• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಾಲೀಕರಿಗೆ ಜನವರಿ 22 ರ ಕುರಿತು ವಿಶ್ವ ಹಿಂದೂ ಪರಿಷತ್ ಮಾಡಿದ ಮನವಿ ಏನು ?

Tulunadu News Posted On January 18, 2024
0


0
Shares
  • Share On Facebook
  • Tweet It

ಅಯೋಧ್ಯೆ ಶ್ರೀರಾಮದೇವರ ಪ್ರಾಣಪ್ರತಿಷ್ಠಾ ಪ್ರಯುಕ್ತ ಜಿಲ್ಲೆಯಾದ್ಯಂತ ನಡೆಯುವ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಜನರಿಗೆ ಸ್ವಯಂಪ್ರೇರಿತವಾಗಿ ಭಾಗವಹಿಸಲು ಅವಕಾಶ ಕಲ್ಪಿಸುವಂತೆ ಖಾಸಗಿ ಸಂಘಸಂಸ್ಥೆಗಳು, ಮಾಲೀಕರಿಗೆ – ವಿಶ್ವ ಹಿಂದೂ ಪರಿಷದ್ ಮನವಿ ಮಾಡಿದೆ
500 ವರ್ಷಗಳ ಹೋರಾಟದ ನಂತರ ಅಯೋಧ್ಯೆಯಲ್ಲಿ ಶ್ರೀರಾಮದೇವರ ಭವ್ಯಮಂದಿರ ನಿರ್ಮಾಣವಾಗುತ್ತಿದ್ದು, ಜನವರಿ 22ರಂದು ಶ್ರೀರಾಮದೇವರ ಪ್ರಾಣ ಪ್ರತಿಷ್ಠೆ ನಡೆಯಲಿದೆ. ಭಾರತೀಯರೆಲ್ಲರೂ ಆ ದಿನವನ್ನು ಬಹಳ ಸಂಭ್ರಮ ಸಡಗರದಿಂದ ಆಚರಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಕರಾವಳಿಯ ವಿವಿಧ ಮಂದಿರಗಳಲ್ಲಿ ಹೋಮ, ಯಜ್ಞ, ಪೂಜೆ, ಜಪ, ಭಜನೆ, ಪ್ರವಚನ, ಆರತಿ ಸೇರಿದಂತೆ ಅಯೋಧ್ಯೆಯಲ್ಲಿ ನಡೆಯುವ ಕಾರ್ಯಕ್ರಮದ ನೇರ ಪ್ರಸಾರದ ವ್ಯವಸ್ಥೆ ಕೂಡ ಸಿದ್ಧತೆಗೊಳ್ಳುತ್ತಿದೆ. ರಾಜ್ಯದ ಮುಜರಾಯಿ ಇಲಾಖೆಯು ಎಲ್ಲಾ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನಡೆಸುವಂತೆ ಆದೇಶ ನೀಡಿದೆ.ಈ ಶುಭದಿನವು ಕೆಲಸದ ದಿನವಾಗಿರುವುದರಿಂದ ಜನರಿಗೆ ಭಾಗವಹಿಸಲು ಅನುಕೂಲವಾಗುವಂತೆ ಉದ್ಯಮಪತಿಗಳು, ಸಂಘ-ಸಂಸ್ಥೆಗಳು, ವ್ಯಾಪಾರ ಮಳಿಗೆಗಳು. ವ್ಯಾಪಾರಿಗಳು, ಹೋಟೆಲ್ ಉದ್ಯಮಿಗಳು, ಶಾಲಾ ಕಾಲೇಜು ಆಡಳಿತ ಮಂಡಳಿಗಳು, ಸರ್ಕಾರಿ ಕಚೇರಿಗಳ ಮುಖ್ಯಸ್ಥರ ಬಳಿ ವಿಶ್ವ ಹಿಂದೂ ಪರಿಷತ್ ವಿನಯ ಪೂರ್ವಕವಾಗಿ ವಿನಂತಿಸುತ್ತದೆ. ಮಂದಿರಗಳಲ್ಲಿ ನಡೆಯುವ ಕಾರ್ಯಕ್ರಮವು ಬೆಳ್ಳಿಗೆ 10 ರಿಂದ ಮಧ್ಯಾಹ್ನ 2 ಗಂಟೆಯ ತನಕ ನಡೆಯಲಿದೆ, ಈ ಸಮಯದಲ್ಲಿ ತಾವುಗಳು ತಮ್ಮಲ್ಲಿ ಕೆಲಸ ಮಾಡುವವರಿಗೆ, ವಿದ್ಯಾರ್ಥಿಗಳಿಗೆ, ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸುವಂತೆ ವಿನಂತಿಸಿದೆ.

