• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಂಗ್ರೆಸ್ ಹಿರಿಯ ನಾಯಕರಿಂದಲೇ ಸರಕಾರದ ವಿರುದ್ಧ ಲಂಚದ ಆರೋಪ!

Tulunadu News Posted On February 2, 2024
0


0
Shares
  • Share On Facebook
  • Tweet It

ಭಾರತೀಯ ಜನತಾ ಪಾರ್ಟಿಯ ಸರಕಾರ ಇದ್ದಾಗ ಅದರ ವಿರುದ್ಧ 40% ಭ್ರಷ್ಟಾಚಾರದ ಆರೋಪವನ್ನು ಮಾಡಿದ್ದ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಇನ್ನೂ ಒಂದು ವರ್ಷವೂ ಆಗಿಲ್ಲ. ಎಂಟು ತಿಂಗಳು ಮುಗಿಯುವಷ್ಟರಲ್ಲಿಯೇ ಅವರ ಪಕ್ಷದ ಹಿರಿಯ ಮುಖಂಡರೂ, ಮಾಜಿ ಸಚಿವರೂ ಆಗಿರುವ ಬಿ ಶಿವರಾಂ ಅವರು ತಮ್ಮ ಸರಕಾರದ ಲೋಪದೋಷವನ್ನು ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ. “ನಾನು ಮುಖ್ಯಮಂತ್ರಿಗಳ ಎದುರು ನೇರವಾಗಿ ಹೇಳಿದೆ. ನಮ್ಮ ಜಿಲ್ಲೆಗೆ ಕೆಟ್ಟ ಹೆಸರು ಬರುತ್ತಾ ಇದೆ. ಲಂಚ ಎಂದು ಹೇಳಿ ನಾವು ಗೆದ್ದು ಈಗ ಅದಕ್ಕಿಂತ ಹೆಚ್ಚಾಗಿದೆ. ಸರಿಯಾಗಿ ಬುದ್ಧಿ ಹೇಳಿ” ಎಂದು ತಾವು ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಬಳಿ ಮನವಿ ಮಾಡಿದ್ದಾಗಿ ಮಾಜಿ ಸಚಿವ ಶಿವರಾಂ ಮಾಧ್ಯಮಗಳ ಮುಂದೆ ಹೇಳಿದ್ದಾರೆ. ಅಕ್ರಮಗಳಿಗೆ ಕಡಿವಾಣ ಹಾಕಲು ಒತ್ತಾಯಿಸಿದ್ದಾಗಿ ಒಪ್ಪಿಕೊಂಡಿದ್ದಾರೆ. ಲಂಚ ಸಹಿತ ಇದೆಲ್ಲವೂ ಮೀರಬಾರದು, ಇದರಿಂದ ಪಕ್ಷಕ್ಕೆ, ಸರಕಾರಕ್ಕೆ ಕೆಟ್ಟ ಹೆಸರು ಬರುತ್ತದೆ. ಹಾಗೆ ಆಗಬಾರದು ಎನ್ನುವುದು ತಮ್ಮ ಅಪೇಕ್ಷೆ ಅವರು ತಿಳಿಸಿದರು. ಹಾಸನ ಜಿಲ್ಲಾ ಪಂಚಾಯತ್ ಗೆ 13 ಕೋಟಿ ರೂಪಾಯಿ ಹಣ ಏನಾಯಿತು ಎಂದು ತಮ್ಮದೇ ಪಕ್ಷದ ಶಾಸಕ ಶಿವಲಿಂಗೇಗೌಡರ ವಿರುದ್ಧ ಪರೋಕ್ಷ ವಾಗ್ದಾಳಿಯನ್ನು ಮಾಡಿದ್ದಾರೆ.


ಹೀಗೆ ಲೋಕಸಭಾ ಚುನಾವಣೆಗೆ ಬೆರಳೆಣಿಕೆಯ ತಿಂಗಳುಗಳು ಇರುವಾಗ ಕಾಂಗ್ರೆಸ್ ಪಕ್ಷದ ಮಾಜಿ ಸಚಿವರು ಮಾಧ್ಯಮ ಗೋಷ್ಟಿಯಲ್ಲಿ ಹೇಳಿರುವುದು ಭಾರತೀಯ ಜನತಾ ಪಾರ್ಟಿಗೆ ಸಹಜವಾಗಿ ಅಸ್ತ್ರ ಸಿಕ್ಕಂತೆ ಆಗಿದೆ. ವಿಪಕ್ಷದಲ್ಲಿದ್ದಾಗ ಬಿಜೆಪಿ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುತ್ತಾ ಬರುತ್ತಿದ್ದ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ತಾನೇ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಬಿಜೆಪಿ ಆರೋಪ ಮಾಡುತ್ತಾ ಬರುತ್ತಿತ್ತು. ಈಗ ಅದಕ್ಕೆ ಕಾಂಗ್ರೆಸ್ಸಿಗರೇ ಪುರಾವೆ ನೀಡುತ್ತಿರುವುದು ಬಿಜೆಪಿ ಆರೋಪಕ್ಕೆ ಇನ್ನಷ್ಟು ಪುಷ್ಠಿ ಸಿಕ್ಕಂತೆ ಆಗಿದೆ. ಸರಕಾರ ಹಾದಿ ತಪ್ಪಬಾರದು ಎಂದು ತಾವು ಹೀಗೆ ಸಿಎಂ ಮುಂದೆ ಆಗ್ರಹಿಸಿದ್ದಾಗಿ ಶಿವರಾಂ ಹೇಳಿದರೂ ಅವರು ಬಹಿರಂಗವಾಗಿ ಈಗ ಅದನ್ನು ಮಾಧ್ಯಮಗಳ ಮುಂದೆ ಪ್ರಸ್ತಾಪಿಸಿರುವುದು ಸರಕಾರಕ್ಕೆ ಬಿಸಿತುಪ್ಪವಾಗಿ ಪರಿಣಮಿಸಿದೆ. ಈ ಬಗ್ಗೆ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿಕೆಶಿವಕುಮಾರ್ ಅವರು ಶಿವರಾಮ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವ ಸುಳಿವನ್ನು ನೀಡಿದ್ದಾರೆ.

0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search