• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಯೋಧ್ಯೆಯ ಪ್ರಾಣಪ್ರತಿಷ್ಟೆಯಲ್ಲಿ ಸುಳ್ಯದ ಪುರೋಹಿತರು!

Tulunadu News Posted On January 19, 2024
0


0
Shares
  • Share On Facebook
  • Tweet It

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಪ್ರತಿಭಾವಂತರಿಗೇನೂ ಕಡಿಮೆ ಇಲ್ಲ. ತಾಲೂಕು ಅಭಿವೃದ್ಧಿಯಲ್ಲಿ ಹಿಂದುಳಿದಿದ್ದರೂ ಸುಳ್ಯದ ಅನೇಕರು ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಬೇರೆ ಬೇರೆ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಾ ಸಾಕಷ್ಟು ಹೆಸರು, ಕೀರ್ತಿ, ಯಶಸ್ಸು ಗಳಿಸಿದ್ದಾರೆ. ಈಗ ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ರಾಮಲಲ್ಲಾನ ವಿಗ್ರಹದ ಪ್ರಾಣಪ್ರತಿಷ್ಟೆಯ ಧಾರ್ಮಿಕ ಪ್ರಕ್ರಿಯೆಯಲ್ಲಿ ಭಾಗವಹಿಸಲು ಸುಳ್ಯ ತಾಲೂಕಿನ ಸಂಸ್ಕೃತ ವಿದ್ವಾಂಸರೊಬ್ಬರು ಆಯ್ಕೆಯಾಗಿದ್ದಾರೆ.

ಜಾಲ್ಸೂರು ಗ್ರಾಮದ ಕೆಮನಹಳ್ಳಿ ಮೂಲದ ಪ್ರಸ್ತುತ ತಿರುಪತಿಯ ರಾಷ್ಟ್ರೀಯ ಸಂಸ್ಕೃತ ವಿ.ವಿ.ಯ ಪರಮಚಾರ್ಯ ಗುರುಕುಲದ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಡಾ.ಕೆ. ಗಣಪತಿ ಭಟ್ ಈ ಅಪೂರ್ವ ಅವಕಾಶ ಪಡೆದುಕೊಂಡಿದ್ದಾರೆ. ರಾಮಲಲ್ಲಾನ ವಿಗ್ರಹ ಪ್ರತಿಷ್ಟೆಯ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲು ನೇಮಕವಾಗಿರುವ 101 ಮಂದಿ ಪ್ರಧಾನ ಪುರೋಹಿತ ತಂಡದಲ್ಲಿ ಗಣಪತಿ ಭಟ್ ಕೂಡ ಒಬ್ಬರು. ಇವರ ನೇತೃತ್ವದಲ್ಲಿರುವ ತಂಡದಲ್ಲಿ 40 ಮಂದಿ ಅರ್ಚಕರು ಇರಲಿದ್ದಾರೆ.

ಸುಳ್ಯದಲ್ಲಿ ಆರಂಭಿಕ ಶಿಕ್ಷಣವನ್ನು ಪೂರೈಸಿ 1978 ರಲ್ಲಿ ಕಂಚಿ ಕಾಮಕೋಟಿ ವಿದ್ಯಾಪೀಠದಲ್ಲಿ ಋಗ್ವೇದದಲ್ಲಿ ಪದವಿ ಶಿಕ್ಷಣವನ್ನು ಪಡೆದರು. ಬಳಿಕ ಮಂತ್ರಾಲಯ ಶ್ರೀ ರಾಘವೇಂದ್ರ ಮಠದಲ್ಲಿ ಶಾಸ್ತ್ರ ಅಧ್ಯಯನ ವಿಷಯದಲ್ಲಿ ಎಂ.ಎ., ತಿರುಪತಿ ರಾಷ್ಟ್ರೀಯ ಸಂಸ್ಕೃತ ವಿ.ವಿ.ಯಲ್ಲಿ ಪಿಎಚ್ ಡಿ ಪಡೆದರು. ಮದ್ರಾಸ್ ವಿ.ವಿ.ಯಲ್ಲಿ ಸಂಸ್ಕೃತ ವೇದಾಂತ ಮತ್ತು ನ್ಯಾಯಶಾಸ್ತ್ರದಲ್ಲಿ ಮತ್ತೊಂದು ಎಂ.ಎ ಪದವಿ ಪೂರೈಸಿದ್ದಾರೆ.

ಕಾಲಡಿಯ ಶಂಕರಾಚಾರ್ಯ ವಿ.ವಿ.ಯಲ್ಲಿ 8 ವರ್ಷ ಉಪನ್ಯಾಸಕರಾಗಿ, ತಿರುಪತಿ ರಾಷ್ಟ್ರೀಯ ಸಂಸ್ಕೃತ ವಿ.ವಿ.ಯಲ್ಲಿ ಪ್ರೋಫೆಸರ್, ಪರೀಕ್ಷಾಂಗ ಕುಲಸಚಿವ, ಪ್ರಸ್ತುತ ಗುರುಕುಲದ ನಿರ್ದೇಶಕರಾಗಿದ್ದಾರೆ. ಕೇರಳದ ಎಲ್ಲಾ ವಿಶ್ವವಿದ್ಯಾನಿಲಯಗಳ ಪರೀಕ್ಷಾಧಿಕಾರಿಯಾಗಿ, ದೇಶದ ವಿವಿಧ 18 ವಿ.ವಿ.ಗಳ ಪಿ.ಎಚ್.ಡಿ ಮೌಲ್ಯಮಾಪಕರಾಗಿಯೂ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

0
Shares
  • Share On Facebook
  • Tweet It




Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
  • Popular Posts

    • 1
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • 2
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search