ಕರಾವಳಿಯ 7 ಲಕ್ಷ ಮನೆಗಳಿಗೆ ಪವಿತ್ರಮಂತ್ರಾಕ್ಷತೆ ವಿತರಣೆ – ಸಾವಿರಕ್ಕೂ ಹೆಚ್ಚು ಧಾರ್ಮಿಕ ಕೇಂದ್ರಗಳಲ್ಲಿ ನೇರಪ್ರಸಾರದ ವ್ಯವಸ್ಥೆಗೆ ಸಿದ್ಧತೆ. 1200 ಕೇಂದ್ರಗಳಲ್ಲಿ ಧಾರ್ಮಿಕ ಕಾರ್ಯಕ್ರಮದೊಂದಿಗೆ ನೇರಪ್ರಸಾರದ ವ್ಯವಸ್ಥೆಯ ಸಿದ್ಧತೆ

ಜನವರಿ 1 ರಿಂದ 15 ತನಕ ನಡೆದ ಪವಿತ್ರಮಂತ್ರಾಕ್ಷತೆ ವಿತರಣೆ ಕಾರ್ಯಕ್ರಮ ಯಶಸ್ವಿಯಾಗಿ ನಡೆದು ದಕ್ಷಿಣಕನ್ನಡ, ಉಡುಪಿ, ಕೊಡಗು ಸೇರಿದಂತೆ ಕರಾವಳಿಯಲ್ಲಿ 7 ಲಕ್ಷ ಮನೆಗಳಿಗೆ ಪವಿತ್ರ ಮಂತ್ರಾಕ್ಷತೆ ವಿತರಿಸಲಾಗಿದೆ – 1200 ಕೇಂದ್ರಗಳಲ್ಲಿ ಧಾರ್ಮಿಕ ಕಾರ್ಯಕ್ರಮದೊಂದಿಗೆ ನೇರಪ್ರಸಾರದ ವ್ಯವಸ್ಥೆಯ ಸಿದ್ಧತೆ
ಜನವರಿ 22 ರಂದು ಅಯೋಧ್ಯೆಯ ಪುನರ್ಪ್ರತಿಷ್ಠೆಯ ಸುಸಂಧರ್ಭ ಕರಾವಳಿಯ 1000 ಕ್ಕೂ ಹೆಚ್ಚು ಧಾರ್ಮಿಕ ಕೇಂದ್ರಗಳಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇತಿಹಾಸ ಪ್ರಸಿದ್ಧ ಕದ್ರಿ ಶ್ರೀ ಮಂಜುನಾಥ ದೇವಸ್ಥಾನ, ಶ್ರೀ ಮಂಗಳಾದೇವಿ ದೇವಸ್ಥಾನ, ಪಾಂಡೇಶ್ವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಮರೋಳಿ ಶ್ರೀ ಸೂರ್ಯನಾರಾಯಣ ದೇವಸ್ಥಾನ, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಉಜಿರೆ ಶ್ರೀ ಜನಾರ್ಧನ ದೇವಸ್ಥಾನ, ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನ, ಉಡುಪಿ ಶ್ರೀ ಕೃಷ್ಣ ಮಠ, ಕುಂದಾಪುರ ಕುಂದೇಶ್ವರ ದೇವಸ್ಥಾನ, ಮಡಿಕೇರಿ ಶ್ರೀ ಓಂಕಾರೇಶ್ವರ ದೇವಸ್ಥಾನ ಮತ್ತು ಭಾಗಮಂಡಲ ದೇವಸ್ಥಾನ ಸೇರಿದಂತೆ 1200 ಕ್ಕೂ ಅಧಿಕ ಧಾರ್ಮಿಕ ಕೇಂದ್ರಗಳಲ್ಲಿ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಅಯೋಧ್ಯೆಯಲ್ಲಿ ನಡೆಯುವ ಕಾರ್ಯಕ್ರಮದ ನೇರಪ್ರಸಾರ ವೀಕ್ಷಿಸಲು ಸಿದ್ಧತೆ ಮಾಡಲಾಗಿದೆ.
ಪ್ರಾಣ ಪ್ರತಿಷ್ಠಾಪನೆಯ ದಿನದ ಸಂಜೆ ಸೂರ್ಯಾಸ್ತವಾದ ಮೇಲೆ ಪ್ರತಿಯೊಬ್ಬ ರಾಮಭಕ್ತರು ತಮ್ಮ ತಮ್ಮ ಮನೆಯ ಮುಂದೆ ಎಲ್ಲ ದೇವಾದಿ ದೇವತೆಗಳನ್ನು ಪ್ರಸನ್ನಗೊಳಿಸಲು ಕನಿಷ್ಠ 5 ದೀಪಗಳನ್ನು ಬೆಳಗುವುದರೊಂದಿಗೆ ಮತ್ತೊಂದು ದೀಪಾವಳಿಯನ್ನು ಆಚರಿಸಲಾಗುತ್ತದೆ. ಇದೇ ಸಂಧರ್ಭದಲ್ಲಿ ಪ್ರತೀ ಮನೆಯಲ್ಲಿ ಮನೆಯವರೆಲ್ಲ ಸೇರಿ ಅಯೋಧ್ಯೆ ಶ್ರೀರಾಮ ಮಂದಿರವಿರುವ ಉತ್ತರ ದಿಕ್ಕಿಗೆ ಮುಖ ಮಾಡಿ ಮಹಾ ಮಂಗಳಾರತಿಯನ್ನು ಮಾಡುವುದರ ಮೂಲಕ ಶ್ರೀರಾಮಚಂದ್ರ ದೇವರ ಕೃಪೆಗೆ ಪಾತ್ರರಾಗಬೇಕಾಗಿ ವಿನಂತಿಮಾಡಿದ್ದಾರೆ.

0
Shares
  • Share On Facebook
  • Tweet It




Trending Now
ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
Tulunadu News January 3, 2026
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
Tulunadu News January 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
  • Popular Posts

    • 1
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 2
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • 3
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • 4
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ

  • Privacy Policy
  • Contact
© Tulunadu Infomedia.

Press enter/return to begin your search