೃತಗೊಳಿಸಿ ಇನ್ನೊಂದು ಮೈಲಿಗಲ್ಲನ್ನು ತನ್ನದಾಗಿಸಿಕೊಂಡಿದೆ.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search